<p><strong>ಸಂತೇಬೆನ್ನೂರು:</strong>ಅಂತರ್ಜಲ ವೃದ್ಧಿಸಲು ಅರಳಿಕಟ್ಟೆ ಗ್ರಾಮದ ಗೋಮಾಳದಲ್ಲಿ ನೂತನ ಕೆರೆ ನಿರ್ಮಾಣಕ್ಕೆ ₹ 5 ಕೋಟಿ ಮಂಜೂರು ಮಾಡಲಾಗಿದೆ. ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.</p>.<p>ಸಮೀಪದ ಅರಳಿಕಟ್ಟೆ ಗ್ರಾಮದಲ್ಲಿ ಬುಧವಾರ ಕಾಕನೂರು ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅರಳಿಕಟ್ಟೆ ಗೋಮಾಳದ 5 ಎಕರೆಯಲ್ಲಿ 134 ನಿವೇಶನಗಳಿವೆ. ಅರ್ಹ 90 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು. ಸದ್ಯ ಪರಿಶಿಷ್ಟ ಜಾತಿ/ವರ್ಗದವರಿಗೆ ಮನೆ ಕಟ್ಟಲು ₹ 2 ಲಕ್ಷ ಹಾಗೂ ಸಾಮಾನ್ಯ ವರ್ಗದವರಿಗೆ ₹ 1.50 ಲಕ್ಷ ನೀಡಲು ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ 1,227 ಮನೆಗಳನ್ನು ನಿರ್ಮಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ವಿಕಾಸ್ ಯೋಜನೆಯಡಿಯಲ್ಲಿ ತಾಲ್ಲೂಕಿನ ರೈತರಿಗೆ ₹ 101 ಕೋಟಿ ನೀಡಲಾಗಿದೆ ಎಂದರು.</p>.<p>ತಾಲ್ಲೂಕಿನ 100 ಮಹಿಳಾ ಸಂಘಗಳಿಗೆ ಶೀಘ್ರ ತಲಾ ₹ 1 ಲಕ್ಷ ಮಂಜೂರು ಮಾಡಲಾಗುವುದು. ಸುಪ್ತ ನಿಧಿ ಯೋಜನೆಯಲ್ಲಿ ನಾಲ್ಕು ಸಂಘಗಳಿಗೆ ತಲಾ ₹ 15, 000 ನೀಡಲಾಗುವುದು ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ಅಣ್ಣಮ್ಮ, ಸದಸ್ಯರಾದ ಅಶೋಕ, ಸವಿತಾ, ಬೆಸ್ಕಾಂ ಎಇಇ ಪ್ರವೀಣ್, ಎಸ್ಐ ಶಿವರುದ್ರಪ್ಪ ಮೇಟಿ, ಪಿಡಿಒ ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಬೆನ್ನೂರು:</strong>ಅಂತರ್ಜಲ ವೃದ್ಧಿಸಲು ಅರಳಿಕಟ್ಟೆ ಗ್ರಾಮದ ಗೋಮಾಳದಲ್ಲಿ ನೂತನ ಕೆರೆ ನಿರ್ಮಾಣಕ್ಕೆ ₹ 5 ಕೋಟಿ ಮಂಜೂರು ಮಾಡಲಾಗಿದೆ. ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.</p>.<p>ಸಮೀಪದ ಅರಳಿಕಟ್ಟೆ ಗ್ರಾಮದಲ್ಲಿ ಬುಧವಾರ ಕಾಕನೂರು ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅರಳಿಕಟ್ಟೆ ಗೋಮಾಳದ 5 ಎಕರೆಯಲ್ಲಿ 134 ನಿವೇಶನಗಳಿವೆ. ಅರ್ಹ 90 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು. ಸದ್ಯ ಪರಿಶಿಷ್ಟ ಜಾತಿ/ವರ್ಗದವರಿಗೆ ಮನೆ ಕಟ್ಟಲು ₹ 2 ಲಕ್ಷ ಹಾಗೂ ಸಾಮಾನ್ಯ ವರ್ಗದವರಿಗೆ ₹ 1.50 ಲಕ್ಷ ನೀಡಲು ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ 1,227 ಮನೆಗಳನ್ನು ನಿರ್ಮಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ವಿಕಾಸ್ ಯೋಜನೆಯಡಿಯಲ್ಲಿ ತಾಲ್ಲೂಕಿನ ರೈತರಿಗೆ ₹ 101 ಕೋಟಿ ನೀಡಲಾಗಿದೆ ಎಂದರು.</p>.<p>ತಾಲ್ಲೂಕಿನ 100 ಮಹಿಳಾ ಸಂಘಗಳಿಗೆ ಶೀಘ್ರ ತಲಾ ₹ 1 ಲಕ್ಷ ಮಂಜೂರು ಮಾಡಲಾಗುವುದು. ಸುಪ್ತ ನಿಧಿ ಯೋಜನೆಯಲ್ಲಿ ನಾಲ್ಕು ಸಂಘಗಳಿಗೆ ತಲಾ ₹ 15, 000 ನೀಡಲಾಗುವುದು ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ಅಣ್ಣಮ್ಮ, ಸದಸ್ಯರಾದ ಅಶೋಕ, ಸವಿತಾ, ಬೆಸ್ಕಾಂ ಎಇಇ ಪ್ರವೀಣ್, ಎಸ್ಐ ಶಿವರುದ್ರಪ್ಪ ಮೇಟಿ, ಪಿಡಿಒ ಆಶಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>