ಚಿತ್ರದ ನಿರ್ದೇಶಕ ಪ್ರಕಾಶ್ ಹೆಬ್ಬಾಳ, ‘ಚಿತ್ರದಲ್ಲಿ ಹಲವು ಟ್ವಿಸ್ಟ್ಗಳಿವೆ. ಹಲವು ನಿರ್ದೇಶಕರ ಬಳಿ ಸಹಾಯಕನಾಗಿ ಕೆಲಸ ಮಾಡಿದ ಅನುಭವ ಇದ್ದು, ಮೊದಲ ಬಾರಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದೇನೆ. ದಾವಣಗೆರೆಯ ಬಸವರಾಜ್ ಅವರು ಸಂಭಾಷಣೆ ಬರೆದಿದ್ದಾರೆ. ಗೌತಮ್ ಶ್ರೀವತ್ಸ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಿನಿಟೆಕ್ ಸೂರಿ ಛಾಯಾಗ್ರಹಣ, ವೆಂಕಿ ಸಂಕಲನ ಮಾಡಿದ್ದಾರೆ. ಮಾಸ್ ಚಿತ್ರವಾದರೂ ಹಿರೋಯಿಸಂ ಇಲ್ಲ. ಉತ್ತಮ ಸಂದೇಶ ಚಿತ್ರದಲ್ಲಿದೆ’ ಎಂದು ವಿವರಿಸಿದರು.