<p><strong>ದಾವಣಗೆರೆ:</strong> ತಾಲ್ಲೂಕಿನ ಮಾಯಕೊಂಡ ಠಾಣೆಯ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ಮರುಳಸಿದ್ದಪ್ಪ ಅವರ ಮರಣೋತ್ತರ ಪರೀಕ್ಷೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ನಡೆಸಲಾಯಿತು. ಪ್ರಕರಣ ಸಂಬಂಧ ಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಬಂಧಿಸಲಾಗಿದೆ.</p>.<p>ಪರಿಶಿಷ್ಟ ಪಂಗಡಕ್ಕೆ ಸೇರಿದ ಮೃತ ಮರುಳಸಿದ್ದಪ್ಪ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ₹4.12.500 ಪರಿಹಾರವನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಮೃತನ ಪತ್ನಿ ವೃಂದಮ್ಮ ಅವರಿಗೆದಾವಣಗೆರೆ ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದ ಆವರಣದಲ್ಲಿ ವಿತರಿಸಿದರು.</p>.<p>‘ಇಲಾಖೆಯಿಂದ ಮೃತನ ಕುಟುಂಬಕ್ಕೆ ₹8.25 ಲಕ್ಷ ಪರಿಹಾರ ನೀಡಲು ಅವಕಾಶವಿದ್ದು, ಆರಂಭಿಕ ಹಂತದಲ್ಲಿ ಪರಿಹಾರದ ಶೇ 50ರಷ್ಟು ಪರಿಹಾರ ಧನ ನೀಡದ್ದೇವೆ ಉಳಿದ ಶೇ 50ರಷ್ಟನ್ನು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ನಂತರ ಮತ್ತೆ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p class="Subhead"><strong>ಮತ್ತೊಬ್ಬ ಕಾನ್ಸ್ಟೆಬಲ್ ಅಮಾನತು:</strong>ಪ್ರಕರಣ ಸಂಬಂಧ ಕಾನ್ಸ್ಟೆಬಲ್ ರಂಗಸ್ವಾಮಿ ಎಂಬವರನ್ನು ಅಮಾನತು ಮಾಡಿ ಬಂಧಿಸಲಾಗಿದೆ. ಬುಧವಾರ ಎಸ್ಪಿ ಹನುಮಂತರಾಯ ಈ ವಿಷಯ ತಿಳಿಸಿದರು.</p>.<p>ಠಾಣೆಯ ಪಿಎಸ್ಐ ಪ್ರಕಾಶ್, ಹೆಡ್ ಕಾನ್ಸ್ಟೆಬಲ್ ನಾಗರಾಜ್ ಮತ್ತು ಪೊಲೀಸ್ ಕಾನ್ಸ್ಟೆಬಲ್ ಶೇರ್ ಅಲಿ ಅವರನ್ನು ಮಂಗಳವಾರ ಅಮಾನತುಗೊಳಿಸಲಾಗಿತ್ತು.</p>.<p class="Subhead"><strong>ಮರಣೋತ್ತರ ಪರೀಕ್ಷೆ:</strong>ಮರುಳಸಿದ್ದಪ್ಪ ಅವರ ಶವವನ್ನು ರಾತ್ರಿಯೇ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ತಂದಿರಿಸಲಾಗಿತ್ತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಎಂ.ಎನ್. ನಂದಿನಿ ಅವರಸಮ್ಮುಖದಲ್ಲಿ ಬುಧವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ವರದಿಯ ಸಂಪೂರ್ಣ ಚಿತ್ರಣವನ್ನು ವಿಡಿಯೊ ಮಾಡಲಾಗಿದೆ.</p>.<p>‘ಯಾವುದೇ ವೇಳೆಯಲ್ಲಿ ತನಿಖೆಗಾಗಿ ಸಿಐಡಿ ಅಧಿಕಾರಿಗಳು ಬರುವ ನಿರೀಕ್ಷೆ ಇದ್ದು, ತನಿಖೆಗಾಗಿ ಮರಣೋತ್ತರ ಸಮೀಕ್ಷೆ ವರದಿಯನ್ನು ಮೇಲಧಿಕಾರಿಗಳಿಗೆ ಸಲ್ಲಿಸಲಾಗುವುದು ಅಲ್ಲದೇರಾಷ್ಟ್ರೀಯ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ವರದಿ ಸಲ್ಲಿಸಲಾಗುವುದು’ ಎಸ್ಪಿ ಹನುಮಂತರಾಯ ಮಾಧ್ಯಮದವರಿಗೆ ತಿಳಿಸಿದರು.</p>.<p class="Subhead"><strong>ಆಸ್ಪತ್ರೆ ಮುಂದೆ ಆಕ್ರೋಶ:</strong>ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಶವಾಗಾರದ ಮುಂದೆ ಸೇರಿದ ಮೃತನ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು. ಪೊಲೀಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<p>ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಜಿಲ್ಲಾ ಆಸ್ಪತ್ರೆ ಶವಾಗಾರಕ್ಕೆ ಭೇಟಿ ನೀಡಿ ಮೃತನ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ತಾಲ್ಲೂಕಿನ ಮಾಯಕೊಂಡ ಠಾಣೆಯ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ಮರುಳಸಿದ್ದಪ್ಪ ಅವರ ಮರಣೋತ್ತರ ಪರೀಕ್ಷೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ನಡೆಸಲಾಯಿತು. ಪ್ರಕರಣ ಸಂಬಂಧ ಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಬಂಧಿಸಲಾಗಿದೆ.</p>.<p>ಪರಿಶಿಷ್ಟ ಪಂಗಡಕ್ಕೆ ಸೇರಿದ ಮೃತ ಮರುಳಸಿದ್ದಪ್ಪ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ₹4.12.500 ಪರಿಹಾರವನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಮೃತನ ಪತ್ನಿ ವೃಂದಮ್ಮ ಅವರಿಗೆದಾವಣಗೆರೆ ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದ ಆವರಣದಲ್ಲಿ ವಿತರಿಸಿದರು.</p>.<p>‘ಇಲಾಖೆಯಿಂದ ಮೃತನ ಕುಟುಂಬಕ್ಕೆ ₹8.25 ಲಕ್ಷ ಪರಿಹಾರ ನೀಡಲು ಅವಕಾಶವಿದ್ದು, ಆರಂಭಿಕ ಹಂತದಲ್ಲಿ ಪರಿಹಾರದ ಶೇ 50ರಷ್ಟು ಪರಿಹಾರ ಧನ ನೀಡದ್ದೇವೆ ಉಳಿದ ಶೇ 50ರಷ್ಟನ್ನು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ನಂತರ ಮತ್ತೆ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p class="Subhead"><strong>ಮತ್ತೊಬ್ಬ ಕಾನ್ಸ್ಟೆಬಲ್ ಅಮಾನತು:</strong>ಪ್ರಕರಣ ಸಂಬಂಧ ಕಾನ್ಸ್ಟೆಬಲ್ ರಂಗಸ್ವಾಮಿ ಎಂಬವರನ್ನು ಅಮಾನತು ಮಾಡಿ ಬಂಧಿಸಲಾಗಿದೆ. ಬುಧವಾರ ಎಸ್ಪಿ ಹನುಮಂತರಾಯ ಈ ವಿಷಯ ತಿಳಿಸಿದರು.</p>.<p>ಠಾಣೆಯ ಪಿಎಸ್ಐ ಪ್ರಕಾಶ್, ಹೆಡ್ ಕಾನ್ಸ್ಟೆಬಲ್ ನಾಗರಾಜ್ ಮತ್ತು ಪೊಲೀಸ್ ಕಾನ್ಸ್ಟೆಬಲ್ ಶೇರ್ ಅಲಿ ಅವರನ್ನು ಮಂಗಳವಾರ ಅಮಾನತುಗೊಳಿಸಲಾಗಿತ್ತು.</p>.<p class="Subhead"><strong>ಮರಣೋತ್ತರ ಪರೀಕ್ಷೆ:</strong>ಮರುಳಸಿದ್ದಪ್ಪ ಅವರ ಶವವನ್ನು ರಾತ್ರಿಯೇ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ತಂದಿರಿಸಲಾಗಿತ್ತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಎಂ.ಎನ್. ನಂದಿನಿ ಅವರಸಮ್ಮುಖದಲ್ಲಿ ಬುಧವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ವರದಿಯ ಸಂಪೂರ್ಣ ಚಿತ್ರಣವನ್ನು ವಿಡಿಯೊ ಮಾಡಲಾಗಿದೆ.</p>.<p>‘ಯಾವುದೇ ವೇಳೆಯಲ್ಲಿ ತನಿಖೆಗಾಗಿ ಸಿಐಡಿ ಅಧಿಕಾರಿಗಳು ಬರುವ ನಿರೀಕ್ಷೆ ಇದ್ದು, ತನಿಖೆಗಾಗಿ ಮರಣೋತ್ತರ ಸಮೀಕ್ಷೆ ವರದಿಯನ್ನು ಮೇಲಧಿಕಾರಿಗಳಿಗೆ ಸಲ್ಲಿಸಲಾಗುವುದು ಅಲ್ಲದೇರಾಷ್ಟ್ರೀಯ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ವರದಿ ಸಲ್ಲಿಸಲಾಗುವುದು’ ಎಸ್ಪಿ ಹನುಮಂತರಾಯ ಮಾಧ್ಯಮದವರಿಗೆ ತಿಳಿಸಿದರು.</p>.<p class="Subhead"><strong>ಆಸ್ಪತ್ರೆ ಮುಂದೆ ಆಕ್ರೋಶ:</strong>ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಶವಾಗಾರದ ಮುಂದೆ ಸೇರಿದ ಮೃತನ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು. ಪೊಲೀಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<p>ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಜಿಲ್ಲಾ ಆಸ್ಪತ್ರೆ ಶವಾಗಾರಕ್ಕೆ ಭೇಟಿ ನೀಡಿ ಮೃತನ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>