ಮಂಗಳೂರು: ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಪಾಲಿಸುವಲ್ಲಿ ವಿಫಲವಾಗಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಈಗ ಚುನಾವಣೆಯ ಸಂದರ್ಭದಲ್ಲಿ ಪೊಲೀಸ್ ಬಲ ಪ್ರಯೋಗಿಸಿ ವಿಸ್ತರಣಾ ಕಾಮಗಾರಿ ಆರಂಭಿಸಲು ಪ್ರಯತ್ನಿಸುತ್ತಿದೆ ಎಂದು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.