ಕೊಡಗು ವ್ಯಾಪ್ತಿಯಲ್ಲಿರುವ ವೈಲ್ಡ್ ಲೈಫ್ ವಿಸ್ತರಿಸುವ ಪ್ರಕ್ರಿಯೆಗೆ ಕಲ್ಮಕಾರು ಮತ್ತು ಬಾಳುಗೋಡು ಗ್ರಾಮಗಳು ಸೇರ್ಪಡೆಯಾಗುತ್ತಿದ್ದು, ಕೊಲ್ಲಮೊಗ್ರು ರೈತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹಮೀದ್ ಇಡ್ನೂರು ಅವರು ಈ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
ಪುಷ್ಪಗಿರಿ ವನ್ಯಧಾಮ, ಆನೆಕಾರಿಡಾರ್, ಗ್ರೇಟರ್ ತಲಕಾವೇರಿ ಬಳಿಕ ಡಾ.ಕಸ್ತೂರಿ ರಂಗನ್ ಇತ್ಯಾದಿ ಹೆಸರನಲ್ಲಿ ಯೋಜನೆಗಳು ಈ ಹಿಂದೆ ಈ ಭಾಗಕ್ಕೆ ತಟ್ಟಿದ್ದವು, ಕೃಷಿಕರ ವಿರೋಧದಿಂದ ತಣ್ಣಗಾಗಿದ್ದವು. ಬಳಿಕ ಇದೀಗ ವೈಲ್ಡ್ಲೈಪ್ ಪ್ರದೇಶ ವಿಸ್ತರಿಸುವ ಪ್ರಕ್ರಿಯೆಗೆ ಈ ಎರಡು ಗ್ರಾಮಗಳು ಬಲಿಯಾಗುತ್ತಿವೆ, ವಲಯಕ್ಕೆ ಗ್ರಾಮಗಳ ಸೇರ್ಪಡೆಯಿಂದ ಕೃಷಿಕರು ಆತಂಕಗೊಂಡಿದ್ದು, ಹೋರಾಟಕ್ಕೆ ಚಿಂತನೆ ನಡೆಸುತ್ತಿದ್ದಾರೆ.