<div><p><strong>ಜಗಳೂರು: </strong>ತಾಲ್ಲೂಕಿನ ತೊರೆಸಾಲು ಪ್ರದೇಶದಲ್ಲಿ ಶಾಶ್ವತ ಅಂತರ್ಜಲ ಹೆಚ್ಚಳದ ದೃಷ್ಟಿಯಿಂದ ಜಿನಿಗಿಹಳ್ಳಕ್ಕೆ ಎರಡು ಬೃಹತ್ ಬ್ಯಾರೇಜ್ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.</p><p>ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ವಿಶ್ವೇಶ್ವರಯ್ಯ ಜಲನಿಗಮದಿಂದ ₹ 1.35 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p><p>ತೊರೆಸಾಲು ಪ್ರದೇಶದ ಪುರಾತನ ಜಿನಿಗಿ ಹಳ್ಳದಲ್ಲಿ ಪ್ರತಿ ಮಳೆಗಾಲದಲ್ಲಿ ಭಾರಿ ಪ್ರಮಾಣದಲ್ಲಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಅಮೂಲ್ಯ ಜಲರಾಶಿಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಆಕನೂರು ಮತ್ತು ಕಮಂಡಲಗುಂದಿ ಗ್ರಾಮಗಳ ಸಮೀಪ ಎರಡು ದೊಡ್ಡ ಬ್ಯಾರೇಜ್ಗಳನ್ನು ನಿರ್ಮಿಸಲಾಗುವುದು. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಮುಂದಿನ ದಿನಗಳಲ್ಲೂ ವ್ಯಾಪಕವಾಗಿ ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುವುದು ಎಂದು ಶಾಸಕರು ತಿಳಿಸಿದರು.</p><p>ಭದ್ರಾ ಮೆಲ್ದಂಡೆ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಕೆಂದ್ರ ಸರ್ಕಾರ ₹ 1,200 ಕೋಟಿ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ನವೆಂಬರ್ 5ರಂದು ಚಾಲನೆ ನೀಡಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಯಡಿ ತಾಲ್ಲೂಕಿನ 46 ಎಕರೆ ಪ್ರದೇಶಕ್ಕೆ ನೀರಾವರಿ ಕೈಗೊಳ್ಳಲಾಗುವುದು ಎಂದು ಶಾಸಕರು ಹೇಳಿದರು.</p><p>ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್. ನಾಗರಾಜ್, ಮುಖಂಡರಾದ ರಘುರಾಮ್ ರೆಡ್ಡಿ, ಇಂದ್ರೇಶ್, ಅರವಿಂದ ಪಾಟೀಲ್, ಎಇಇ ಮಧುಕುಮಾರ್ ಇದ್ದರು.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div><p><strong>ಜಗಳೂರು: </strong>ತಾಲ್ಲೂಕಿನ ತೊರೆಸಾಲು ಪ್ರದೇಶದಲ್ಲಿ ಶಾಶ್ವತ ಅಂತರ್ಜಲ ಹೆಚ್ಚಳದ ದೃಷ್ಟಿಯಿಂದ ಜಿನಿಗಿಹಳ್ಳಕ್ಕೆ ಎರಡು ಬೃಹತ್ ಬ್ಯಾರೇಜ್ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.</p><p>ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ವಿಶ್ವೇಶ್ವರಯ್ಯ ಜಲನಿಗಮದಿಂದ ₹ 1.35 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p><p>ತೊರೆಸಾಲು ಪ್ರದೇಶದ ಪುರಾತನ ಜಿನಿಗಿ ಹಳ್ಳದಲ್ಲಿ ಪ್ರತಿ ಮಳೆಗಾಲದಲ್ಲಿ ಭಾರಿ ಪ್ರಮಾಣದಲ್ಲಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಅಮೂಲ್ಯ ಜಲರಾಶಿಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಆಕನೂರು ಮತ್ತು ಕಮಂಡಲಗುಂದಿ ಗ್ರಾಮಗಳ ಸಮೀಪ ಎರಡು ದೊಡ್ಡ ಬ್ಯಾರೇಜ್ಗಳನ್ನು ನಿರ್ಮಿಸಲಾಗುವುದು. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಮುಂದಿನ ದಿನಗಳಲ್ಲೂ ವ್ಯಾಪಕವಾಗಿ ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುವುದು ಎಂದು ಶಾಸಕರು ತಿಳಿಸಿದರು.</p><p>ಭದ್ರಾ ಮೆಲ್ದಂಡೆ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಕೆಂದ್ರ ಸರ್ಕಾರ ₹ 1,200 ಕೋಟಿ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ನವೆಂಬರ್ 5ರಂದು ಚಾಲನೆ ನೀಡಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಯಡಿ ತಾಲ್ಲೂಕಿನ 46 ಎಕರೆ ಪ್ರದೇಶಕ್ಕೆ ನೀರಾವರಿ ಕೈಗೊಳ್ಳಲಾಗುವುದು ಎಂದು ಶಾಸಕರು ಹೇಳಿದರು.</p><p>ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್. ನಾಗರಾಜ್, ಮುಖಂಡರಾದ ರಘುರಾಮ್ ರೆಡ್ಡಿ, ಇಂದ್ರೇಶ್, ಅರವಿಂದ ಪಾಟೀಲ್, ಎಇಇ ಮಧುಕುಮಾರ್ ಇದ್ದರು.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>