<p><strong>ದಾವಣಗೆರೆ</strong>: ಜಿಲ್ಲೆಯ 70 ಕೇಂದ್ರಗಳಲ್ಲಿ ಶುಕ್ರವಾರ 2306 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.</p>.<p>ಬಾಪೂಜಿ ಆಸ್ಪತ್ರೆಯ 3 ಕೇಂದ್ರಗಳು, ಎಸ್ಎಸ್ ಹೈಟೆಕ್ ಆಸ್ಪತ್ರೆಯ ಎರಡು ಕೇಂದ್ರಗಳು, ಬಾಪೂಜಿ ದಂತ ವೈದ್ಯಕೀಯ ಕಾಲೇಜು ಮತ್ತು ಜಿಲ್ಲಾ ಚಿಗಟೇರಿ ಆಸ್ಪತ್ರೆ, ದಾವಣಗೆರೆ ತಾಲ್ಲೂಕಿನ 24, ಹರಿಹರ ತಾಲ್ಲೂಕಿನ 7 ಚನ್ನಗಿರಿ ತಾಲ್ಲೂಕಿನ 19 ಹಾಗೂ ಜಗಳೂರು ತಾಲ್ಲೂಕಿನ 8 ಪ್ರಾಥಮಿಕ ಕೇಂದ್ರಗಳಲ್ಲಿ ಲಸಿಕೆ ಹಾಕಲಾಯಿತು.</p>.<p>ಶುಕ್ರವಾರ 3,678 ಗುರಿ ಇತ್ತು. ಅವರಲ್ಲಿ 2,306 ಮಂದಿಗೆ ಲಸಿಕೆ ನೀಡಿದ್ದು, ಶೇ 62.69 ದಾಖಲಾಗಿದೆ.</p>.<p class="Subhead"><strong>5 ಮಂದಿಗೆ ಕೊರೊನಾ:</strong> ಜಿಲ್ಲೆಯಲ್ಲಿ 5 ಮಂದಿಗೆ ಕೊರೊನಾ ಇರುವುದು ಶುಕ್ರವಾರ ದೃಢಪಟ್ಟಿದ್ದು, 22 ಮಂದಿ ಗುಣಮುಖರಾಗಿದ್ದಾರೆ.</p>.<p>ದಾವಣಗೆರೆ ನಗರ ಹಾಗೂ ತಾಲ್ಲೂಕು ಸೇರಿ 5 ಮಂದಿಗೆ ಸೋಂಕು ತಗುಲಿದ್ದು, ಬಿಡುಗಡೆಗೊಂಡವರಲ್ಲಿ ದಾವಣಗೆರೆ ನಗರ ಹಾಗೂ ತಾಲ್ಲೂಕಿನ 17, ಜಗಳೂರು ಹಾಗೂ ಚನ್ನಗಿರಿ ತಾಲ್ಲೂಕಿನ ತಲಾ ಒಬ್ಬರು ಹೊರ ಜಿಲ್ಲೆಯ ಇಬ್ಬರು ಗುಣಮುಖರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 22,251 ಮಂದಿಗೆ ಸೋಂಕು ತಗುಲಿದೆ. 21,915 ಮಂದಿ ಗುಣಮುಖರಾಗಿದ್ದಾರೆ. 264 ಮಂದಿ ಮೃತಪಟ್ಟಿದ್ದಾರೆ. 72 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲೆಯ 70 ಕೇಂದ್ರಗಳಲ್ಲಿ ಶುಕ್ರವಾರ 2306 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.</p>.<p>ಬಾಪೂಜಿ ಆಸ್ಪತ್ರೆಯ 3 ಕೇಂದ್ರಗಳು, ಎಸ್ಎಸ್ ಹೈಟೆಕ್ ಆಸ್ಪತ್ರೆಯ ಎರಡು ಕೇಂದ್ರಗಳು, ಬಾಪೂಜಿ ದಂತ ವೈದ್ಯಕೀಯ ಕಾಲೇಜು ಮತ್ತು ಜಿಲ್ಲಾ ಚಿಗಟೇರಿ ಆಸ್ಪತ್ರೆ, ದಾವಣಗೆರೆ ತಾಲ್ಲೂಕಿನ 24, ಹರಿಹರ ತಾಲ್ಲೂಕಿನ 7 ಚನ್ನಗಿರಿ ತಾಲ್ಲೂಕಿನ 19 ಹಾಗೂ ಜಗಳೂರು ತಾಲ್ಲೂಕಿನ 8 ಪ್ರಾಥಮಿಕ ಕೇಂದ್ರಗಳಲ್ಲಿ ಲಸಿಕೆ ಹಾಕಲಾಯಿತು.</p>.<p>ಶುಕ್ರವಾರ 3,678 ಗುರಿ ಇತ್ತು. ಅವರಲ್ಲಿ 2,306 ಮಂದಿಗೆ ಲಸಿಕೆ ನೀಡಿದ್ದು, ಶೇ 62.69 ದಾಖಲಾಗಿದೆ.</p>.<p class="Subhead"><strong>5 ಮಂದಿಗೆ ಕೊರೊನಾ:</strong> ಜಿಲ್ಲೆಯಲ್ಲಿ 5 ಮಂದಿಗೆ ಕೊರೊನಾ ಇರುವುದು ಶುಕ್ರವಾರ ದೃಢಪಟ್ಟಿದ್ದು, 22 ಮಂದಿ ಗುಣಮುಖರಾಗಿದ್ದಾರೆ.</p>.<p>ದಾವಣಗೆರೆ ನಗರ ಹಾಗೂ ತಾಲ್ಲೂಕು ಸೇರಿ 5 ಮಂದಿಗೆ ಸೋಂಕು ತಗುಲಿದ್ದು, ಬಿಡುಗಡೆಗೊಂಡವರಲ್ಲಿ ದಾವಣಗೆರೆ ನಗರ ಹಾಗೂ ತಾಲ್ಲೂಕಿನ 17, ಜಗಳೂರು ಹಾಗೂ ಚನ್ನಗಿರಿ ತಾಲ್ಲೂಕಿನ ತಲಾ ಒಬ್ಬರು ಹೊರ ಜಿಲ್ಲೆಯ ಇಬ್ಬರು ಗುಣಮುಖರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 22,251 ಮಂದಿಗೆ ಸೋಂಕು ತಗುಲಿದೆ. 21,915 ಮಂದಿ ಗುಣಮುಖರಾಗಿದ್ದಾರೆ. 264 ಮಂದಿ ಮೃತಪಟ್ಟಿದ್ದಾರೆ. 72 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>