<p><strong>ಮಂಗಳೂರು:</strong> ‘ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳಿಗೆ ಜೋತು ಬೀಳದೆ, ಪಠ್ಯಕ್ಕೆ ಹೊರತಾದ ಸಾಹಿತ್ಯ ಕಥರಿಗಳನ್ನೂ ಓದಿ ಜ್ಞಾನ ಸಂಪಾದಿಸಬೇಕು. ಸಾಹಿತ್ಯ ಕೃತಿಗಳು ಕೀಳರಿಮೆಗಳನ್ನು ಹೋಗಲಾಡಿಸಿ ಆತ್ಮವಿಶ್ವಾಸ ಮೂಡಿಸಲು ನೆರವಾಗುತ್ತವೆ’ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಹೇಳಿದರು.</p><p>ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನಗರದ ಬದ್ರಿಯಾ ಶೈಕ್ಷಣಿಕ ಸಂಸ್ಥೆಗಳ ಸಹಯೋಗದಲ್ಲಿ ಬದ್ರಿಯಾ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಬ್ಯಾರಿ ಸಾಹಿತ್ಯ ಕಮ್ಮಟ’ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿದರೆ ಮಾತ್ರ ಸಾಧಕರಾಗಬಹುದು. ಕನಸುಗಾರರಾಗಿ ಬೆಳೆಯಬೇಕಾದ ಯುವಜನಾಂಗ ಮಾತೃ ಭಾಷೆಯ ಸೇವೆಗೂ ಮುಂದಾಗಬೇಕು’ ಎಂದರು.</p><p>ಬದ್ರಿಯಾ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಸೀಮಾ ಎ.ಕೆ. ಮುಖ್ಯ ಅತಿಥಿಯಾಗಿದ್ದರು. ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಉಳ್ಳಾಲ ಘಟಕದ ಅಧ್ಯಕ್ಷೆ ಸಿಹಾನ ಬಿ.ಎಂ. ಸಂಪನ್ಮೂಲ ವ್ಯಕಿಯಾಗಿ ಬ್ಯಾರಿ ಸಾಹಿತ್ಯ ಕಮ್ಮಟ ನಡೆಸಿಕೊಟ್ಟರು.</p><p>ಕಾರ್ಯಕ್ರಮದ ಸಂಚಾಲಕಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯೆ ಶಮೀರಾ ಜಹಾನ್ ಸ್ವಾಗತಿಸಿದರು. ಅಕಾಡೆಮಿ ಸದಸ್ಯ ಯು. ಎಚ್. ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಅಬ್ದುಲ್ ರಹೀಮ್ ವಂದಿಸಿದರು.</p><p>ಅಕಾಡೆಮಿ ಸದಸ್ಯರಾದ ಹಾಜಿ ಯು.ಕೆ. ಹಮೀದ್, ಹಮೀದ್ ಹಸನ್ ಮಾಡೂರು, ಬಿ.ಎಸ್. ಮುಹಮ್ಮದ್, ಮಾಜಿ ಸದಸ್ಯ ಹುಸೈನ್ ಕಾಟಿಪಳ್ಳ, ಬದ್ರಿಯಾ ಪ.ಪೂ ಕಾಲೇಜಿನ ಮಾಜಿ ಪ್ರಾಂಶುಪಾಲ ಯೂಸುಫ್ ಡಿ., ಪ್ರಾಧ್ಯಾಪಕ ಸಫ್ವಾನ್ ಕೆ., ಪುಟ್ಟಸ್ವಾಮಿ ಹಾಗೂ ಯಾಕೂಬ್ ಕಲ್ಲರ್ಪೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳಿಗೆ ಜೋತು ಬೀಳದೆ, ಪಠ್ಯಕ್ಕೆ ಹೊರತಾದ ಸಾಹಿತ್ಯ ಕಥರಿಗಳನ್ನೂ ಓದಿ ಜ್ಞಾನ ಸಂಪಾದಿಸಬೇಕು. ಸಾಹಿತ್ಯ ಕೃತಿಗಳು ಕೀಳರಿಮೆಗಳನ್ನು ಹೋಗಲಾಡಿಸಿ ಆತ್ಮವಿಶ್ವಾಸ ಮೂಡಿಸಲು ನೆರವಾಗುತ್ತವೆ’ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಹೇಳಿದರು.</p><p>ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನಗರದ ಬದ್ರಿಯಾ ಶೈಕ್ಷಣಿಕ ಸಂಸ್ಥೆಗಳ ಸಹಯೋಗದಲ್ಲಿ ಬದ್ರಿಯಾ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಬ್ಯಾರಿ ಸಾಹಿತ್ಯ ಕಮ್ಮಟ’ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿದರೆ ಮಾತ್ರ ಸಾಧಕರಾಗಬಹುದು. ಕನಸುಗಾರರಾಗಿ ಬೆಳೆಯಬೇಕಾದ ಯುವಜನಾಂಗ ಮಾತೃ ಭಾಷೆಯ ಸೇವೆಗೂ ಮುಂದಾಗಬೇಕು’ ಎಂದರು.</p><p>ಬದ್ರಿಯಾ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಸೀಮಾ ಎ.ಕೆ. ಮುಖ್ಯ ಅತಿಥಿಯಾಗಿದ್ದರು. ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಉಳ್ಳಾಲ ಘಟಕದ ಅಧ್ಯಕ್ಷೆ ಸಿಹಾನ ಬಿ.ಎಂ. ಸಂಪನ್ಮೂಲ ವ್ಯಕಿಯಾಗಿ ಬ್ಯಾರಿ ಸಾಹಿತ್ಯ ಕಮ್ಮಟ ನಡೆಸಿಕೊಟ್ಟರು.</p><p>ಕಾರ್ಯಕ್ರಮದ ಸಂಚಾಲಕಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯೆ ಶಮೀರಾ ಜಹಾನ್ ಸ್ವಾಗತಿಸಿದರು. ಅಕಾಡೆಮಿ ಸದಸ್ಯ ಯು. ಎಚ್. ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಅಬ್ದುಲ್ ರಹೀಮ್ ವಂದಿಸಿದರು.</p><p>ಅಕಾಡೆಮಿ ಸದಸ್ಯರಾದ ಹಾಜಿ ಯು.ಕೆ. ಹಮೀದ್, ಹಮೀದ್ ಹಸನ್ ಮಾಡೂರು, ಬಿ.ಎಸ್. ಮುಹಮ್ಮದ್, ಮಾಜಿ ಸದಸ್ಯ ಹುಸೈನ್ ಕಾಟಿಪಳ್ಳ, ಬದ್ರಿಯಾ ಪ.ಪೂ ಕಾಲೇಜಿನ ಮಾಜಿ ಪ್ರಾಂಶುಪಾಲ ಯೂಸುಫ್ ಡಿ., ಪ್ರಾಧ್ಯಾಪಕ ಸಫ್ವಾನ್ ಕೆ., ಪುಟ್ಟಸ್ವಾಮಿ ಹಾಗೂ ಯಾಕೂಬ್ ಕಲ್ಲರ್ಪೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>