<p><strong>ಮುಡಿಪು: </strong>ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕೊಣಾಜೆ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಸಭೆಯ ವೇಳೆ ಮಾರಾಮಾರಿ ನಡೆದು ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ನಂತರ ಕೊಣಾಜೆ ಠಾಣೆಯಲ್ಲಿ ರಾಜಿಯಲ್ಲಿ ಇತ್ಯರ್ಥಗೊಂಡಿತು.<br /> <br /> ಸಭೆಯಲ್ಲಿ ಒಂದನೇ ವಾರ್ಡ್ ಹಾಗೂ ಐದನೇ ವಾರ್ಡ್ಗೆ ಕುಡಿಯುವ ನೀರು ಪೂರೈಸುವ ವಿಚಾರದಲ್ಲಿ ಮಹಮ್ಮದ್ ಹಾಗೂ ಪಂಚಾಯಿತಿ ಸದಸ್ಯ ಸೂಫಿಕುಂಞಿ ಅವರ ನಡುವೆ ಮಾತಿಗೆ ಮಾತು ಬೆಳೆದು ನಂತರ ಹೊಡೆದಾಟ ನಡೆಯಿತು ಎನ್ನಲಾಗಿದೆ. <br /> <br /> `ನನಗೆ ಪಂಚಾಯಿತಿ ಸದಸ್ಯ ಸೂಫಿ ಕುಂಞಿ ಹಾಗೂ ಅಬ್ಬಾಸ್ ಎಂಬವರು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ~ ಎಂದು ಈ ಬಗ್ಗೆ ಮಹಮ್ಮದ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿ, ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದರು.<br /> <br /> ಇದಕ್ಕೆ ಪ್ರತಿಯಾಗಿ ಪಂಚಾಯಿತಿ ಸದಸ್ಯ ಸೂಫಿಕುಂಞಿ ಹಾಗೂ ಅಬ್ಬಾಸ್, `ನಾವು ನೀರಿನ ಪೂರೈಕೆಯನ್ನು ಸರಿಯಾಗಿ ಮಾಡಲು ತಿಳಿಸಿದ್ದಕ್ಕೆ ಮಹಮದ್ ಏಕಾಏಕಿ ನಮ್ಮ ಮೇಲೆ ಹಲ್ಲೆ ನಡೆಸಿದರು~ ಎಂದು ಕೊಣಾಜೆ ಠಾಣೆಗೆ ದೂರು ನೀಡಿದರು. ಇವರಿಬ್ಬರೂ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಗೆ ದಾಖಲಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಡಿಪು: </strong>ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕೊಣಾಜೆ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಸಭೆಯ ವೇಳೆ ಮಾರಾಮಾರಿ ನಡೆದು ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ನಂತರ ಕೊಣಾಜೆ ಠಾಣೆಯಲ್ಲಿ ರಾಜಿಯಲ್ಲಿ ಇತ್ಯರ್ಥಗೊಂಡಿತು.<br /> <br /> ಸಭೆಯಲ್ಲಿ ಒಂದನೇ ವಾರ್ಡ್ ಹಾಗೂ ಐದನೇ ವಾರ್ಡ್ಗೆ ಕುಡಿಯುವ ನೀರು ಪೂರೈಸುವ ವಿಚಾರದಲ್ಲಿ ಮಹಮ್ಮದ್ ಹಾಗೂ ಪಂಚಾಯಿತಿ ಸದಸ್ಯ ಸೂಫಿಕುಂಞಿ ಅವರ ನಡುವೆ ಮಾತಿಗೆ ಮಾತು ಬೆಳೆದು ನಂತರ ಹೊಡೆದಾಟ ನಡೆಯಿತು ಎನ್ನಲಾಗಿದೆ. <br /> <br /> `ನನಗೆ ಪಂಚಾಯಿತಿ ಸದಸ್ಯ ಸೂಫಿ ಕುಂಞಿ ಹಾಗೂ ಅಬ್ಬಾಸ್ ಎಂಬವರು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ~ ಎಂದು ಈ ಬಗ್ಗೆ ಮಹಮ್ಮದ್ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿ, ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದರು.<br /> <br /> ಇದಕ್ಕೆ ಪ್ರತಿಯಾಗಿ ಪಂಚಾಯಿತಿ ಸದಸ್ಯ ಸೂಫಿಕುಂಞಿ ಹಾಗೂ ಅಬ್ಬಾಸ್, `ನಾವು ನೀರಿನ ಪೂರೈಕೆಯನ್ನು ಸರಿಯಾಗಿ ಮಾಡಲು ತಿಳಿಸಿದ್ದಕ್ಕೆ ಮಹಮದ್ ಏಕಾಏಕಿ ನಮ್ಮ ಮೇಲೆ ಹಲ್ಲೆ ನಡೆಸಿದರು~ ಎಂದು ಕೊಣಾಜೆ ಠಾಣೆಗೆ ದೂರು ನೀಡಿದರು. ಇವರಿಬ್ಬರೂ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಗೆ ದಾಖಲಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>