ಮಂಗಳೂರು: ಬೆಂಗಳೂರು-ಮಂಗಳೂರು-ಕಣ್ಣೂರು ರಾತ್ರಿ ರೈಲನ್ನು(ಗಾಡಿ ನಂ. 6517/18) ಕಾರವಾರದವರೆಗೂ ವಿಸ್ತರಿಸಬೇಕು ಎಂದು ರಾಜ್ಯ ಹೈಕೋರ್ಟ್ ಆದೇಶಿಸ್ದ್ದಿದು, ಕರಾವಳಿಯ ಮೂರೂ ಜಿಲ್ಲೆಗಳ ಜನಪ್ರತಿನಿಧಿಗಳು ಹೈಕೋರ್ಟ್ ಆದೇಶ ಪರಿಗಣಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸಿರುವ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ, ರೈಲ್ವೆ ಮಂಡಳಿ ಸ್ಪಂದಿಸದೇ ಇದ್ದಲ್ಲಿ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದೆ.