<p><strong>ದಾವಣಗೆರೆ:</strong> ಜಿಲ್ಲೆಯಲ್ಲಿ ಶುಕ್ರವಾರ 44 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. 24 ಮಂದಿ ಗುಣಮುಖರಾಗಿದ್ದಾರೆ.</p>.<p>ಜಯನಗರದ 78 ವರ್ಷದ ವೃದ್ಧ ಕೋವಿಡ್ನಿಂದಾಗಿ ಸಿ.ಜಿ.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈವರೆಗೆ 261 ಮೃತಪಟ್ಟಿದ್ದಾರೆ.</p>.<p>ದಾವಣಗೆರೆ ನಗರ ಹಾಗೂ ತಾಲ್ಲೂಕಿನ 21, ಹರಿಹರ ತಾಲ್ಲೂಕಿನ 9, ಜಗಳೂರು ತಾಲ್ಲೂಕಿನ 2,ಚನ್ನಗಿರಿ ತಾಲ್ಲೂಕಿನ 4, ಹೊನ್ನಾಳಿ ತಾಲ್ಲೂಕಿನ 7 ಹಾಗೂ ಇತರೆ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಬಿಡುಗಡೆಯಾದವರಲ್ಲಿ ದಾವಣಗರೆ ನಗರ ಹಾಗೂ ತಾಲ್ಲೂಕಿನಲ್ಲಿ 12, ಹರಿಹರ ತಾಲ್ಲೂಕಿನ 6, ಚನ್ನಗಿರಿ ತಾಲ್ಲೂಕಿನ 5, ಹೊನ್ನಾಳಿ ತಾಲ್ಲೂಕಿನಲ್ಲಿ ಒಬ್ಬರು ಕೋವಿಡ್ನಿಂದ ಗುಣಮುಖರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 21,000 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 20,261 ಮಂದಿ ಗುಣಮುಖರಾಗಿದ್ದಾರೆ. 478 ಸಕ್ರಿಯ ಪ್ರಕರಣಗಳು ಇವೆ.</p>.<p class="Briefhead">ಹೆಡ್ ಕಾನ್ಸ್ ಟೆಬಲ್ ಸಾವು</p>.<p>ದಾವಣಗೆರೆ: ಇಲ್ಲಿನ ದಕ್ಷಿಣ ಸಂಚಾರ ಠಾಣೆಯ ಹೆಡ್ ಕಾನ್ಸ್ಟೆಬಲ್ ನಾರಾಯಣ ರಾಜ್ ಅರಸ್ (44) ಅವರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇವರು ದೊಡ್ಡಬಾತಿ ಗ್ರಾಮದವರಾಗಿದ್ದು, ಕೋವಿಡ್ ದೃಢಪಟ್ಟಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಈ ವಿಷಯವನ್ನು ದೃಢಪಡಿಸಿದ್ದಾರೆ.</p>.<p>1999 ಬ್ಯಾಚ್ನಲ್ಲಿ ನೇಮಕವಾಗಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.</p>.<p>ಶುಕ್ರವಾರ ಸಂಜೆ ಅಂತ್ಯ ಸಂಸ್ಕಾರ ನಡೆದಿದ್ದು, ಗೌರವ ಸೂಚಿಸಲಾಯಿತು. ಸಿಬ್ಬಂದಿ ಮೃತಪಟ್ಟಿದ್ದರಿಂದ ಎಸ್ಪಿ ಹನುಮಂತರಾಯ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿಲ್ಲ. ಶುಭಾಶಯ ಹೇಳದಂತೆ ಇತರರಿಗೂ ತಾಕೀತು ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜಿಲ್ಲೆಯಲ್ಲಿ ಶುಕ್ರವಾರ 44 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. 24 ಮಂದಿ ಗುಣಮುಖರಾಗಿದ್ದಾರೆ.</p>.<p>ಜಯನಗರದ 78 ವರ್ಷದ ವೃದ್ಧ ಕೋವಿಡ್ನಿಂದಾಗಿ ಸಿ.ಜಿ.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈವರೆಗೆ 261 ಮೃತಪಟ್ಟಿದ್ದಾರೆ.</p>.<p>ದಾವಣಗೆರೆ ನಗರ ಹಾಗೂ ತಾಲ್ಲೂಕಿನ 21, ಹರಿಹರ ತಾಲ್ಲೂಕಿನ 9, ಜಗಳೂರು ತಾಲ್ಲೂಕಿನ 2,ಚನ್ನಗಿರಿ ತಾಲ್ಲೂಕಿನ 4, ಹೊನ್ನಾಳಿ ತಾಲ್ಲೂಕಿನ 7 ಹಾಗೂ ಇತರೆ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಬಿಡುಗಡೆಯಾದವರಲ್ಲಿ ದಾವಣಗರೆ ನಗರ ಹಾಗೂ ತಾಲ್ಲೂಕಿನಲ್ಲಿ 12, ಹರಿಹರ ತಾಲ್ಲೂಕಿನ 6, ಚನ್ನಗಿರಿ ತಾಲ್ಲೂಕಿನ 5, ಹೊನ್ನಾಳಿ ತಾಲ್ಲೂಕಿನಲ್ಲಿ ಒಬ್ಬರು ಕೋವಿಡ್ನಿಂದ ಗುಣಮುಖರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 21,000 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 20,261 ಮಂದಿ ಗುಣಮುಖರಾಗಿದ್ದಾರೆ. 478 ಸಕ್ರಿಯ ಪ್ರಕರಣಗಳು ಇವೆ.</p>.<p class="Briefhead">ಹೆಡ್ ಕಾನ್ಸ್ ಟೆಬಲ್ ಸಾವು</p>.<p>ದಾವಣಗೆರೆ: ಇಲ್ಲಿನ ದಕ್ಷಿಣ ಸಂಚಾರ ಠಾಣೆಯ ಹೆಡ್ ಕಾನ್ಸ್ಟೆಬಲ್ ನಾರಾಯಣ ರಾಜ್ ಅರಸ್ (44) ಅವರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇವರು ದೊಡ್ಡಬಾತಿ ಗ್ರಾಮದವರಾಗಿದ್ದು, ಕೋವಿಡ್ ದೃಢಪಟ್ಟಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಈ ವಿಷಯವನ್ನು ದೃಢಪಡಿಸಿದ್ದಾರೆ.</p>.<p>1999 ಬ್ಯಾಚ್ನಲ್ಲಿ ನೇಮಕವಾಗಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.</p>.<p>ಶುಕ್ರವಾರ ಸಂಜೆ ಅಂತ್ಯ ಸಂಸ್ಕಾರ ನಡೆದಿದ್ದು, ಗೌರವ ಸೂಚಿಸಲಾಯಿತು. ಸಿಬ್ಬಂದಿ ಮೃತಪಟ್ಟಿದ್ದರಿಂದ ಎಸ್ಪಿ ಹನುಮಂತರಾಯ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿಲ್ಲ. ಶುಭಾಶಯ ಹೇಳದಂತೆ ಇತರರಿಗೂ ತಾಕೀತು ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>