<p><strong>ದಾವಣಗೆರೆ: </strong>ಇಲ್ಲಿನ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಒಟ್ಟು ₹ 1.95 ಲಕ್ಷ ಮೌಲ್ಯದ 130.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಕೆ.ಆರ್. ರಸ್ತೆಯ ರಾಜ್ ಶಾದಿಮಹಲ್ ರಸ್ತೆಯ ಚಿಗಟೇರಿ ಮಿಲ್ ಪಕ್ಕದ ಸಲೀಂ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 1.01 ಲಕ್ಷ ಮೌಲ್ಯದ 67.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಕೆ.ಆರ್. ರಸ್ತೆಯ ಜಗಳೂರು ಬಸ್ ನಿಲ್ದಾಣದ ಬಳಿಯಜಯಣ್ಣ ಅವರಿಗೆ ಸೇರಿದ ಗೋದಾಮಿನಲ್ಲಿ ಸಂಗ್ರಹಿಸಿದ್ದ ₹ 94,500 ಮೌಲ್ಯದ 63 ಕ್ವಿಂಟಲ್ನ140 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ಕಿಶಶಿಕುಮಾರ್ ಅವರಿಗೆ ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆಹಾರ ನಿರೀಕ್ಷಕ ರವಿ ಶಿವಮೂರ್ತಿ ಹಿಪ್ಪರಗಿ ಅವರು ನೀಡಿದ ದೂರು ಆಧರಿಸಿ ಪೊಲೀಸರುದಾಳಿ ನಡೆಸಿದ್ದಾರೆ. ಆಜಾದ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಡಿಸಿಆರ್ಬಿ ಘಟಕದ ಡಿವೈಎಸ್ಪಿ ಬಸವರಾಜ್ ಮಾರ್ಗರ್ಶನದಲ್ಲಿ ಆಜಾದ್ ನಗರ ಪೊಲೀಸ್ ಠಾಣೆಯ ಪಿಎಸ್ಐ ಶೈಲಜಾ, ಸಿಬ್ಬಂದಿ ಮಹಮ್ಮದ್ ಖಾನ್, ರವಿನಾಯ್ಕ, ಕರಿಬಸಪ್ಪ, ಪ್ರಕಾಶ್, ರಾಘವೇಂದ್ರ, ನಟರಾಜ್, ಮಾರುತಿ, ಬಾಲರಾಜ್ ದಾಳಿಯಲ್ಲಿ ಪಾಲ್ಗೊಂಡಿದ್ದರು.</p>.<p>ಪಡಿತರದ ಅಕ್ಕಿಯನ್ನು ಕಡಿಮೆ ದರಕ್ಕೆ ಖರೀದಿಸಿ ಅಧಿಕ ದರಕ್ಕೆ ಮಾರಾಟ ಮಾಡುವ ಈ ಅಕ್ರಮವನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಅದಕ್ಕಾಗಿಯೇ ತಂಡ ರಚಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಇಲ್ಲಿನ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಒಟ್ಟು ₹ 1.95 ಲಕ್ಷ ಮೌಲ್ಯದ 130.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಕೆ.ಆರ್. ರಸ್ತೆಯ ರಾಜ್ ಶಾದಿಮಹಲ್ ರಸ್ತೆಯ ಚಿಗಟೇರಿ ಮಿಲ್ ಪಕ್ಕದ ಸಲೀಂ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 1.01 ಲಕ್ಷ ಮೌಲ್ಯದ 67.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಕೆ.ಆರ್. ರಸ್ತೆಯ ಜಗಳೂರು ಬಸ್ ನಿಲ್ದಾಣದ ಬಳಿಯಜಯಣ್ಣ ಅವರಿಗೆ ಸೇರಿದ ಗೋದಾಮಿನಲ್ಲಿ ಸಂಗ್ರಹಿಸಿದ್ದ ₹ 94,500 ಮೌಲ್ಯದ 63 ಕ್ವಿಂಟಲ್ನ140 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ಕಿಶಶಿಕುಮಾರ್ ಅವರಿಗೆ ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆಹಾರ ನಿರೀಕ್ಷಕ ರವಿ ಶಿವಮೂರ್ತಿ ಹಿಪ್ಪರಗಿ ಅವರು ನೀಡಿದ ದೂರು ಆಧರಿಸಿ ಪೊಲೀಸರುದಾಳಿ ನಡೆಸಿದ್ದಾರೆ. ಆಜಾದ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಡಿಸಿಆರ್ಬಿ ಘಟಕದ ಡಿವೈಎಸ್ಪಿ ಬಸವರಾಜ್ ಮಾರ್ಗರ್ಶನದಲ್ಲಿ ಆಜಾದ್ ನಗರ ಪೊಲೀಸ್ ಠಾಣೆಯ ಪಿಎಸ್ಐ ಶೈಲಜಾ, ಸಿಬ್ಬಂದಿ ಮಹಮ್ಮದ್ ಖಾನ್, ರವಿನಾಯ್ಕ, ಕರಿಬಸಪ್ಪ, ಪ್ರಕಾಶ್, ರಾಘವೇಂದ್ರ, ನಟರಾಜ್, ಮಾರುತಿ, ಬಾಲರಾಜ್ ದಾಳಿಯಲ್ಲಿ ಪಾಲ್ಗೊಂಡಿದ್ದರು.</p>.<p>ಪಡಿತರದ ಅಕ್ಕಿಯನ್ನು ಕಡಿಮೆ ದರಕ್ಕೆ ಖರೀದಿಸಿ ಅಧಿಕ ದರಕ್ಕೆ ಮಾರಾಟ ಮಾಡುವ ಈ ಅಕ್ರಮವನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಅದಕ್ಕಾಗಿಯೇ ತಂಡ ರಚಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>