ಸ್ಥಳಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಗುಣರಂಜನ್ ಶೆಟ್ಟಿ ಆಯ್ಕೆ ಪ್ರಕ್ರಿಯೆಯ ವ್ಯವಸ್ಥೆ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಕುಸ್ತಿ ಸಂಘದ ತಾಂತ್ರಿಕ ವಿಭಾಗದ ಅಧ್ಯಕ್ಷ ವಿನೋದ್ ಮೈಸೂರು, ರಾಜ್ಯ ಉಪಾಧ್ಯಕ್ಷ ಕೆ.ಎಂ. ವೀರೇಶ್, ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್, ಸಂಘದ ಗೌರವಾಧ್ಯಕ್ಷ ಎನ್.ಎಚ್. ಶ್ರೀನಿವಾಸ್, ಹರಿಹರ ಕುಸ್ತಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದ್ಯಾವನವರ್ ರೇವಣಪ್ಪ, ಪದಾಧಿಕಾರಿಗಳಾದ ಚೂರಿ ಜಗದೀಶ್, ಪಾಲಾಕ್ಷಿ, ಶಿವಾನಂದ ಎರೆಸೀಮೆ, ಮಾರುತಿ ಪೂಜಾರ್ ಇದ್ದರು.