ಬೆಳ್ತಂಗಡಿ: ರಾಜ್ಯದ್ಲ್ಲಲಿ ಪ್ರಸಕ್ತ ಆರ್ಥಿಕ ವರ್ಷ ಐದು ಲಕ್ಷ ಆಶ್ರಯ ಮನೆಗಳನ್ನು ನಿರ್ಮಿಸಲಾಗುವುದು. ಇಂದಿರಾ ವಸತಿ ಯೋಜನೆಯಡಿ ಒಂದು ಲಕ್ಷ ಮನೆ ಹಾಗೂ ಬಸವ ಸಮಿತಿ ವಸತಿ ಯೋಜನೆಯಡಿಯಲ್ಲಿ ನಾಲ್ಕು ಲಕ್ಷ ಮನೆ- ಹೀಗೆ ಒಟ್ಟು ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ವಸತಿ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
ಧರ್ಮಸ್ಥಳದಲ್ಲಿ ಗುರುವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. `ನನ್ನ ಮನೆ, ನನ್ನ ಸೊತ್ತು~ ಕಾರ್ಯಕ್ರಮದಡಿ ಈಗಾಗಲೆ 20 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ನಕ್ಸಲ್ ಪೀಡಿತ 12 ಗ್ರಾಮಗಳ ವ್ಯಾಪ್ತಿಯಲ್ಲಿರುವ ವಸತಿರಹಿತರಿಗೆ ಸರ್ಕಾರದ ವತಿಯಿಂದ ಅವರು ವಾಸ್ತವ್ಯ ಇರುವ ಸ್ಥಳದಲ್ಲೇ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದ ಸಚಿವರು ಈ ಬಗ್ಗೆ ತಕ್ಷಣ ಪ್ರಸ್ತಾವನೆ ಕಳುಹಿಸಿ ಕೊಡುವಂತೆ ತಹಸೀಲ್ದಾರ್ಗೆ ಆದೇಶ ನೀಡಿದರು.
ದೇವರ ದರ್ಶನದ ನಂತರ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರೊಡನೆ ಸಚಿವರು ಮಾತುಕತೆ ನಡೆಸಿದರು. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.