ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

28, 29ರಂದು ರಥೋತ್ಸವ

ಅಸಗೋಡು: ಕುಸ್ತಿ ಪಂದ್ಯಾವಳಿ
Published : 25 ಏಪ್ರಿಲ್ 2013, 9:03 IST
ಫಾಲೋ ಮಾಡಿ
Comments

ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಅಸಗೋಡು ಗ್ರಾಮದಲ್ಲಿ ಏ. 28ರಿಂದ ಶಂಭುಲಿಂಗೇಶ್ವರ ಸ್ವಾಮಿ ಹಾಗೂ ಹನುಮಂತ ದೇವರ ರಥೋತ್ಸವ ಆಯೋಜಿಸಲಾಗಿದೆ.

28ರಂದು ಸಂಜೆ 5ಕ್ಕೆ ಶಂಭುಲಿಂಗೇಶ್ವರ ಸ್ವಾಮಿಯ ರಥೋತ್ಸವ ನೆರವೇರಲಿದೆ. 29ರಂದು ಸಂಜೆ 5ಕ್ಕೆ ಹನುಮಂತ ದೇವರ ರಥೋತ್ಸವ ನಡೆಯಲಿದೆ. 30ರಂದು ಬೆಳಿಗ್ಗೆ ಶಂಭುಲಿಂಗೇಶ್ವರ ಹಾಗೂ ಹನುಮಂತದೇವರ ಓಕುಳಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ರಥೋತ್ಸವ ಅಂಗವಾಗಿ ಏ. 29 ಹಾಗೂ 30ರಂದು ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಕುಸ್ತಿ ಪಟುಗಳಿಗೆ ಮದಕರಿ ನಾಯಕ ಸಂಘದ ವತಿಯಿಂಧ ಊಟದ ವ್ಯವಸ್ಥೆ ಮಾಡಲಾಗುವುದು. ನಾಟಕ ಪ್ರದರ್ಶನವನ್ನು ಸಹ ಆಯೋಜಿಸಲಾಗಿದೆ.

ರಥೋತ್ಸವಕ್ಕಾಗಿ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ಶಿಲಾವಿನ್ಯಾಸ ಮಂಟಪ ರಚಿಸಲು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಆಗಮಿಸಬೇಕು ಎಂದು ದೇವಸ್ಥಾನ ಸಮಿತಿ ವ್ಯವಸ್ಥಾಪಕರು ಹಾಗೂ ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT