ಮೋದಿ ಪ್ರಧಾನಿಯಾದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ ಸಚಿವ ಎಚ್.ಡಿ.ರೇವಣ್ಣ ಹೇಳಿದಂತೆ ನಡೆದುಕೊಳ್ಳಲಿ, ಯಡಿಯೂರಪ್ಪ ಅವರ ಮನೆ ಬಾಗಿಲು ಕಾಯುತ್ತೇನೆ ಎಂದು ಹೇಳಿರುವ ಶಾಸಕ ಜಮೀರ್ ಅಹ್ಮದ್ ವಾಚ್ಮನ್ ಬಟ್ಟೆ ತೊಟ್ಟು ಮನೆ ಕಾಯಲಿ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಅವರು ನೇಣುಹಾಕಿಕೊಳ್ಳಲಿ ಎಂದು ಹೇಳಬಾರದಿತ್ತು. ಆದರೆ ಜನರೇ ಕಾಂಗ್ರೆಸ್ನವರಿಗೆ ನೇಣು ಹಾಕಿದ್ದಾರೆ’ ಎಂದು ಲೇವಡಿ ಮಾಡಿದರು.