<p><strong>ದಾವಣಗೆರೆ</strong>: ಜಿಲ್ಲೆಯಲ್ಲಿ 130 ಮಂದಿಗೆ ಕೊರೊನಾ ಸೋಂಕು ಇರುವುದು ಭಾನುವಾರ ದೃಢಪಟ್ಟಿದೆ. 171 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.</p>.<p>16 ವೃದ್ಧರು, 8 ವೃದ್ಧೆಯರು, ಮೂವರು ಬಾಲಕರು, ನಾಲ್ವರು ಬಾಲಕಿಯರಿಗೂ ಕೊರೊನಾ ಬಂದಿದೆ.</p>.<p>ದಾವಣಗೆರೆ ತಾಲ್ಲೂಕಿನಲ್ಲಿ 63 ಮಂದಿಗೆ ಸೋಂಕು ತಗುಲಿದೆ. ಕುರುಡಿ, ಶಿರಮಗೊಂಡನಹಳ್ಳಿ, ರಾಮಗೊಂಡನಹಳ್ಳಿ, ಮಾಗನೂರು, ನರಗನಹಳ್ಳಿ, ನಲ್ಕುಂದ, ಆನಗೋಡು, ಹಿರೆತೋಗಲೇರಿ, ಮಾಯಕೊಂಡ, ಹುಚ್ಚವನಹಳ್ಳಿ, ಬುಳ್ಳಾಪುರ ಹೀಗೆ 11 ಮಂದಿ ಗ್ರಾಮೀಣ ಭಾಗದವರು. ಉಳಿದ 52 ಮಂದಿ ಮಹಾನಗರ ಪಾಲಿಕೆ ವ್ಯಾಪ್ತಿಯವರಾಗಿದ್ದಾರೆ.</p>.<p>ಚಿಗಟೇರಿ ಆಸ್ಪತ್ರೆಯ ನಾಲ್ವರು, ಬಾಪೂಜಿ ಆಸ್ಪತ್ರೆಯ ಇಬ್ಬರು, ಎಸ್ಎಸ್ಐಎಂಎಸ್ ಆಸ್ಪತ್ರೆಯ ಇಬ್ಬರು, ಪೊಲೀಸ್ ಕ್ವಾರ್ಟರ್ಸ್ನ ಇಬ್ಬರು, ಬಾಪೂಜಿ ಕೊ ಆಪರೇಟಿವ್ ಸೊಸೈಟಿಯ ಒಬ್ಬ ಸಿಬ್ಬಂದಿಗೆ ಕೊರೊನಾ ಬಂದಿದೆ.</p>.<p>ಹೊನ್ನಾಳಿ–ನ್ಯಾಮತಿ ತಾಲ್ಲೂಕಿನಲ್ಲಿ 42, ಹರಿಹರ ತಾಲ್ಲೂಕಿನಲ್ಲಿ 22, ಜಗಳೂರು ತಾಲ್ಲೂಕಿನಲ್ಲಿ ಇಬ್ಬರು ಹಾಗೂ ಚನ್ನಗಿರಿ ತಾಲ್ಲೂಕಿನಲ್ಲಿ ಒಬ್ಬರು ಸೋಂಕಿಗೆ ಒಳಗಾಗಿದ್ದಾರೆ.</p>.<p>ಭಾನುವಾರ ಗುಣಮುಖರಾಗಿ ಬಿಡುಗಡೆಗೊಂಡವರಲ್ಲಿ 23 ವೃದ್ಧರು, 13 ವೃದ್ಧೆಯರು, ನಾಲ್ವರು ಬಾಲಕರು, ಐವರು ಬಾಲಕಿಯರು ಸೇರಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 14,536 ಮಂದಿಗೆ ಕೊರೊನಾ ಬಂದಿದೆ. 11,502 ಮಂದಿ ಗುಣಮುಖರಾಗಿದ್ದಾರೆ. 231 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲೆಯಲ್ಲಿ 130 ಮಂದಿಗೆ ಕೊರೊನಾ ಸೋಂಕು ಇರುವುದು ಭಾನುವಾರ ದೃಢಪಟ್ಟಿದೆ. 171 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.</p>.<p>16 ವೃದ್ಧರು, 8 ವೃದ್ಧೆಯರು, ಮೂವರು ಬಾಲಕರು, ನಾಲ್ವರು ಬಾಲಕಿಯರಿಗೂ ಕೊರೊನಾ ಬಂದಿದೆ.</p>.<p>ದಾವಣಗೆರೆ ತಾಲ್ಲೂಕಿನಲ್ಲಿ 63 ಮಂದಿಗೆ ಸೋಂಕು ತಗುಲಿದೆ. ಕುರುಡಿ, ಶಿರಮಗೊಂಡನಹಳ್ಳಿ, ರಾಮಗೊಂಡನಹಳ್ಳಿ, ಮಾಗನೂರು, ನರಗನಹಳ್ಳಿ, ನಲ್ಕುಂದ, ಆನಗೋಡು, ಹಿರೆತೋಗಲೇರಿ, ಮಾಯಕೊಂಡ, ಹುಚ್ಚವನಹಳ್ಳಿ, ಬುಳ್ಳಾಪುರ ಹೀಗೆ 11 ಮಂದಿ ಗ್ರಾಮೀಣ ಭಾಗದವರು. ಉಳಿದ 52 ಮಂದಿ ಮಹಾನಗರ ಪಾಲಿಕೆ ವ್ಯಾಪ್ತಿಯವರಾಗಿದ್ದಾರೆ.</p>.<p>ಚಿಗಟೇರಿ ಆಸ್ಪತ್ರೆಯ ನಾಲ್ವರು, ಬಾಪೂಜಿ ಆಸ್ಪತ್ರೆಯ ಇಬ್ಬರು, ಎಸ್ಎಸ್ಐಎಂಎಸ್ ಆಸ್ಪತ್ರೆಯ ಇಬ್ಬರು, ಪೊಲೀಸ್ ಕ್ವಾರ್ಟರ್ಸ್ನ ಇಬ್ಬರು, ಬಾಪೂಜಿ ಕೊ ಆಪರೇಟಿವ್ ಸೊಸೈಟಿಯ ಒಬ್ಬ ಸಿಬ್ಬಂದಿಗೆ ಕೊರೊನಾ ಬಂದಿದೆ.</p>.<p>ಹೊನ್ನಾಳಿ–ನ್ಯಾಮತಿ ತಾಲ್ಲೂಕಿನಲ್ಲಿ 42, ಹರಿಹರ ತಾಲ್ಲೂಕಿನಲ್ಲಿ 22, ಜಗಳೂರು ತಾಲ್ಲೂಕಿನಲ್ಲಿ ಇಬ್ಬರು ಹಾಗೂ ಚನ್ನಗಿರಿ ತಾಲ್ಲೂಕಿನಲ್ಲಿ ಒಬ್ಬರು ಸೋಂಕಿಗೆ ಒಳಗಾಗಿದ್ದಾರೆ.</p>.<p>ಭಾನುವಾರ ಗುಣಮುಖರಾಗಿ ಬಿಡುಗಡೆಗೊಂಡವರಲ್ಲಿ 23 ವೃದ್ಧರು, 13 ವೃದ್ಧೆಯರು, ನಾಲ್ವರು ಬಾಲಕರು, ಐವರು ಬಾಲಕಿಯರು ಸೇರಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 14,536 ಮಂದಿಗೆ ಕೊರೊನಾ ಬಂದಿದೆ. 11,502 ಮಂದಿ ಗುಣಮುಖರಾಗಿದ್ದಾರೆ. 231 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>