ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸಾಹಿತ್ಯ ಅಕಾಡೆಮಿಗಳು ಪ್ರಯೋಗ ಶಾಲೆಗಳಾಗಲಿ'

Last Updated 17 ಡಿಸೆಂಬರ್ 2012, 10:46 IST
ಅಕ್ಷರ ಗಾತ್ರ

ಪುತ್ತೂರು:  ಸಾಹಿತ್ಯ ಅಕಾಡೆಮಿಯು ಪ್ರಯೋಗ ಶಾಲೆಯಾಗಬೇಕು. ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಏನೆಲ್ಲಾ ಮಾಡಬಹುದು ಎನ್ನುವ ಕುರಿತು ಚಿಂತನೆ-ಪ್ರಯೋಗಗಳು ನಡೆಯಬೇಕು ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕಾಸರಗೋಡು ಚಿನ್ನಾ ಹೇಳಿದರು.

ಪುತ್ತೂರಿನ ಪುರಭವನದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಪುತ್ತೂರು ಬೊಳುವಾರಿನ ಸಾಂಸ್ಕೃತಿಕ ಕಲಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ `ರಂಗ ಸಂಭ್ರಮ' ಕೊಂಕಣಿ ನಾಟಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಭಾಷೆ ಮತ್ತು ಸಂಸ್ಕೃತಿಯ ಉಳಿಗಾಗಿ ಹುಟ್ಟು ಹಾಕಲಾದ ಸಾಹಿತ್ಯ ಅಕಾಡೆಮಿಗಳ ಚಟುವಟಿಕೆಗಳು  ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ತಲುಪುವಂತಾಗಬೇಕು. ಹಾಗಾದರೆ ಮಾತ್ರ ಅದರ ಹುಟ್ಟು ಸಾರ್ಥಕ ಎಂದು ಅವರು ತಿಳಿಸಿದರು.

ಶಾಸಕಿ ಮಲ್ಲಿಕಾ ಪ್ರಸಾದ್ ಉದ್ಘಾಟಿಸಿದರು. ಕೊಂಕಣಿ ಶ್ರಿಮಂತ ಭಾಷೆ. ವಿದ್ಯಾವಂತರಾದರೂ ಸರ್ಕಾರಿ ಕೆಲಸವನ್ನು ಅವಲಂಬಿಸದೆ ಸ್ವಉದ್ಯೋಗದಲ್ಲಿ ಸಂತೋಷ ಕಂಡ ಈ ಭಾಷಿಗರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.

ಸಾಹಿತಿ ಗೋಪಾಲಕೃಷ್ಣ ಪೈ ಮುಖ್ಯ ಅತಿಥಿಯಾಗಿದ್ದರು. ಕೊಂಕಣಿ ಭಾಷಿಕರಿಂದ ಮತ್ತಷ್ಟು ಕೃತಿಗಳು ಮೂಡಿಬರಬೇಕಾಗಿದ್ದು, ಗಟ್ಟಿಯಾದ ಸಾಹಿತ್ಯವು ಸೃಷ್ಟಿ ಯಾಗದೇ ಹೋದರೆ ಮುಂದಿನ ಜನಾಂಗವು ನಮ್ಮನ್ನು ಕ್ಷಮಿಸದು ಎಂದು ಹೇಳಿದರು.

ಪುತ್ತೂರು ಲಕ್ಷ್ಮಿ ವೆಂಕಟರಮಣ ದೇವಾಲಯದ ಆಡಳಿತ ಟ್ರಸ್ಟಿ ಎಂ.ಅನಂತ ಶೆಣೈ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪುತ್ತೂರು ರೋಟರಿ ಸಿಟಿ ಮಾಜಿ ಅಧ್ಯಕ್ಷ ಜೋನ್ ಕುಟಿನ್ಹಾ, ವಿದ್ಯುತ್ ಇಲಾಖೆಯ ನಿವೃತ್ತ ಇಂಜಿನಿಯರ್ ಶಿವಾನಂದ ಶೇಟ್ ಅತಿಥಿಗಳಾಗಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT