<p><strong>ಮಂಗಳೂರು:</strong> ಇಲ್ಲಿನ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆಯಲ್ಲಿ ಭಾಗವಹಿಸಿದ್ದ ಪಕ್ಷದ ಹಿರಿಯ ನಾಯಕ ಬಿ.ಜನಾರ್ದನ ಅವರಿಗೆ ಜೈಕಾರಗಳ ಸುರಿಮಳೆಯೇ ದೊರೆಯಿತು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆಯ ಮೊದಲ ಪ್ರತಿಯನ್ನು ಪೂಜಾರಿ ಅವರಿಗೆ ನೀಡಿ ಗೌರವಿಸಿದರು.</p>.<p>ಅನಾರೋಗ್ಯದ ಕಾರಣದಿಂದ ವಿಶ್ರಾಂತಿಯಲ್ಲಿರುವ ಪೂಜಾರಿಯವರು ಹಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಎಐಸಿಸಿ ಅಧ್ಯಕ್ಷರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅವರಿಗೆ ಆಹ್ವಾನ ನೀಡಿತ್ತು.</p>.<p>ಶುಕ್ರವಾರ ಬೆಳಿಗ್ಗೆ 9.15ರ ವೇಳೆಗೆ ಪೂಜಾರಿಯವರು ಸಭಾಂಗಣಕ್ಕೆ ಬಂದಾಗ ಅಲ್ಲಿದ್ದ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಎದ್ದು ನಿಂತು ಗೌರವ ಸಲ್ಲಿಸಿದರು.</p>.<p>ಅಕ್ಕಿಯ ಕೊಳಗದಲ್ಲಿದ್ದ ಪ್ರಣಾಳಿಕೆಯನ್ನು ಹೊರತೆಗೆಯುವ ಮೂಲಕ ಬಿಡುಗಡೆ ಮಾಡಿದ ರಾಹುಲ್, ಮೊದಲ ಪ್ರತಿಯನ್ನು ಪೂಜಾರಿಯವರ ಕೈಗಿತ್ತರು.</p>.<p>ಸಭೆಯಲ್ಲಿ ಮಾತನಾಡಿದವರು ಪೂಜಾರಿಯವರ ಹೆಸರು ಪ್ರಸ್ತಾಪಿಸಿದಾಗಲೆಲ್ಲ ಸಭಾಂಗಣದಲ್ಲಿ ಜೈಕಾರಗಳ ಸುರಿಮಳೆಯೇ ಆಯಿತು. ಸಭೆ ಮುಗಿಯುತ್ತಿದ್ದಂತೆ ರಾಹುಲ್ ಅವರೇ ಪೂಜಾರಿಯವರ ಕೈಹಿಡಿದು ವೇದಿಕೆಯಿಂದ ಕೆಳಕ್ಕಿಳಿಯಲು ನೆರವಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಇಲ್ಲಿನ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆಯಲ್ಲಿ ಭಾಗವಹಿಸಿದ್ದ ಪಕ್ಷದ ಹಿರಿಯ ನಾಯಕ ಬಿ.ಜನಾರ್ದನ ಅವರಿಗೆ ಜೈಕಾರಗಳ ಸುರಿಮಳೆಯೇ ದೊರೆಯಿತು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆಯ ಮೊದಲ ಪ್ರತಿಯನ್ನು ಪೂಜಾರಿ ಅವರಿಗೆ ನೀಡಿ ಗೌರವಿಸಿದರು.</p>.<p>ಅನಾರೋಗ್ಯದ ಕಾರಣದಿಂದ ವಿಶ್ರಾಂತಿಯಲ್ಲಿರುವ ಪೂಜಾರಿಯವರು ಹಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಎಐಸಿಸಿ ಅಧ್ಯಕ್ಷರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅವರಿಗೆ ಆಹ್ವಾನ ನೀಡಿತ್ತು.</p>.<p>ಶುಕ್ರವಾರ ಬೆಳಿಗ್ಗೆ 9.15ರ ವೇಳೆಗೆ ಪೂಜಾರಿಯವರು ಸಭಾಂಗಣಕ್ಕೆ ಬಂದಾಗ ಅಲ್ಲಿದ್ದ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಎದ್ದು ನಿಂತು ಗೌರವ ಸಲ್ಲಿಸಿದರು.</p>.<p>ಅಕ್ಕಿಯ ಕೊಳಗದಲ್ಲಿದ್ದ ಪ್ರಣಾಳಿಕೆಯನ್ನು ಹೊರತೆಗೆಯುವ ಮೂಲಕ ಬಿಡುಗಡೆ ಮಾಡಿದ ರಾಹುಲ್, ಮೊದಲ ಪ್ರತಿಯನ್ನು ಪೂಜಾರಿಯವರ ಕೈಗಿತ್ತರು.</p>.<p>ಸಭೆಯಲ್ಲಿ ಮಾತನಾಡಿದವರು ಪೂಜಾರಿಯವರ ಹೆಸರು ಪ್ರಸ್ತಾಪಿಸಿದಾಗಲೆಲ್ಲ ಸಭಾಂಗಣದಲ್ಲಿ ಜೈಕಾರಗಳ ಸುರಿಮಳೆಯೇ ಆಯಿತು. ಸಭೆ ಮುಗಿಯುತ್ತಿದ್ದಂತೆ ರಾಹುಲ್ ಅವರೇ ಪೂಜಾರಿಯವರ ಕೈಹಿಡಿದು ವೇದಿಕೆಯಿಂದ ಕೆಳಕ್ಕಿಳಿಯಲು ನೆರವಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>