<p><span style="font-size: 26px;"><strong>ಕೆರೆಕಾಡು (ಮೂಲ್ಕಿ)</strong>; ಇಲ್ಲಿನ ಮೂಲ್ಕಿ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ಸೋಮವಾರ ನಿರ್ಜನ ಪ್ರದೇಶದಲ್ಲಿ ಮಾನವ ತಲೆ ಬುರುಡೆ ಪತ್ತೆಯಾಗಿದ್ದು ಹಲವು ಸಂಶಯಗಳಿಗೆ ಕಾರಣವಾಗಿದೆ.</span><br /> <br /> ಕೆರೆಕಾಡು ಬೆಳ್ಳಾಯರುವಿನ ಅರಸುಕೆರೆಯ ಬಳಿಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾದ ಇದು ಸ್ಥಳೀಯರಲ್ಲಿ ಕುತೂಹಲ ಹುಟ್ಟಿಸಿದೆ. ಮೂಲ್ಕಿ ಪೊಲೀಸರು ತನಿಖೆ ನಡೆಸಿ ಇದರ ದೇಹದ ಭಾಗಕ್ಕಾಗಿ ಸ್ಥಳೀಯರೊಂದಿಗೆ ಸುತ್ತಮುತ್ತ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ.<br /> <br /> ಈ ಪ್ರದೇಶದ ಸುಮಾರು ಎರಡು ಕಿಮೀ ದೂರದಲ್ಲಿ ಸಾರ್ವಜನಿಕ ರುದ್ರಭೂಮಿಯಿದ್ದು ಅಲ್ಲಿಂದ ಅಲೆಮಾರಿ ನಾಯಿಗಳು ಇಲ್ಲಿಗೆ ತಂದು ಹಾಕಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಅಥವಾ ಇಲ್ಲಿ ಭಾರಿ ಭೂ ವ್ಯವಹಾರ ನಡೆಯುತ್ತಿದ್ದು ಈ ಬುರುಡೆ ಹಾಕಿದ ಜಮೀನು ಮಾರಾಟವಾಗಬಾರದು ಎಂಬ ದುರದ್ದೇಶದಿಂದಲೂ ಇಂಥ ಪ್ರಯತ್ನ ನಡೆಸಿರಬಹುದು ಎಂದು ಪೊಲೀಸರು ಸಂಶಯ ಪಟ್ಟಿದ್ದಾರೆ.<br /> <br /> ಈ ಬುರುಡೆಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ವರದಿ ಬಂದ ನಂತರ ಎಲ್ಲಾ ಸಂಶಯಗಳಿಗೆ ನಿವಾರಣೆ ಆಗಬಹುದು ಎಂದು ಮೂಲ್ಕಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಕೆರೆಕಾಡು (ಮೂಲ್ಕಿ)</strong>; ಇಲ್ಲಿನ ಮೂಲ್ಕಿ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ಸೋಮವಾರ ನಿರ್ಜನ ಪ್ರದೇಶದಲ್ಲಿ ಮಾನವ ತಲೆ ಬುರುಡೆ ಪತ್ತೆಯಾಗಿದ್ದು ಹಲವು ಸಂಶಯಗಳಿಗೆ ಕಾರಣವಾಗಿದೆ.</span><br /> <br /> ಕೆರೆಕಾಡು ಬೆಳ್ಳಾಯರುವಿನ ಅರಸುಕೆರೆಯ ಬಳಿಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾದ ಇದು ಸ್ಥಳೀಯರಲ್ಲಿ ಕುತೂಹಲ ಹುಟ್ಟಿಸಿದೆ. ಮೂಲ್ಕಿ ಪೊಲೀಸರು ತನಿಖೆ ನಡೆಸಿ ಇದರ ದೇಹದ ಭಾಗಕ್ಕಾಗಿ ಸ್ಥಳೀಯರೊಂದಿಗೆ ಸುತ್ತಮುತ್ತ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ.<br /> <br /> ಈ ಪ್ರದೇಶದ ಸುಮಾರು ಎರಡು ಕಿಮೀ ದೂರದಲ್ಲಿ ಸಾರ್ವಜನಿಕ ರುದ್ರಭೂಮಿಯಿದ್ದು ಅಲ್ಲಿಂದ ಅಲೆಮಾರಿ ನಾಯಿಗಳು ಇಲ್ಲಿಗೆ ತಂದು ಹಾಕಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಅಥವಾ ಇಲ್ಲಿ ಭಾರಿ ಭೂ ವ್ಯವಹಾರ ನಡೆಯುತ್ತಿದ್ದು ಈ ಬುರುಡೆ ಹಾಕಿದ ಜಮೀನು ಮಾರಾಟವಾಗಬಾರದು ಎಂಬ ದುರದ್ದೇಶದಿಂದಲೂ ಇಂಥ ಪ್ರಯತ್ನ ನಡೆಸಿರಬಹುದು ಎಂದು ಪೊಲೀಸರು ಸಂಶಯ ಪಟ್ಟಿದ್ದಾರೆ.<br /> <br /> ಈ ಬುರುಡೆಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ವರದಿ ಬಂದ ನಂತರ ಎಲ್ಲಾ ಸಂಶಯಗಳಿಗೆ ನಿವಾರಣೆ ಆಗಬಹುದು ಎಂದು ಮೂಲ್ಕಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>