ದ್ವಿಚಕ್ರ ವಾಹನ ಅಪಘಾತದಲ್ಲಿ ಐವರು, ಬಸ್ ಡಿಕ್ಕಿಯಾಗಿ ಒಬ್ಬರು ಪ್ರಾಣ ಕಳೆದುಕೊಂಡಿದ್ದರು. ಕೆಲವು ದಿನಗಳ ಹಿಂದೆ ಈರುಳ್ಳಿ ತುಂಬಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ನಾಲ್ವರು ರೈತರು ಅಪಘಾತದಲ್ಲಿ ಮೃತಪಟ್ಟಿದ್ದರು. ಈ ದಾರುಣ ಘಟನೆಯ ನೆನಪು ಮಾಸುವ ಮುನ್ನವೇ ಗುರುವಾರ ತಾಲ್ಲೂಕಿನ ಗುಯಿಲಾಳುಟೋಲ್ ಬಳಿ ಭೀಕರ ಅಪಘಾತ ನಡೆದಿದೆ. ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.