<p><strong>ದಾವಣಗೆರೆ</strong>: ಅಖಿಲ ಭಾರತ ಶಿವಾಚಾರ್ಯ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯು ಭಕ್ತರಿಗೆ ಸರಳತೆಯ ಬದುಕನ್ನು ಕಲಿಸಿದ್ದಾರೆ ಎಂದು ಹೊನ್ನಾಳಿಯ ಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿರುವ ಹಿರೇಮಠದಲ್ಲಿ ಸೋಮವಾರ ನಡೆದ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮೀಜಿಯ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸದ್ಯೋಜಾತ ಸ್ವಾಮೀಜಿ ವಿದ್ಯಾರ್ಥಿಗಳಿಗೆ ವಿದ್ಯಾ ಗುರುವಾಗಿ, ಭಕ್ತರಿಗೆ ಸನ್ಮಾರ್ಗದರ್ಶಿ ಗುರುವಾಗಿದ್ದರು. ಅವರು ಬದುಕನ್ನು ಬಂದ ಹಾಗೆಯೇ ಸ್ವೀಕರಿಸಿದರು. ಕೊನೆಯ ದಿನಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದರೂ, ಅವರು ಒಪ್ಪಲಿಲ್ಲ. ಭಗವಂತನ ಇಚ್ಛೆ ಇರುವಷ್ಟು ದಿನ ಬದುಕುತ್ತೇನೆ ಎಂದಿದ್ದರು’ ಎಂದು ನೆನಪಿಸಿಕೊಂಡರು.</p>.<p>‘ತಂದೆ ತಾಯಿ, ಗುರು ಹಿರಿಯರನ್ನು, ಮಹಾತ್ಮರನ್ನು ನೆನೆಸಿಕೊಂಡರೆ ಆಯುಷ್ಯ, ಕೀರ್ತಿ, ಯಶಸ್ಸು, ಬಲ ದೊರೆಯುತ್ತದೆ’ ಎಂದು ಹೇಳಿದರು.</p>.<p>‘ಸದ್ಯೋಜಾತ ಸ್ವಾಮೀಜಿ ಕಾಯಕಜೀವಿಯಾಗಿದ್ದರು. ಅವರ ಕೆಲಸಗಳನ್ನು ಅವರೇ ಮಾಡಿಕೊಳ್ಳುತ್ತಿದ್ದರು. ಅವರ ಸಾಮಾಜಿಕ ಕಳಕಳಿಯ ವಿಚಾರಗಳನ್ನು ಅಳವಡಿಸಿಕೊಳ್ಳಬೇಕಿದೆ’ ಎಂದು ಜವಳಿ ಉದ್ಯಮಿ ಬಿ.ಸಿ.ಉಮಾಪತಿ ಅಭಿಪ್ರಾಯಪಟ್ಟರು.</p>.<p>ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ, ರಟ್ಟೀಹಳ್ಳಿಯ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ವಿಜಯಕುಮಾರ್ ಎಚ್.ಜಿ. ಉಪನ್ಯಾಸ ನೀಡಿದರು.</p>.<p>ವಿಜಯ ಹಿರೇಮಠ ಹಾಗೂ ಗುರು ಪಂಚಾಕ್ಷರ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಾಸವಿ ಯುವತಿಯರ ಭಜನಾ ಮಂಡಳಿ ಸದಸ್ಯೆಯರು ಸಂಗೀತ ಸೇವೆ ನಡೆಸಿಕೊಟ್ಟರು.</p>.<p>ಸೃಷ್ಟಿ ವೈ.ಕೆ., ನಮ್ರತಾ, ಶಿವರಾಜ್ ಎನ್.ಎಂ. ಯೋಗ ನೃತ್ಯ ಪ್ರದರ್ಶಿಸಿದರು. ಬಾಪೂಜಿ ಬಿ ಸ್ಕೂಲ್ನ ನಿರ್ದೇಶಕ ಸ್ವಾಮಿ ತ್ರಿಬುವಾನಂದ ಸ್ವಾಗತಿಸಿ, ಅರ್ಚನಾ ಎಸ್. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಅಖಿಲ ಭಾರತ ಶಿವಾಚಾರ್ಯ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯು ಭಕ್ತರಿಗೆ ಸರಳತೆಯ ಬದುಕನ್ನು ಕಲಿಸಿದ್ದಾರೆ ಎಂದು ಹೊನ್ನಾಳಿಯ ಕಲ್ಮಠದ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿರುವ ಹಿರೇಮಠದಲ್ಲಿ ಸೋಮವಾರ ನಡೆದ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮೀಜಿಯ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸದ್ಯೋಜಾತ ಸ್ವಾಮೀಜಿ ವಿದ್ಯಾರ್ಥಿಗಳಿಗೆ ವಿದ್ಯಾ ಗುರುವಾಗಿ, ಭಕ್ತರಿಗೆ ಸನ್ಮಾರ್ಗದರ್ಶಿ ಗುರುವಾಗಿದ್ದರು. ಅವರು ಬದುಕನ್ನು ಬಂದ ಹಾಗೆಯೇ ಸ್ವೀಕರಿಸಿದರು. ಕೊನೆಯ ದಿನಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದರೂ, ಅವರು ಒಪ್ಪಲಿಲ್ಲ. ಭಗವಂತನ ಇಚ್ಛೆ ಇರುವಷ್ಟು ದಿನ ಬದುಕುತ್ತೇನೆ ಎಂದಿದ್ದರು’ ಎಂದು ನೆನಪಿಸಿಕೊಂಡರು.</p>.<p>‘ತಂದೆ ತಾಯಿ, ಗುರು ಹಿರಿಯರನ್ನು, ಮಹಾತ್ಮರನ್ನು ನೆನೆಸಿಕೊಂಡರೆ ಆಯುಷ್ಯ, ಕೀರ್ತಿ, ಯಶಸ್ಸು, ಬಲ ದೊರೆಯುತ್ತದೆ’ ಎಂದು ಹೇಳಿದರು.</p>.<p>‘ಸದ್ಯೋಜಾತ ಸ್ವಾಮೀಜಿ ಕಾಯಕಜೀವಿಯಾಗಿದ್ದರು. ಅವರ ಕೆಲಸಗಳನ್ನು ಅವರೇ ಮಾಡಿಕೊಳ್ಳುತ್ತಿದ್ದರು. ಅವರ ಸಾಮಾಜಿಕ ಕಳಕಳಿಯ ವಿಚಾರಗಳನ್ನು ಅಳವಡಿಸಿಕೊಳ್ಳಬೇಕಿದೆ’ ಎಂದು ಜವಳಿ ಉದ್ಯಮಿ ಬಿ.ಸಿ.ಉಮಾಪತಿ ಅಭಿಪ್ರಾಯಪಟ್ಟರು.</p>.<p>ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ, ರಟ್ಟೀಹಳ್ಳಿಯ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ವಿಜಯಕುಮಾರ್ ಎಚ್.ಜಿ. ಉಪನ್ಯಾಸ ನೀಡಿದರು.</p>.<p>ವಿಜಯ ಹಿರೇಮಠ ಹಾಗೂ ಗುರು ಪಂಚಾಕ್ಷರ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಾಸವಿ ಯುವತಿಯರ ಭಜನಾ ಮಂಡಳಿ ಸದಸ್ಯೆಯರು ಸಂಗೀತ ಸೇವೆ ನಡೆಸಿಕೊಟ್ಟರು.</p>.<p>ಸೃಷ್ಟಿ ವೈ.ಕೆ., ನಮ್ರತಾ, ಶಿವರಾಜ್ ಎನ್.ಎಂ. ಯೋಗ ನೃತ್ಯ ಪ್ರದರ್ಶಿಸಿದರು. ಬಾಪೂಜಿ ಬಿ ಸ್ಕೂಲ್ನ ನಿರ್ದೇಶಕ ಸ್ವಾಮಿ ತ್ರಿಬುವಾನಂದ ಸ್ವಾಗತಿಸಿ, ಅರ್ಚನಾ ಎಸ್. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>