<p><strong>ಸುಬ್ರಹ್ಮಣ್ಯ: </strong>ಪರಿಸರ ಸೂಕ್ಷ್ಮ ವಲಯಕ್ಕೆ ಸುಳ್ಯ ತಾಲ್ಲೂಕಿನ ಎರಡು ಗ್ರಾಮಗಳ ಸೇರ್ಪಡೆಗೆ ಕೇಂದ್ರ ಸರ್ಕಾರ ಕರಡು ಮಸೂದೆ ಜಾರಿಗೊಳಿಸಿರುವುದು ಆ ಭಾಗದ ಕೃಷಿಕರಿಗೆ ನುಂಗಲಾರದ ತುತ್ತಾಗಿದೆ. ಹಿಂದೊಮ್ಮೆ ಡಾ. ಕಸ್ತೂರಿ ರಂಗನ್ ಜಾರಿಗೆ ಮುಂದಾಗಿದ್ದ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಇದೀಗ ಸೂಕ್ಷ್ಮ ವಲಯ ವಿಸ್ತರಿಸುವ ನೆಪದಲ್ಲಿ ಇಲ್ಲಿಯ ಕೃಷಿಕರಿಗೆ ಸಂಚಕಾರ ತಂದೊಡ್ಡುವ ಕೆಲಸ ನಡೆಸಿದೆ.</p>.<p>ಕೊಡಗು ವ್ಯಾಪ್ತಿಯಲ್ಲಿರುವ ವೈಲ್ಡ್ ಲೈಫ್ ವಿಸ್ತರಿಸುವ ಪ್ರಕ್ರಿಯೆಗೆ ಕಲ್ಮಕಾರು ಮತ್ತು ಬಾಳುಗೋಡು ಗ್ರಾಮಗಳು ಸೇರ್ಪಡೆಯಾಗುತ್ತಿದ್ದು, ಕೊಲ್ಲಮೊಗ್ರು ರೈತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹಮೀದ್ ಇಡ್ನೂರು ಅವರು ಈ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.<br /> <br /> ಪುಷ್ಪಗಿರಿ ವನ್ಯಧಾಮ, ಆನೆಕಾರಿಡಾರ್, ಗ್ರೇಟರ್ ತಲಕಾವೇರಿ ಬಳಿಕ ಡಾ.ಕಸ್ತೂರಿ ರಂಗನ್ ಇತ್ಯಾದಿ ಹೆಸರನಲ್ಲಿ ಯೋಜನೆಗಳು ಈ ಹಿಂದೆ ಈ ಭಾಗಕ್ಕೆ ತಟ್ಟಿದ್ದವು, ಕೃಷಿಕರ ವಿರೋಧದಿಂದ ತಣ್ಣಗಾಗಿದ್ದವು. ಬಳಿಕ ಇದೀಗ ವೈಲ್ಡ್ಲೈಪ್ ಪ್ರದೇಶ ವಿಸ್ತರಿಸುವ ಪ್ರಕ್ರಿಯೆಗೆ ಈ ಎರಡು ಗ್ರಾಮಗಳು ಬಲಿಯಾಗುತ್ತಿವೆ, ವಲಯಕ್ಕೆ ಗ್ರಾಮಗಳ ಸೇರ್ಪಡೆಯಿಂದ ಕೃಷಿಕರು ಆತಂಕಗೊಂಡಿದ್ದು, ಹೋರಾಟಕ್ಕೆ ಚಿಂತನೆ ನಡೆಸುತ್ತಿದ್ದಾರೆ.</p>.<p>ಪುಷ್ಪಗಿರಿ ವನ್ಯಧಾಮಕ್ಕೆ ಸುರಕ್ಷತೆ ತರುವ ದೃಷ್ಟಿಯಿಂದ ಈ ಯೋಜನೆ ಸಿದ್ಧವಾಗಿದ್ದು, ಅದರ ಸುತ್ತಲ ಕೆಲ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಸೇರಿಸುವ ಯೋಜನೆ ಇದಾಗಿದೆ. ಕೇಂದ್ರದಿಂದ ಜೂನ್ 27ರಂದು ಈ ಸಂಬಂಧ ಅಧಿಸೂಚನೆ ಹೊರಬಿದ್ದಿದೆ.</p>.<p>ಈ ಕುರಿತು ಮಾಸ್ಟರ್ ಪ್ಲಾನ್ ರೂಪಿಸುವ ಹೊಣೆ ರಾಜ್ಯ ಸರ್ಕಾರದ್ದಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ಕಾರ್ಯೋನ್ಮುಖವಾಗಿರುವ ಕುರಿತು ಮಾಹಿತಿಗಳು ದೊರಕಿವೆ. ಎರಡು ವರ್ಷದೊಳಗೆ ಮಾಸ್ಟರ್ ಪ್ಲಾನ್ ರಚಿಸಬೇಕಿದೆ. ಯೋಜನೆ ಸಿದ್ಧಪಡಿಸುವಾಗ ಕೇಂದ್ರ-ರಾಜ್ಯ ಸರ್ಕಾರದ ಕಾನೂನು-ನಿಯಮಗಳ ಮೀರದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ: </strong>ಪರಿಸರ ಸೂಕ್ಷ್ಮ ವಲಯಕ್ಕೆ ಸುಳ್ಯ ತಾಲ್ಲೂಕಿನ ಎರಡು ಗ್ರಾಮಗಳ ಸೇರ್ಪಡೆಗೆ ಕೇಂದ್ರ ಸರ್ಕಾರ ಕರಡು ಮಸೂದೆ ಜಾರಿಗೊಳಿಸಿರುವುದು ಆ ಭಾಗದ ಕೃಷಿಕರಿಗೆ ನುಂಗಲಾರದ ತುತ್ತಾಗಿದೆ. ಹಿಂದೊಮ್ಮೆ ಡಾ. ಕಸ್ತೂರಿ ರಂಗನ್ ಜಾರಿಗೆ ಮುಂದಾಗಿದ್ದ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಇದೀಗ ಸೂಕ್ಷ್ಮ ವಲಯ ವಿಸ್ತರಿಸುವ ನೆಪದಲ್ಲಿ ಇಲ್ಲಿಯ ಕೃಷಿಕರಿಗೆ ಸಂಚಕಾರ ತಂದೊಡ್ಡುವ ಕೆಲಸ ನಡೆಸಿದೆ.</p>.<p>ಕೊಡಗು ವ್ಯಾಪ್ತಿಯಲ್ಲಿರುವ ವೈಲ್ಡ್ ಲೈಫ್ ವಿಸ್ತರಿಸುವ ಪ್ರಕ್ರಿಯೆಗೆ ಕಲ್ಮಕಾರು ಮತ್ತು ಬಾಳುಗೋಡು ಗ್ರಾಮಗಳು ಸೇರ್ಪಡೆಯಾಗುತ್ತಿದ್ದು, ಕೊಲ್ಲಮೊಗ್ರು ರೈತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹಮೀದ್ ಇಡ್ನೂರು ಅವರು ಈ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.<br /> <br /> ಪುಷ್ಪಗಿರಿ ವನ್ಯಧಾಮ, ಆನೆಕಾರಿಡಾರ್, ಗ್ರೇಟರ್ ತಲಕಾವೇರಿ ಬಳಿಕ ಡಾ.ಕಸ್ತೂರಿ ರಂಗನ್ ಇತ್ಯಾದಿ ಹೆಸರನಲ್ಲಿ ಯೋಜನೆಗಳು ಈ ಹಿಂದೆ ಈ ಭಾಗಕ್ಕೆ ತಟ್ಟಿದ್ದವು, ಕೃಷಿಕರ ವಿರೋಧದಿಂದ ತಣ್ಣಗಾಗಿದ್ದವು. ಬಳಿಕ ಇದೀಗ ವೈಲ್ಡ್ಲೈಪ್ ಪ್ರದೇಶ ವಿಸ್ತರಿಸುವ ಪ್ರಕ್ರಿಯೆಗೆ ಈ ಎರಡು ಗ್ರಾಮಗಳು ಬಲಿಯಾಗುತ್ತಿವೆ, ವಲಯಕ್ಕೆ ಗ್ರಾಮಗಳ ಸೇರ್ಪಡೆಯಿಂದ ಕೃಷಿಕರು ಆತಂಕಗೊಂಡಿದ್ದು, ಹೋರಾಟಕ್ಕೆ ಚಿಂತನೆ ನಡೆಸುತ್ತಿದ್ದಾರೆ.</p>.<p>ಪುಷ್ಪಗಿರಿ ವನ್ಯಧಾಮಕ್ಕೆ ಸುರಕ್ಷತೆ ತರುವ ದೃಷ್ಟಿಯಿಂದ ಈ ಯೋಜನೆ ಸಿದ್ಧವಾಗಿದ್ದು, ಅದರ ಸುತ್ತಲ ಕೆಲ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಸೇರಿಸುವ ಯೋಜನೆ ಇದಾಗಿದೆ. ಕೇಂದ್ರದಿಂದ ಜೂನ್ 27ರಂದು ಈ ಸಂಬಂಧ ಅಧಿಸೂಚನೆ ಹೊರಬಿದ್ದಿದೆ.</p>.<p>ಈ ಕುರಿತು ಮಾಸ್ಟರ್ ಪ್ಲಾನ್ ರೂಪಿಸುವ ಹೊಣೆ ರಾಜ್ಯ ಸರ್ಕಾರದ್ದಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ಕಾರ್ಯೋನ್ಮುಖವಾಗಿರುವ ಕುರಿತು ಮಾಹಿತಿಗಳು ದೊರಕಿವೆ. ಎರಡು ವರ್ಷದೊಳಗೆ ಮಾಸ್ಟರ್ ಪ್ಲಾನ್ ರಚಿಸಬೇಕಿದೆ. ಯೋಜನೆ ಸಿದ್ಧಪಡಿಸುವಾಗ ಕೇಂದ್ರ-ರಾಜ್ಯ ಸರ್ಕಾರದ ಕಾನೂನು-ನಿಯಮಗಳ ಮೀರದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>