<p><strong>ಚನ್ನಗಿರಿ</strong>: ‘ಹಿಂದೂ ಸಾಮ್ರಾಜ್ಯ ಸಂಸ್ಥಾಪಕ ಶಿವಾಜಿ ಮಹಾರಾಜರ ತಂದೆ ಷಹಾಜೀ ರಾಜೇ ಭೋಂಸ್ಲೆ ಅವರ ಸಮಾಧಿ ಸ್ಥಳ ಇರುವ ತಾಲ್ಲೂಕಿನ ಹೊದಿಗೆರೆ ಗ್ರಾಮದ ಹಾಗೂ ಸಮಾಧಿ ಸ್ಥಳದ ಅಭಿವೃದ್ಧಿಗೆ ರಾಜ್ಯ ಬಜೆಟ್ನಲ್ಲಿ ₹ 5 ಕೋಟಿ ಅನುದಾನ ಮೀಸಲಿರಿಸಲಾಗಿದೆ.</p>.<p>ಷಹಾಜೀ ರಾಜೇ ಭೋಂಸ್ಲೆ ಅವರು 1664ರಲ್ಲಿ ಹೊದಿಗೆರೆ ಗ್ರಾಮದ ಬಳಿಯ ಕಾಡಿನಲ್ಲಿ ಬೇಟೆಯಾಡುವ ಸಂದರ್ಭ ಕುದುರೆಯ ಮೇಲಿಂದ ಬಿದ್ದು ಸಾವನ್ನಪ್ಪಿದ್ದರು. ಅವರ ಅಂತ್ಯಕ್ರಿಯೆಯನ್ನು ಈ ಗ್ರಾಮದ ಬಳಿ ನೆರವೇರಿಸಿ ಸಮಾಧಿ ನಿರ್ಮಿಸಲಾಗಿತ್ತು. ಈ ಸ್ಥಳವು ಕೇಂದ್ರ ಪುರಾತತ್ವ ಇಲಾಖೆ ವ್ಯಾಪ್ತಿಗೆ ಸೇರಿದೆ.</p>.<p>ಪುರಾತತ್ವ ಇಲಾಖೆ ಸಮಾಧಿ ಸ್ಥಳ ಇರುವ ಜಾಗಕ್ಕೆ ಕಾಪೌಂಡ್ ನಿರ್ಮಿಸಿ, ಕೆಲವೊಂದು ಸಣ್ಣಪುಟ್ಟ ಅಭಿವೃದ್ಧಿ ಕಾರ್ಯಗಳನ್ನು ಮಾತ್ರ ಮಾಡಿತ್ತಾದರೂ ಸಮಗ್ರ ಅಭಿವೃದ್ಧಿ ಕಾಣದೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ. 2008ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನವಿ ಮೇರೆಗೆ ₹ 1 ಕೋಟಿ<br />ಅನುದಾನ ನೀಡಿದ್ದರು. ಈ ಅನುದಾನದಲ್ಲಿ ಬೃಹತ್ ಪ್ರಮಾಣದ ಸಮುದಾಯ ಭವನ ನಿರ್ಮಿಸಲು ಮರಾಠಾ ಗೋಸಾಯಿ ಪೀಠದ ಭಾರತಿನಂದ ಸ್ವಾಮೀಜಿ ಮುಂದಾಗಿದ್ದರು. ಆದರೆ, ಭವನದ ನಿರ್ಮಾಣಕ್ಕೆ ಅನುದಾನದ ಕೊರತೆಯಿಂದಾಗಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಸ್ವಾಮೀಜಿ ನಿಧನ ನಂತರ ಈ ಸಮಾಧಿ ಸ್ಥಳ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಅಭಿವೃದ್ಧಿಯ ಕನಸು ಕನಸಾಗಿಯೇ ಉಳಿದಿದೆ.</p>.<p>ಕ್ಷತ್ರಿಯ ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮೂಳೆ ಹಾಗೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಮಾಧಿ ಸ್ಥಳದ ಅಭಿವೃದ್ಧಿಗೆ ಅನುದಾನ ನೀಡುವಂತೆ ಒತ್ತಾಯಿಸಿದ್ದರು.</p>.<p>ಮುಖ್ಯಮಂತ್ರಿಯವರು ಸಮಾಧಿ ಸ್ಥಳದ ಅಭಿವೃದ್ಧಿಗೆ ₹ 5 ಕೋಟಿ ಅನುದಾನ ಘೋಷಿಸಿರುವುದು ಸರ್ಕಾರವು ಮರಾಠಾ ಸಮುದಾಯಕ್ಕೆ ನೀಡಿದ ಕೊಡುಗೆಯಾಗಿದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ತಾಲ್ಲೂಕು ಮರಾಠಾ ಸಮಾಜದ ಮುಖಂಡ ಕುಬೇಂದ್ರೋಜಿ ರಾವ್ ಸರ್ಕಾರವನ್ನು<br />ಅಭಿನಂದಿಸಿದ್ದಾರೆ.</p>.<p>......</p>.<p>ಷಹಜಿ ಮಹಾರಾಜರ ಸಮಾಧಿ ಅಭಿವೃದ್ಧಿಗೆ ₹ 5 ಕೋಟಿ ಅನುದಾನ ನೀಡಿದ್ದು, ಸಮಾಜದವರ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಿರುವುದು ಅಭಿನಂದನೀಯ</p>.<p><em><strong>-ಯಶವಂತ ರಾವ್ ಜಾಧವ್, ಗೌರವಾಧ್ಯಕ್ಷ, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ‘ಹಿಂದೂ ಸಾಮ್ರಾಜ್ಯ ಸಂಸ್ಥಾಪಕ ಶಿವಾಜಿ ಮಹಾರಾಜರ ತಂದೆ ಷಹಾಜೀ ರಾಜೇ ಭೋಂಸ್ಲೆ ಅವರ ಸಮಾಧಿ ಸ್ಥಳ ಇರುವ ತಾಲ್ಲೂಕಿನ ಹೊದಿಗೆರೆ ಗ್ರಾಮದ ಹಾಗೂ ಸಮಾಧಿ ಸ್ಥಳದ ಅಭಿವೃದ್ಧಿಗೆ ರಾಜ್ಯ ಬಜೆಟ್ನಲ್ಲಿ ₹ 5 ಕೋಟಿ ಅನುದಾನ ಮೀಸಲಿರಿಸಲಾಗಿದೆ.</p>.<p>ಷಹಾಜೀ ರಾಜೇ ಭೋಂಸ್ಲೆ ಅವರು 1664ರಲ್ಲಿ ಹೊದಿಗೆರೆ ಗ್ರಾಮದ ಬಳಿಯ ಕಾಡಿನಲ್ಲಿ ಬೇಟೆಯಾಡುವ ಸಂದರ್ಭ ಕುದುರೆಯ ಮೇಲಿಂದ ಬಿದ್ದು ಸಾವನ್ನಪ್ಪಿದ್ದರು. ಅವರ ಅಂತ್ಯಕ್ರಿಯೆಯನ್ನು ಈ ಗ್ರಾಮದ ಬಳಿ ನೆರವೇರಿಸಿ ಸಮಾಧಿ ನಿರ್ಮಿಸಲಾಗಿತ್ತು. ಈ ಸ್ಥಳವು ಕೇಂದ್ರ ಪುರಾತತ್ವ ಇಲಾಖೆ ವ್ಯಾಪ್ತಿಗೆ ಸೇರಿದೆ.</p>.<p>ಪುರಾತತ್ವ ಇಲಾಖೆ ಸಮಾಧಿ ಸ್ಥಳ ಇರುವ ಜಾಗಕ್ಕೆ ಕಾಪೌಂಡ್ ನಿರ್ಮಿಸಿ, ಕೆಲವೊಂದು ಸಣ್ಣಪುಟ್ಟ ಅಭಿವೃದ್ಧಿ ಕಾರ್ಯಗಳನ್ನು ಮಾತ್ರ ಮಾಡಿತ್ತಾದರೂ ಸಮಗ್ರ ಅಭಿವೃದ್ಧಿ ಕಾಣದೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ. 2008ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನವಿ ಮೇರೆಗೆ ₹ 1 ಕೋಟಿ<br />ಅನುದಾನ ನೀಡಿದ್ದರು. ಈ ಅನುದಾನದಲ್ಲಿ ಬೃಹತ್ ಪ್ರಮಾಣದ ಸಮುದಾಯ ಭವನ ನಿರ್ಮಿಸಲು ಮರಾಠಾ ಗೋಸಾಯಿ ಪೀಠದ ಭಾರತಿನಂದ ಸ್ವಾಮೀಜಿ ಮುಂದಾಗಿದ್ದರು. ಆದರೆ, ಭವನದ ನಿರ್ಮಾಣಕ್ಕೆ ಅನುದಾನದ ಕೊರತೆಯಿಂದಾಗಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಸ್ವಾಮೀಜಿ ನಿಧನ ನಂತರ ಈ ಸಮಾಧಿ ಸ್ಥಳ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಅಭಿವೃದ್ಧಿಯ ಕನಸು ಕನಸಾಗಿಯೇ ಉಳಿದಿದೆ.</p>.<p>ಕ್ಷತ್ರಿಯ ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮೂಳೆ ಹಾಗೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಮಾಧಿ ಸ್ಥಳದ ಅಭಿವೃದ್ಧಿಗೆ ಅನುದಾನ ನೀಡುವಂತೆ ಒತ್ತಾಯಿಸಿದ್ದರು.</p>.<p>ಮುಖ್ಯಮಂತ್ರಿಯವರು ಸಮಾಧಿ ಸ್ಥಳದ ಅಭಿವೃದ್ಧಿಗೆ ₹ 5 ಕೋಟಿ ಅನುದಾನ ಘೋಷಿಸಿರುವುದು ಸರ್ಕಾರವು ಮರಾಠಾ ಸಮುದಾಯಕ್ಕೆ ನೀಡಿದ ಕೊಡುಗೆಯಾಗಿದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ತಾಲ್ಲೂಕು ಮರಾಠಾ ಸಮಾಜದ ಮುಖಂಡ ಕುಬೇಂದ್ರೋಜಿ ರಾವ್ ಸರ್ಕಾರವನ್ನು<br />ಅಭಿನಂದಿಸಿದ್ದಾರೆ.</p>.<p>......</p>.<p>ಷಹಜಿ ಮಹಾರಾಜರ ಸಮಾಧಿ ಅಭಿವೃದ್ಧಿಗೆ ₹ 5 ಕೋಟಿ ಅನುದಾನ ನೀಡಿದ್ದು, ಸಮಾಜದವರ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಿರುವುದು ಅಭಿನಂದನೀಯ</p>.<p><em><strong>-ಯಶವಂತ ರಾವ್ ಜಾಧವ್, ಗೌರವಾಧ್ಯಕ್ಷ, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>