<p><strong>ದಾವಣಗೆರೆ</strong>: ಲಾಕ್ಡೌನ್ ವೇಳೆ ಮಡಗಾಸ್ಕರ್ನಲ್ಲಿ ಸಿಲುಕಿರುವ ಜಿಲ್ಲೆಯ 17 ಮಂದಿಯನ್ನು ವಾಪಸ್ ಕರೆತರುವಂತೆ ವಿದೇಶಾಂಗ ವ್ಯವಹಾರಗಳ ಸಚಿವರು ಹಾಗೂ ಪೂರ್ವ ಆಫ್ರಿಕಾದ ಭಾರತೀಯ ರಾಯಭಾರಿಗಳಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಪತ್ರ ಬರೆದಿದ್ದಾರೆ.</p>.<p>ದಾವಣಗೆರೆಯ ಚನ್ನಗಿರಿ ತಾಲ್ಲೂಕು ಬೋಪನಾಳ್ ಗ್ರಾಮದವರಾದ ಈ 17 ಮಂದಿ ಗಿಡಮೂಲಿಕೆ ವ್ಯಾಪಾರಕ್ಕಾಗಿ ಫೆಬ್ರುವರಿ ತಿಂಗಳಲ್ಲಿ ಮಡಗಾಸ್ಕರ್ಗೆ ತೆರಳಿದ್ದರು. ಕೋವಿಡ್ನಿಂದಾಗಿ ಅಂತರರಾಷ್ಟ್ರೀಯ ವಿಮಾನಗಳು ರದ್ದಾದ್ದರಿಂದ ಭಾರತಕ್ಕೆ ಬರಲು ಆಗದೇ ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಅಲ್ಲದೇ ಆಹಾರ ಹಾಗೂ ವಸತಿಗಳಿಗೆ ಸಮಸ್ಯೆಯಾಗಿ ಸಂಕಷ್ಟದಲ್ಲಿದ್ದಾರೆ.</p>.<p>‘ಬೆಂಗಳೂರು, ನವದೆಹಲಿ, ಹೈದರಾಬಾದ್ ಹಾಗೂ ಚನ್ನೈ ಇವುಗಳಲ್ಲಿ ಎಲ್ಲಿಗಾದರೂ ವಂದೇ ಭಾರತ್ ಮಿಷನ್ ವಿಮಾನದ ವ್ಯವಸ್ಥೆ ಮಾಡಿಕೊಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ ಬುಧವಾರ ಪತ್ರ ಬರೆದಿದ್ದರು. </p>.<p>‘ಮಡಗಾಸ್ಕರ್ನಲ್ಲಿರುವ ದಾವಣಗೆರೆಯ ಜಿಲ್ಲೆಯವರ ಸಂಪರ್ಕದಲ್ಲಿದ್ದು, ಅವರಿಗೆ ಊಟ ಹಾಗೂ ವಸತಿಗೆ ತೊಂದರೆಯಾಗದಂತೆ ಕ್ರಮ ವಹಿಸುತ್ತೇವೆ. ಅಲ್ಲದೇ ಚಾರ್ಟರ್ ವಿಮಾನದ ಮುಖಾಂತರ ಶೀಘ್ರ ಭಾರತಕ್ಕೆ ಕಳುಹಿಸುವ ವ್ಯವಸ್ಥೆ ಮಾಡುತ್ತೇವೆ’ ಎಂದು ಮಡಗಾಸ್ಕರ್ನ ಭಾರತೀಯ ರಾಯಭಾರಿ ಕಚೇರಿಯವರು ಇ–ಮೇಲ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಲಾಕ್ಡೌನ್ ವೇಳೆ ಮಡಗಾಸ್ಕರ್ನಲ್ಲಿ ಸಿಲುಕಿರುವ ಜಿಲ್ಲೆಯ 17 ಮಂದಿಯನ್ನು ವಾಪಸ್ ಕರೆತರುವಂತೆ ವಿದೇಶಾಂಗ ವ್ಯವಹಾರಗಳ ಸಚಿವರು ಹಾಗೂ ಪೂರ್ವ ಆಫ್ರಿಕಾದ ಭಾರತೀಯ ರಾಯಭಾರಿಗಳಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಪತ್ರ ಬರೆದಿದ್ದಾರೆ.</p>.<p>ದಾವಣಗೆರೆಯ ಚನ್ನಗಿರಿ ತಾಲ್ಲೂಕು ಬೋಪನಾಳ್ ಗ್ರಾಮದವರಾದ ಈ 17 ಮಂದಿ ಗಿಡಮೂಲಿಕೆ ವ್ಯಾಪಾರಕ್ಕಾಗಿ ಫೆಬ್ರುವರಿ ತಿಂಗಳಲ್ಲಿ ಮಡಗಾಸ್ಕರ್ಗೆ ತೆರಳಿದ್ದರು. ಕೋವಿಡ್ನಿಂದಾಗಿ ಅಂತರರಾಷ್ಟ್ರೀಯ ವಿಮಾನಗಳು ರದ್ದಾದ್ದರಿಂದ ಭಾರತಕ್ಕೆ ಬರಲು ಆಗದೇ ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಅಲ್ಲದೇ ಆಹಾರ ಹಾಗೂ ವಸತಿಗಳಿಗೆ ಸಮಸ್ಯೆಯಾಗಿ ಸಂಕಷ್ಟದಲ್ಲಿದ್ದಾರೆ.</p>.<p>‘ಬೆಂಗಳೂರು, ನವದೆಹಲಿ, ಹೈದರಾಬಾದ್ ಹಾಗೂ ಚನ್ನೈ ಇವುಗಳಲ್ಲಿ ಎಲ್ಲಿಗಾದರೂ ವಂದೇ ಭಾರತ್ ಮಿಷನ್ ವಿಮಾನದ ವ್ಯವಸ್ಥೆ ಮಾಡಿಕೊಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ ಬುಧವಾರ ಪತ್ರ ಬರೆದಿದ್ದರು. </p>.<p>‘ಮಡಗಾಸ್ಕರ್ನಲ್ಲಿರುವ ದಾವಣಗೆರೆಯ ಜಿಲ್ಲೆಯವರ ಸಂಪರ್ಕದಲ್ಲಿದ್ದು, ಅವರಿಗೆ ಊಟ ಹಾಗೂ ವಸತಿಗೆ ತೊಂದರೆಯಾಗದಂತೆ ಕ್ರಮ ವಹಿಸುತ್ತೇವೆ. ಅಲ್ಲದೇ ಚಾರ್ಟರ್ ವಿಮಾನದ ಮುಖಾಂತರ ಶೀಘ್ರ ಭಾರತಕ್ಕೆ ಕಳುಹಿಸುವ ವ್ಯವಸ್ಥೆ ಮಾಡುತ್ತೇವೆ’ ಎಂದು ಮಡಗಾಸ್ಕರ್ನ ಭಾರತೀಯ ರಾಯಭಾರಿ ಕಚೇರಿಯವರು ಇ–ಮೇಲ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>