<p>ದಾವಣಗೆರೆ:ಕಾರ್ಗಿಲ್ ಕಂಪನಿಯವರು ಜಿಲ್ಲಾಡಳಿತಕ್ಕೆ ನೀಡಿರುವ ₹33 ಲಕ್ಷದ ಅತ್ಯಾಧುನಿಕ ಆಂಬುಲೆನ್ಸ್ ಅನ್ನು ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಶುಕ್ರವಾರ, ಜಗಳೂರು ತಾಲ್ಲೂಕು ಆಸ್ಪತ್ರೆಗೆ ಹಸ್ತಾಂತರಿಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾರ್ಗಿಲ್ ಕಂಪನಿಯವರು 3 ಹೈಟೆಕ್ ಆಂಬುಲೆನ್ಸ್ಗಳನ್ನು ಜಿಲ್ಲಾಡಳಿತಕ್ಕೆ ನೀಡಿದ್ದು, ಅವುಗಳನ್ನು ಹರಿಹರ, ದಾವಣಗೆರೆ, ಜಗಳೂರು ತಾಲ್ಲೂಕುಗಳಿಗೆ ನೀಡಲಾಗಿದೆ. ಇನ್ನೂ 3 ಆಂಬುಲೆನ್ಸ್ ನೀಡುವಂತೆ ಕಾರ್ಗಿಲ್ ಕಂಪನಿಯವರನ್ನು ಕೇಳಿದ್ದು, ಅವುಗಳನ್ನು ಇತರ ತಾಲ್ಲೂಕುಗಳಿಗೆ ನೀಡುವ ಉದ್ದೇಶವಿದೆ’ ಎಂದರು.</p>.<p>‘ಸಂಭಾವ್ಯ 3ನೇ ಅಲೆ ಎದುರಿಸುವ ನಿಟ್ಟಿನಲ್ಲಿ ವೆಂಟಿಲೇಟರ್, ಪೌಷ್ಟಿಕ ಆಹಾರ ಒದಗಿಸುವಂತೆ ಗ್ರಾಸಿಂ ಇಂಡಸ್ಟ್ರೀಸ್ನವರನ್ನು ಕೇಳಿದ್ದೇವೆ.<br />ಕೇಂದ್ರ ಸರ್ಕಾರದ ಪಿಎಂ ಕೇರ್ನಿಂದ 1 ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಮಂಜೂರಾಗಿದೆ. ಡಿಆರ್ಡಿಒದವರು 2 ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಅನ್ನು ನೀಡುತ್ತಿದ್ದು, ಇನ್ನೊಂದು ತಿಂಗಳಲ್ಲಿ ಬರಲಿದೆ. ಇಎಸ್ಐ ಆಸ್ಪತ್ರೆಗೆ 500 ಲೀಟರ್ ಸಾಮರ್ಥ್ಯದ ಘಟಕವನ್ನು ನೀಡಲು ಕೇಳಿದ್ದೇವೆ’ ಎಂದು ತಿಳಿಸಿದರು.</p>.<p>ಜುಲೈ 9ರಂದು ಆರೋಗ್ಯ ಸಚಿವ ಡಾ. ಸುಧಾಕರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲಾಸ್ಪತ್ರೆ ಕಟ್ಟಡ ಶಿಥಿವಾಗಿದ್ದು, ಅದನ್ನು ನವೀಕರಣ ಮಾಡುವ ನಿಟ್ಟಿನಲ್ಲಿ ತಪಾಸಣೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಜಗಳೂರು ಆಸ್ಪತ್ರೆಗೆ ಆಂಬುಲೆನ್ಸ್ ದೊರೆತಿದ್ದು ಸುಸಜ್ಜಿತವಾಗಿದೆ. ತಾಲೂಕಿನಲ್ಲಿ ಕರೊನಾ ಪ್ರಕರಣಗಳು ಮೊದಲಿನಿಂದಲೂ ನಿಯಂತ್ರಣದಲ್ಲಿವೆ. ಸಾವಿನ ಪ್ರಕರಣಗಳೂ ಕಡಿಮೆ ಇವೆ. ಸೋಂಕಿತರಿಗೆ ಎಲ್ಲ ಸೌಲಭ್ಯಗಳನ್ನೂ ನೀಡಿದ್ದೇವೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಡಿಎಚ್ಒ ಡಾ. ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ:ಕಾರ್ಗಿಲ್ ಕಂಪನಿಯವರು ಜಿಲ್ಲಾಡಳಿತಕ್ಕೆ ನೀಡಿರುವ ₹33 ಲಕ್ಷದ ಅತ್ಯಾಧುನಿಕ ಆಂಬುಲೆನ್ಸ್ ಅನ್ನು ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಶುಕ್ರವಾರ, ಜಗಳೂರು ತಾಲ್ಲೂಕು ಆಸ್ಪತ್ರೆಗೆ ಹಸ್ತಾಂತರಿಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾರ್ಗಿಲ್ ಕಂಪನಿಯವರು 3 ಹೈಟೆಕ್ ಆಂಬುಲೆನ್ಸ್ಗಳನ್ನು ಜಿಲ್ಲಾಡಳಿತಕ್ಕೆ ನೀಡಿದ್ದು, ಅವುಗಳನ್ನು ಹರಿಹರ, ದಾವಣಗೆರೆ, ಜಗಳೂರು ತಾಲ್ಲೂಕುಗಳಿಗೆ ನೀಡಲಾಗಿದೆ. ಇನ್ನೂ 3 ಆಂಬುಲೆನ್ಸ್ ನೀಡುವಂತೆ ಕಾರ್ಗಿಲ್ ಕಂಪನಿಯವರನ್ನು ಕೇಳಿದ್ದು, ಅವುಗಳನ್ನು ಇತರ ತಾಲ್ಲೂಕುಗಳಿಗೆ ನೀಡುವ ಉದ್ದೇಶವಿದೆ’ ಎಂದರು.</p>.<p>‘ಸಂಭಾವ್ಯ 3ನೇ ಅಲೆ ಎದುರಿಸುವ ನಿಟ್ಟಿನಲ್ಲಿ ವೆಂಟಿಲೇಟರ್, ಪೌಷ್ಟಿಕ ಆಹಾರ ಒದಗಿಸುವಂತೆ ಗ್ರಾಸಿಂ ಇಂಡಸ್ಟ್ರೀಸ್ನವರನ್ನು ಕೇಳಿದ್ದೇವೆ.<br />ಕೇಂದ್ರ ಸರ್ಕಾರದ ಪಿಎಂ ಕೇರ್ನಿಂದ 1 ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಮಂಜೂರಾಗಿದೆ. ಡಿಆರ್ಡಿಒದವರು 2 ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಅನ್ನು ನೀಡುತ್ತಿದ್ದು, ಇನ್ನೊಂದು ತಿಂಗಳಲ್ಲಿ ಬರಲಿದೆ. ಇಎಸ್ಐ ಆಸ್ಪತ್ರೆಗೆ 500 ಲೀಟರ್ ಸಾಮರ್ಥ್ಯದ ಘಟಕವನ್ನು ನೀಡಲು ಕೇಳಿದ್ದೇವೆ’ ಎಂದು ತಿಳಿಸಿದರು.</p>.<p>ಜುಲೈ 9ರಂದು ಆರೋಗ್ಯ ಸಚಿವ ಡಾ. ಸುಧಾಕರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲಾಸ್ಪತ್ರೆ ಕಟ್ಟಡ ಶಿಥಿವಾಗಿದ್ದು, ಅದನ್ನು ನವೀಕರಣ ಮಾಡುವ ನಿಟ್ಟಿನಲ್ಲಿ ತಪಾಸಣೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಜಗಳೂರು ಆಸ್ಪತ್ರೆಗೆ ಆಂಬುಲೆನ್ಸ್ ದೊರೆತಿದ್ದು ಸುಸಜ್ಜಿತವಾಗಿದೆ. ತಾಲೂಕಿನಲ್ಲಿ ಕರೊನಾ ಪ್ರಕರಣಗಳು ಮೊದಲಿನಿಂದಲೂ ನಿಯಂತ್ರಣದಲ್ಲಿವೆ. ಸಾವಿನ ಪ್ರಕರಣಗಳೂ ಕಡಿಮೆ ಇವೆ. ಸೋಂಕಿತರಿಗೆ ಎಲ್ಲ ಸೌಲಭ್ಯಗಳನ್ನೂ ನೀಡಿದ್ದೇವೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಡಿಎಚ್ಒ ಡಾ. ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>