ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 2.10 ಲಕ್ಷ ಮೌಲ್ಯದ ಗಾಂಜಾ ವಶ: ಇಬ್ಬರ ಬಂಧನ

Last Updated 3 ಏಪ್ರಿಲ್ 2021, 15:18 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಬಾಡ ಕ್ರಾಸ್ ಬಳಿಯ ಚಿಂದೋಡಿ ಲೀಲಾ ರಂಗಲೋಕದ ಹಿಂಭಾಗದ ರಾಷ್ಟ್ರೀಯ ಹೆದ್ದಾರಿ–4ರ ಸರ್ವೀಸ್ ರಸ್ತೆಯ ಪಕ್ಕದ ಮಣ್ಣಿನ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಇಎನ್ ಠಾಣೆಯ ಪೊಲೀಸರು, 8 ಕೆ.ಜಿ 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಛತ್ತೀಸಗಡ ರಾಜ್ಯದ ರಾಯಗಡ ಜಿಲ್ಲೆಯ ಅಂತರಾಮ್ ತಿರ್ಕಿ (21) ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಬಂಡೆಬಸಾಪುರ ಗ್ರಾಮದ ಮಧುರಾಜ್ (40) ಬಂಧಿತರು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಂದ ₹2.10 ಲಕ್ಷ ಮೌಲ್ಯದ ಗಾಂಜಾ, ಒಂದು ಮೊಬೈಲ್ ಹಾಗೂ ₹ 900 ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಅನಿಲ್ ಜೇಕಬ್‌ನನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

ಮಾಹಿತಿಯ ಮೇರೆಗೆ ಡಿಎಸ್‌ಆರ್‌ಬಿ ಡಿವೈಎಸ್‌ಪಿ ಬಿ.ಎಸ್. ಬಸವರಾಜ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪಿಎಸ್ಐ ಗಿರೀಶ್‌ ಬಿ.ವಿ ಹಾಗೂ ಕಾನ್‌ಸ್ಟೆಬಲ್‌ಗಳಾದ ಲೋಹಿತ್, ಮಲ್ಲಿಕಾರ್ಜುನ, ಗೋವಿಂದ್ ರಾಜ್, ಕೊಟ್ರೇಶ್, ನಾಗರಾಜ್, ದ್ಯಾಮೇಶ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಎಸ್‌ಪಿ ಎಂ.ರಾಜೀವ್ ಅವರು ತಂಡವನ್ನು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT