<p><strong>ಹರಿಹರ:</strong> ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಒಟ್ಟು 135 ಮನೆಗಳು ಹಾನಿಗೀಡಾಗಿ ₹11.91 ಲಕ್ಷ ಹಾಗೂ 490.20 ಹೆಕ್ಟೇರ್ ಕೃಷಿ ಭೂಮಿ ಜಲಾವೃತ್ತವಾಗಿದೆ. ನಷ್ಟಕ್ಕೀಡಾದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಹೇಳಿದರು.</p>.<p>ನಗರದ ಪ್ರವಾಹ ಪೀಡಿತ ಗಂಗಾನಗರ ಹಾಗೂ ಎಪಿಎಂಸಿ ಆವರಣದಲ್ಲಿ ತಾಲ್ಲೂಕು ಆಡಳಿತದಿಂದ ಪ್ರಾರಂಭಿಸಿರುವ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>ಪ್ರಕೃತಿ ಪರಿಹಾರ ನಿಧಿಯಡಿಯಲ್ಲಿ ತಹಶೀಲ್ದಾರ್ ಖಾತೆಗಳಿಗೆ ಒಟ್ಟು ₹3.31ಕೋಟಿ ಅನುದಾನವನ್ನು ವರ್ಗಾಯಿಸಲಾಗದೆ. ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಹರಿಹರ ಹಾಗೂ ಹೊನ್ನಾಳಿಯಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ನಿರಾಶ್ರಿತರಿಗೆ ಆಹಾರ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಚಿಕ್ಕಬಿದಿರೆ ಹಾಗೂ ಸಾರಥಿ ಗ್ರಾಮದ ಸಂಪರ್ಕ ಸೇತುವೆ ಮುಳುಗಡೆಯಾಗಿದ್ದು, ತಾತ್ಕಲಿಕವಾಗಿ ಬೋಟ್ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ನೆರೆ ಪೀಡಿತರಿಗೆ ಶಾಶ್ವತ ಸುರಕ್ಷಿತ ಪ್ರದೇಶ ನೀಡಲಾಗುವುದು. ಸಾರಥಿ ಗ್ರಾಮದ ಸೇತುವೆ ಕಾಮಗಾರಿ ನಡೆಸಲು ಗುತ್ತಿಗೆದಾರನಿಗೆ ನೋಟಿಸ್ ಜಾರಿಗೊಳಿಸಿ, ತುರ್ತು ಕಾಮಗಾರಿಗೆ ಸೂಚನೆ ನೀಡಲಾಗುವುದು. ಜಿಲ್ಲೆಯ ತಾಲ್ಲೂಕಿನಲ್ಲಿ ಮುಂಜಾಗೃತ ಕ್ರಮವನ್ನು ಕೈಗೊಂಡಿದ್ದು, ಎಲ್ಲದಕ್ಕೂ ಜಿಲ್ಲಾಡಳಿತ ಸಿದ್ಧವಾಗಿದೆ ಎಂದರು.</p>.<p>ಶಾಸಕ ಎಸ್. ರಾಮಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀದೇವಿ ಮಂಜಪ್ಪ, ನಗರಸಭಾ ಸದಸ್ಯ ಎಸ್.ಎಂ. ವಸಂತ್, ಮಾಜಿ ಶಾಸಕ ಬಿ.ಪಿ. ಹರೀಶ್, ಉಪ ವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ತಹಶೀಲ್ದಾರ್ ರೆಹಾನ್ ಪಾಷಾ, ಪಿಎಸ್ಐ ಪ್ರಭು ಡಿ. ಕೆಳಗಿಮನೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಒಟ್ಟು 135 ಮನೆಗಳು ಹಾನಿಗೀಡಾಗಿ ₹11.91 ಲಕ್ಷ ಹಾಗೂ 490.20 ಹೆಕ್ಟೇರ್ ಕೃಷಿ ಭೂಮಿ ಜಲಾವೃತ್ತವಾಗಿದೆ. ನಷ್ಟಕ್ಕೀಡಾದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಹೇಳಿದರು.</p>.<p>ನಗರದ ಪ್ರವಾಹ ಪೀಡಿತ ಗಂಗಾನಗರ ಹಾಗೂ ಎಪಿಎಂಸಿ ಆವರಣದಲ್ಲಿ ತಾಲ್ಲೂಕು ಆಡಳಿತದಿಂದ ಪ್ರಾರಂಭಿಸಿರುವ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>ಪ್ರಕೃತಿ ಪರಿಹಾರ ನಿಧಿಯಡಿಯಲ್ಲಿ ತಹಶೀಲ್ದಾರ್ ಖಾತೆಗಳಿಗೆ ಒಟ್ಟು ₹3.31ಕೋಟಿ ಅನುದಾನವನ್ನು ವರ್ಗಾಯಿಸಲಾಗದೆ. ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಹರಿಹರ ಹಾಗೂ ಹೊನ್ನಾಳಿಯಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ನಿರಾಶ್ರಿತರಿಗೆ ಆಹಾರ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಚಿಕ್ಕಬಿದಿರೆ ಹಾಗೂ ಸಾರಥಿ ಗ್ರಾಮದ ಸಂಪರ್ಕ ಸೇತುವೆ ಮುಳುಗಡೆಯಾಗಿದ್ದು, ತಾತ್ಕಲಿಕವಾಗಿ ಬೋಟ್ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ನೆರೆ ಪೀಡಿತರಿಗೆ ಶಾಶ್ವತ ಸುರಕ್ಷಿತ ಪ್ರದೇಶ ನೀಡಲಾಗುವುದು. ಸಾರಥಿ ಗ್ರಾಮದ ಸೇತುವೆ ಕಾಮಗಾರಿ ನಡೆಸಲು ಗುತ್ತಿಗೆದಾರನಿಗೆ ನೋಟಿಸ್ ಜಾರಿಗೊಳಿಸಿ, ತುರ್ತು ಕಾಮಗಾರಿಗೆ ಸೂಚನೆ ನೀಡಲಾಗುವುದು. ಜಿಲ್ಲೆಯ ತಾಲ್ಲೂಕಿನಲ್ಲಿ ಮುಂಜಾಗೃತ ಕ್ರಮವನ್ನು ಕೈಗೊಂಡಿದ್ದು, ಎಲ್ಲದಕ್ಕೂ ಜಿಲ್ಲಾಡಳಿತ ಸಿದ್ಧವಾಗಿದೆ ಎಂದರು.</p>.<p>ಶಾಸಕ ಎಸ್. ರಾಮಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀದೇವಿ ಮಂಜಪ್ಪ, ನಗರಸಭಾ ಸದಸ್ಯ ಎಸ್.ಎಂ. ವಸಂತ್, ಮಾಜಿ ಶಾಸಕ ಬಿ.ಪಿ. ಹರೀಶ್, ಉಪ ವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ತಹಶೀಲ್ದಾರ್ ರೆಹಾನ್ ಪಾಷಾ, ಪಿಎಸ್ಐ ಪ್ರಭು ಡಿ. ಕೆಳಗಿಮನೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>