<p><strong>ದಾವಣಗೆರೆ: </strong>ರಾಜ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ ಹಾಗೂ ಅನಂತಕುಮಾರ್ ಹೆಗಡೆ ಅಂಥವರು ಮೊದಲು ಪರಿವರ್ತನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ವ್ಯಂಗ್ಯವಾಡಿದರು.</p>.<p>ಹಿಂದೆ ಬಿಜೆಪಿ ಆಡಳಿತದಲ್ಲಿ ನಡೆದ ಭ್ರಷ್ಟಾಚಾರ ಗಳನ್ನು ಜನರು ಕಂಡಿದ್ದಾರೆ. ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ. ಅದು ಸಾಧ್ಯವಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ವಾಗ್ದಾಳಿ ನಡೆಸಿದರು.</p>.<p>ರಾಜ್ಯದ ಇತಿಹಾಸದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋದ ಮುಖ್ಯಮಂತ್ರಿ ಇದ್ದರೆ ಯಡಿಯೂರಪ್ಪ ಮಾತ್ರ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಲವು ಮುಖಂಡರು ಈಗಾಗಲೇ ಜೈಲಿಗೆ ಹೋಗಿ ಬಂದಿದ್ದಾರೆ. ಇಂಥವರೆಲ್ಲ ಈಗ ಪರಿವರ್ತನಾ ಯಾತ್ರೆ ಮಾಡುತ್ತಿದ್ದಾರೆ ಎಂದರು.</p>.<p>ರಾಜ್ಯದಲ್ಲಿ 156 ಪರಿವರ್ತನಾ ಯಾತ್ರೆಗಳನ್ನು ನಡೆಸಿ 1.5 ಕೋಟಿ ಜನರನ್ನು ತಲುಪಿರುವುದಾಗಿ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ. ಕೆಲ ಯಾತ್ರೆಯಲ್ಲಿ 10 ಸಾವಿರ ಜನರೂ ಸೇರಿರಲಿಲ್ಲ ಎಂದು ಕುಟುಕಿದರು.</p>.<p>ಉತ್ತರ ಪ್ರದೇಶ ಅಭಿವೃದ್ಧಿಯಲ್ಲಿ ಹಿಂದುಳಿದೆ. ಆರೋಗ್ಯ ವ್ಯವಸ್ಥೆ ಶೋಚನೀಯವಾಗಿದೆ. ಅಂತಹ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಂಥ ಕೋಮುವಾದಿಗಳನ್ನು ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಕರೆಸುತ್ತಿದ್ದಾರೆ.</p>.<p>ಸರಣಿ ರೈತರ ಆತ್ಮಹತ್ಯೆಗಳು ನಡೆದಾಗ ರಾಜ್ಯಕ್ಕೆ ಕಾಲಿಡದ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬರಲು ಸಿದ್ಧರಾಗಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಲ್ಲಾವಲಿ ಘಾಜಿಖಾನ್, ಜಿಯಾವುಲ್ಲ, ಇರ್ಫಾನ್, ಫಾರೂಖ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ರಾಜ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ ಹಾಗೂ ಅನಂತಕುಮಾರ್ ಹೆಗಡೆ ಅಂಥವರು ಮೊದಲು ಪರಿವರ್ತನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ವ್ಯಂಗ್ಯವಾಡಿದರು.</p>.<p>ಹಿಂದೆ ಬಿಜೆಪಿ ಆಡಳಿತದಲ್ಲಿ ನಡೆದ ಭ್ರಷ್ಟಾಚಾರ ಗಳನ್ನು ಜನರು ಕಂಡಿದ್ದಾರೆ. ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ. ಅದು ಸಾಧ್ಯವಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ವಾಗ್ದಾಳಿ ನಡೆಸಿದರು.</p>.<p>ರಾಜ್ಯದ ಇತಿಹಾಸದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋದ ಮುಖ್ಯಮಂತ್ರಿ ಇದ್ದರೆ ಯಡಿಯೂರಪ್ಪ ಮಾತ್ರ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಲವು ಮುಖಂಡರು ಈಗಾಗಲೇ ಜೈಲಿಗೆ ಹೋಗಿ ಬಂದಿದ್ದಾರೆ. ಇಂಥವರೆಲ್ಲ ಈಗ ಪರಿವರ್ತನಾ ಯಾತ್ರೆ ಮಾಡುತ್ತಿದ್ದಾರೆ ಎಂದರು.</p>.<p>ರಾಜ್ಯದಲ್ಲಿ 156 ಪರಿವರ್ತನಾ ಯಾತ್ರೆಗಳನ್ನು ನಡೆಸಿ 1.5 ಕೋಟಿ ಜನರನ್ನು ತಲುಪಿರುವುದಾಗಿ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ. ಕೆಲ ಯಾತ್ರೆಯಲ್ಲಿ 10 ಸಾವಿರ ಜನರೂ ಸೇರಿರಲಿಲ್ಲ ಎಂದು ಕುಟುಕಿದರು.</p>.<p>ಉತ್ತರ ಪ್ರದೇಶ ಅಭಿವೃದ್ಧಿಯಲ್ಲಿ ಹಿಂದುಳಿದೆ. ಆರೋಗ್ಯ ವ್ಯವಸ್ಥೆ ಶೋಚನೀಯವಾಗಿದೆ. ಅಂತಹ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಂಥ ಕೋಮುವಾದಿಗಳನ್ನು ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಕರೆಸುತ್ತಿದ್ದಾರೆ.</p>.<p>ಸರಣಿ ರೈತರ ಆತ್ಮಹತ್ಯೆಗಳು ನಡೆದಾಗ ರಾಜ್ಯಕ್ಕೆ ಕಾಲಿಡದ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬರಲು ಸಿದ್ಧರಾಗಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಲ್ಲಾವಲಿ ಘಾಜಿಖಾನ್, ಜಿಯಾವುಲ್ಲ, ಇರ್ಫಾನ್, ಫಾರೂಖ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>