ಸಾರ್ವಜನಿಕರು ತಮ್ಮ ಅಗತ್ಯ ಕಾರ್ಯಗಳ ನಿಮಿತ್ತ ತಾಲ್ಲೂಕು ಕಚೇರಿಗೆ ಭೇಟಿ ನೀಡಿದಾಗ ಸಿಬ್ಬಂದಿ ಕಚೇರಿಯಲ್ಲಿ ಲಭ್ಯವಿಲ್ಲದಿದ್ದರೆ ಅವರ ಕೆಲಸ ಕಾರ್ಯಗಳು ಆಗುವುದಾದರೂ ಹೇಗೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇಂತಹ ಪ್ರಕರಣಗಳು ಕಂಡುಬಂದರೆ ಮುಂದಿನ ದಿನಗಳಲ್ಲಿ ಅಂತಹ ನೌಕರರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಕರ್ತವ್ಯಲೋಪ ಎಸಗಿದ ಸಿಬ್ಬಂದಿ ವೇತನ ತಡೆ ಹಿಡಿಯಲಾಗುವುದು ಎಂದು ಎಚ್ಚರಿಸಿದರು.