ಕೆಲವು ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಪೊಲೀಸರ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದ ಅವರು, ‘ಡಿಜಿಯಾಗಿ ಅಧಿಕಾರ ವಹಿಸಿಕೊಂಡ ದಾವಣಗೆರೆಯಲ್ಲಿ ಮೊದಲ ಬಾರಿಗೆ ಇನ್ಸ್ಪೆಕ್ಟರ್ಗಳ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದು, ಕಾನ್ಸ್ಟೆಬಲ್ಗಳಿಂದ ಹಿಡಿದು ಎಸ್ಪಿ, ಐಜಿಯ ತನಕ ಎಲ್ಲರೂ ಕಷ್ಟದಿಂದ ಕೆಲಸ ಮಾಡಿದ್ದಾರೆ. ಕೋವಿಡ್ ಸಮಯದಲ್ಲೂ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ ಮಾಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಒಂದು ವರ್ಷದಲ್ಲಿ ಒಳ್ಳೆಯ ಕೆಲಸಗಳು ಆಗಿವೆ’ ಎಂದು ಶ್ಲಾಘಿಸಿದರು.