ರಾಷ್ಟ್ರೀಯ ಯುವಜನೋತ್ಸವ ಸಮಿತಿಯ ಡಾ.ಜಾವಿದ್ ಎಂ.ಜಮಾದಾರ ಮಾತನಾಡಿ, ‘ಗ್ರಾಮೀಣ, ನಗರದ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು. ಇಂದಿನ ಮಕ್ಕಳು ಕೇವಲ ಪಠ್ಯ ಪುಸ್ತಕದಿಂದ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಕ್ರೀಡಾಭಿಮಾನವನ್ನು ಮರೆಯುತ್ತಿದ್ದಾರೆ. ಅಂತಹವರಿಗೆ ಕ್ರೀಡೆಯ ಮಹತ್ವವನ್ನು ತಿಳಿಸಿ, ಅವರಲ್ಲಿ ಆಸಕ್ತಿ ಮೂಡುವಂತೆ ಮಾಡಬೇಕಿದೆ’ ಎಂದು ಹೇಳಿದರು.