<p>ಗಂಗೊಳ್ಳಿ (ಬೈಂದೂರು): ಪಿಯುಸಿಯಲ್ಲಿ ವಿಜ್ಞಾನ ಅಧ್ಯಯನ ಮಾಡುವವರು ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದ ಗುರಿ ಹೊಂದಿರುವ ವಿದ್ಯಮಾನ ದೇಶದ ಭವಿಷ್ಯದ ದೃಷ್ಟಿಯಿಂದ ಸರಿ ಎನಿಸದು. ಅದರಿಂದ ವಿಜ್ಞಾನ ಕ್ಷೇತ್ರ ಬರಡಾಗುವ ಅಪಾಯವಿದೆ.<br /> <br /> ನೈಜ ಪ್ರತಿಭೆ ಹೊಂದಿರುವವರು ಮೂಲ ವಿಜ್ಞಾನ ಕಲಿಕೆಯನ್ನು ತೊರೆಯಬಾರದು. ಶಿಕ್ಷಣ ಸಂಸ್ಥೆಗಳಲ್ಲಿ ಅದಕ್ಕೆ ಪೂರಕ ವಾತಾವರಣ ಸೃಷ್ಟಿಸಬೇಕು. ಆ ನಿಟ್ಟಿನಲ್ಲಿ ವಿಜ್ಞಾನ ಮಾದರಿಗಳ ತಯಾರಿಗೆ ನೀಡುವ ಪ್ರೋತ್ಸಾಹ ಉತ್ತಮ ಹೆಜ್ಜೆ ಎಂದು ಸ್ಥಳೀಯ ವೈದ್ಯ ಡಾ. ಮೋಹನದಾಸ ಪೈ ಹೇಳಿದರು.<br /> <br /> ಇಲ್ಲಿನ ಎಸ್ವಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಎರಡು ದಿನಗಳ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಪ್ರಾಂಶುಪಾಲರಾದ ಸರಸ್ವತಿ ಎಸ್. ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಒಟ್ಟು 200 ವಿದ್ಯಾರ್ಥಿಗಳು ರಚಿಸಿದ್ದ ಹಾಗೂ ಸಂಗ್ರಹಿಸಿದ್ದ ಮಾದರಿಗಳಿದ್ದ ಈ ಪ್ರದರ್ಶನವನ್ನು ಇತ್ತೀಚೆಗೆ ನಿಧನರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸ್ಮೃತಿಗೆ ಅರ್ಪಿಸಲಾಯಿತು.<br /> <br /> ಉಪನ್ಯಾಸಕ ಆರ್. ಎನ್. ರೇವಣ್ಕರ್ ಸ್ವಾಗತಿಸಿದರು. ಮುಖ್ಯಶಿಕ್ಷಕ ವಾಮನದಾಸ ಭಟ್ ವಂದಿಸಿದರು. ಎಚ್. ಸುಜಯೀಂದ್ರ ಹಂದೆ ನಿರೂಪಿಸಿದರು. ಆಡಳಿತ ಸಮಿತಿ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗೊಳ್ಳಿ (ಬೈಂದೂರು): ಪಿಯುಸಿಯಲ್ಲಿ ವಿಜ್ಞಾನ ಅಧ್ಯಯನ ಮಾಡುವವರು ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದ ಗುರಿ ಹೊಂದಿರುವ ವಿದ್ಯಮಾನ ದೇಶದ ಭವಿಷ್ಯದ ದೃಷ್ಟಿಯಿಂದ ಸರಿ ಎನಿಸದು. ಅದರಿಂದ ವಿಜ್ಞಾನ ಕ್ಷೇತ್ರ ಬರಡಾಗುವ ಅಪಾಯವಿದೆ.<br /> <br /> ನೈಜ ಪ್ರತಿಭೆ ಹೊಂದಿರುವವರು ಮೂಲ ವಿಜ್ಞಾನ ಕಲಿಕೆಯನ್ನು ತೊರೆಯಬಾರದು. ಶಿಕ್ಷಣ ಸಂಸ್ಥೆಗಳಲ್ಲಿ ಅದಕ್ಕೆ ಪೂರಕ ವಾತಾವರಣ ಸೃಷ್ಟಿಸಬೇಕು. ಆ ನಿಟ್ಟಿನಲ್ಲಿ ವಿಜ್ಞಾನ ಮಾದರಿಗಳ ತಯಾರಿಗೆ ನೀಡುವ ಪ್ರೋತ್ಸಾಹ ಉತ್ತಮ ಹೆಜ್ಜೆ ಎಂದು ಸ್ಥಳೀಯ ವೈದ್ಯ ಡಾ. ಮೋಹನದಾಸ ಪೈ ಹೇಳಿದರು.<br /> <br /> ಇಲ್ಲಿನ ಎಸ್ವಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಎರಡು ದಿನಗಳ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಪ್ರಾಂಶುಪಾಲರಾದ ಸರಸ್ವತಿ ಎಸ್. ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಒಟ್ಟು 200 ವಿದ್ಯಾರ್ಥಿಗಳು ರಚಿಸಿದ್ದ ಹಾಗೂ ಸಂಗ್ರಹಿಸಿದ್ದ ಮಾದರಿಗಳಿದ್ದ ಈ ಪ್ರದರ್ಶನವನ್ನು ಇತ್ತೀಚೆಗೆ ನಿಧನರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸ್ಮೃತಿಗೆ ಅರ್ಪಿಸಲಾಯಿತು.<br /> <br /> ಉಪನ್ಯಾಸಕ ಆರ್. ಎನ್. ರೇವಣ್ಕರ್ ಸ್ವಾಗತಿಸಿದರು. ಮುಖ್ಯಶಿಕ್ಷಕ ವಾಮನದಾಸ ಭಟ್ ವಂದಿಸಿದರು. ಎಚ್. ಸುಜಯೀಂದ್ರ ಹಂದೆ ನಿರೂಪಿಸಿದರು. ಆಡಳಿತ ಸಮಿತಿ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>