<p><strong>ಮಂಗಳೂರು:</strong> ಕರಾವಳಿಯ ಮೂರು ಜಿಲ್ಲೆಗಳಲ್ಲಿ ನೆರೆಯ ತಮಿಳುನಾಡು ಮೀನುಗಾರರು ಅಕ್ರಮವಾಗಿ ಬೊಂಡಾಸ್ ಮೀನುಗಾರಿಕೆ ಮಾಡುತ್ತಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ವಾಸುದೇವ ಬೋಳೂರು ಒತ್ತಾಯಿಸಿದ್ದಾರೆ.<br /> <br /> ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಂತೆ ಕರ್ನಾಟಕವೂ ಸಹ ಅಕ್ರಮ ಮೀನುಗಾರಿಕೆ ನಿಷೇಧಿಸಿದೆ. ಆದರೆ ನಿಷೇಧದ ಅವಧಿಯಲ್ಲಿ ತಮಿಳುನಾಡು ಮೀನುಗಾರರು ಕಪ್ಪೆ ಬೊಂಡಾಸ್ ಮೀನುಗಳನ್ನು ರಾಜಾರೋಷವಾಗಿ ಹಿಡಿಯುವಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.<br /> <br /> ಅಕ್ಟೋಬರ್ನಿಂದ ಫೆಬ್ರುವರಿವರೆಗೆ ಬೊಂಡಾಸ್ ಮೀನುಗಳು ಮೊಟ್ಟೆ ಇಡುತ್ತಿದ್ದು, ಈ ಸಮಯದಲ್ಲೇ ಮೀನುಗಾರಿಕೆ ಮಾಡುವುದರಿಂದ ಅವುಗಳ ಸಂತತಿ ನಶಿಸಿ ಮೀನಿನ ಕ್ಷಾಮಕ್ಕೆ ಕಾರಣವಾಗುತ್ತದೆ. ಮೀನುಗಾರರೊಳಗಿನ ಸೌಹಾರ್ದ ಕಾಪಾಡಲು ಹೊರ ರಾಜ್ಯದವರು ಕರ್ನಾಟಕದ ನಿರ್ಣಯವನ್ನು ಗೌರವಿಸಬೇಕು.</p>.<p>ಪರಿಸ್ಥಿತಿ ಹೀಗೆಯೇ ಮುಂದುವರಿದರೆ 3 ಜಿಲ್ಲೆಗಳ 61 ಮೀನುಗಾರರ ಸಂಘಟನೆಯಾಗಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕರಾವಳಿಯ ಮೂರು ಜಿಲ್ಲೆಗಳಲ್ಲಿ ನೆರೆಯ ತಮಿಳುನಾಡು ಮೀನುಗಾರರು ಅಕ್ರಮವಾಗಿ ಬೊಂಡಾಸ್ ಮೀನುಗಾರಿಕೆ ಮಾಡುತ್ತಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ವಾಸುದೇವ ಬೋಳೂರು ಒತ್ತಾಯಿಸಿದ್ದಾರೆ.<br /> <br /> ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಂತೆ ಕರ್ನಾಟಕವೂ ಸಹ ಅಕ್ರಮ ಮೀನುಗಾರಿಕೆ ನಿಷೇಧಿಸಿದೆ. ಆದರೆ ನಿಷೇಧದ ಅವಧಿಯಲ್ಲಿ ತಮಿಳುನಾಡು ಮೀನುಗಾರರು ಕಪ್ಪೆ ಬೊಂಡಾಸ್ ಮೀನುಗಳನ್ನು ರಾಜಾರೋಷವಾಗಿ ಹಿಡಿಯುವಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.<br /> <br /> ಅಕ್ಟೋಬರ್ನಿಂದ ಫೆಬ್ರುವರಿವರೆಗೆ ಬೊಂಡಾಸ್ ಮೀನುಗಳು ಮೊಟ್ಟೆ ಇಡುತ್ತಿದ್ದು, ಈ ಸಮಯದಲ್ಲೇ ಮೀನುಗಾರಿಕೆ ಮಾಡುವುದರಿಂದ ಅವುಗಳ ಸಂತತಿ ನಶಿಸಿ ಮೀನಿನ ಕ್ಷಾಮಕ್ಕೆ ಕಾರಣವಾಗುತ್ತದೆ. ಮೀನುಗಾರರೊಳಗಿನ ಸೌಹಾರ್ದ ಕಾಪಾಡಲು ಹೊರ ರಾಜ್ಯದವರು ಕರ್ನಾಟಕದ ನಿರ್ಣಯವನ್ನು ಗೌರವಿಸಬೇಕು.</p>.<p>ಪರಿಸ್ಥಿತಿ ಹೀಗೆಯೇ ಮುಂದುವರಿದರೆ 3 ಜಿಲ್ಲೆಗಳ 61 ಮೀನುಗಾರರ ಸಂಘಟನೆಯಾಗಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>