<p><strong>ಮೂಡುಬಿದಿರೆ:</strong> ಇಲ್ಲಿನ ಬಸದಿಗಳಲ್ಲಿರುವ ಬೆಲೆಬಾಳುವ ಸ್ವತ್ತುಗಳ ಸಂರಕ್ಷಣೆಯ ದೃಷ್ಟಿಯಿಂದ ಎಲ್ಲಾ ಬಸದಿಗಳಿಗೆ ಆಧುನಿಕ ರೀತಿಯ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಎಂ. ವೀರಪ್ಪ ಮೊಯಿಲಿ ಹೇಳಿದರು.<br /> <br /> ಈಚೆಗೆ ಬೆಲೆಬಾಳುವ ವಿಗ್ರಹಗಳು ಕಳ್ಳತನವಾದ ಸಿದ್ಧಾಂತ ಮಂದಿರಕ್ಕೆ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದರು.<br /> <br /> ಸಿದ್ಧಾಂತ ಮಂದಿರದಲ್ಲಿ ಭದ್ರತಾ ವ್ಯವಸ್ಥೆಯ ಲೋಪ ಇದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದರು. ಪುರಾತನ ವಿಗ್ರಹಗಳು ಕಳವಾಗಿರುವುದು ದುರದೃಷ್ಟಕರ. ಕಳವಾದ ಸ್ವತ್ತುಗಳನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿದ ಪೊಲೀಸರ ಕಾರ್ಯ ಶ್ಲಾಘನಾರ್ಹ ಎಂದರು.<br /> <br /> ಇಲ್ಲಿನ ಬಸದಿಗಳ ಸಂರಕ್ಷಣೆ ದೃಷ್ಟಿಯಿಂದ ಪೊಲೀಸ್ ಔಟ್ ಪೋಸ್ಟ್ ಸೇರಿದಂತೆ ಆಧುನಿಕ ರೀತಿಯ ಭದ್ರತಾ ವ್ಯವಸ್ಥೆ ಒದಗಿಸಲು ಸರಕಾರ ಕ್ರಮ ಕೈಗೊಳ್ಳಲಿದೆ. ಪುರಾತತ್ವ ಇಲಾಖೆಯ ಸಹಕಾರವನ್ನು ಪಡೆಯಲಾಗುವುದು. ಅಲ್ಲಿನವರೆಗೆ ಬಸದಿಗಳಿಗೆ ಪೊಲೀಸ್ ರಕ್ಷಣೆ ಮುಂದುವರಿಯಲಿದೆ ಎಂದರು.</p>.<p>ನಿಡ್ಡೋಡಿಯ ಪ್ರಸ್ತಾವಿತ ಉಷ್ಣವಿದ್ಯುತ್ ಸ್ಥಾವರದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಕೇಂದ್ರ ಸರ್ಕಾರದ ಮುಂದೆ ಈ ಪ್ರಸ್ತಾಪ ಇಲ್ಲದಿರುವುದರಿಂದ ನಾನು ಪ್ರತಿಕ್ರಿಯಿಸಲಾರೆ ಎಂದು ಚುಟುಕಾಗಿ ಉತ್ತರಿಸಿದರು. ಕಳವಾದ ವಿಗ್ರಹಗಳ ಚಿತ್ರಗಳನ್ನು ಜೈನಮಠದ ಭಟ್ಟಾರಕ ಚಾರುಕೀರ್ತಿ ಶ್ರಿಗಳು ವೀರಪ್ಪ ಮೊಯಿಲಿಯವರಿಗೆ ತೋರಿಸಿದರು.<br /> <br /> ಯುವಜನಸೇವೆ ಮತ್ತು ಮೀನುಗಾರಿಕೆ ಸಚಿವ ಅಭಯಚಂದ್ರ ಜೈನ್, ಧರ್ಮಸ್ಥಳದ ಸುರೇಂದ್ರ ಕುಮಾರ್, ಜಿಲ್ಲಾಧಿಕಾರಿ ಎನ್. ಪ್ರಕಾಶ್, ಸಹಾಯಕ ಕಮಿಷನರ್ ಸದಾಶಿವ ಪ್ರಭು, ಪಟ್ಣಶೆಟ್ಟಿ ಸುಧೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್, ಸುನೀಲ್ ಕೀರ್ತಿ ಎಂ ಮತ್ತಿತರರು ಜತೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಇಲ್ಲಿನ ಬಸದಿಗಳಲ್ಲಿರುವ ಬೆಲೆಬಾಳುವ ಸ್ವತ್ತುಗಳ ಸಂರಕ್ಷಣೆಯ ದೃಷ್ಟಿಯಿಂದ ಎಲ್ಲಾ ಬಸದಿಗಳಿಗೆ ಆಧುನಿಕ ರೀತಿಯ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಎಂ. ವೀರಪ್ಪ ಮೊಯಿಲಿ ಹೇಳಿದರು.<br /> <br /> ಈಚೆಗೆ ಬೆಲೆಬಾಳುವ ವಿಗ್ರಹಗಳು ಕಳ್ಳತನವಾದ ಸಿದ್ಧಾಂತ ಮಂದಿರಕ್ಕೆ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದರು.<br /> <br /> ಸಿದ್ಧಾಂತ ಮಂದಿರದಲ್ಲಿ ಭದ್ರತಾ ವ್ಯವಸ್ಥೆಯ ಲೋಪ ಇದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದರು. ಪುರಾತನ ವಿಗ್ರಹಗಳು ಕಳವಾಗಿರುವುದು ದುರದೃಷ್ಟಕರ. ಕಳವಾದ ಸ್ವತ್ತುಗಳನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿದ ಪೊಲೀಸರ ಕಾರ್ಯ ಶ್ಲಾಘನಾರ್ಹ ಎಂದರು.<br /> <br /> ಇಲ್ಲಿನ ಬಸದಿಗಳ ಸಂರಕ್ಷಣೆ ದೃಷ್ಟಿಯಿಂದ ಪೊಲೀಸ್ ಔಟ್ ಪೋಸ್ಟ್ ಸೇರಿದಂತೆ ಆಧುನಿಕ ರೀತಿಯ ಭದ್ರತಾ ವ್ಯವಸ್ಥೆ ಒದಗಿಸಲು ಸರಕಾರ ಕ್ರಮ ಕೈಗೊಳ್ಳಲಿದೆ. ಪುರಾತತ್ವ ಇಲಾಖೆಯ ಸಹಕಾರವನ್ನು ಪಡೆಯಲಾಗುವುದು. ಅಲ್ಲಿನವರೆಗೆ ಬಸದಿಗಳಿಗೆ ಪೊಲೀಸ್ ರಕ್ಷಣೆ ಮುಂದುವರಿಯಲಿದೆ ಎಂದರು.</p>.<p>ನಿಡ್ಡೋಡಿಯ ಪ್ರಸ್ತಾವಿತ ಉಷ್ಣವಿದ್ಯುತ್ ಸ್ಥಾವರದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಕೇಂದ್ರ ಸರ್ಕಾರದ ಮುಂದೆ ಈ ಪ್ರಸ್ತಾಪ ಇಲ್ಲದಿರುವುದರಿಂದ ನಾನು ಪ್ರತಿಕ್ರಿಯಿಸಲಾರೆ ಎಂದು ಚುಟುಕಾಗಿ ಉತ್ತರಿಸಿದರು. ಕಳವಾದ ವಿಗ್ರಹಗಳ ಚಿತ್ರಗಳನ್ನು ಜೈನಮಠದ ಭಟ್ಟಾರಕ ಚಾರುಕೀರ್ತಿ ಶ್ರಿಗಳು ವೀರಪ್ಪ ಮೊಯಿಲಿಯವರಿಗೆ ತೋರಿಸಿದರು.<br /> <br /> ಯುವಜನಸೇವೆ ಮತ್ತು ಮೀನುಗಾರಿಕೆ ಸಚಿವ ಅಭಯಚಂದ್ರ ಜೈನ್, ಧರ್ಮಸ್ಥಳದ ಸುರೇಂದ್ರ ಕುಮಾರ್, ಜಿಲ್ಲಾಧಿಕಾರಿ ಎನ್. ಪ್ರಕಾಶ್, ಸಹಾಯಕ ಕಮಿಷನರ್ ಸದಾಶಿವ ಪ್ರಭು, ಪಟ್ಣಶೆಟ್ಟಿ ಸುಧೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್, ಸುನೀಲ್ ಕೀರ್ತಿ ಎಂ ಮತ್ತಿತರರು ಜತೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>