ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: 56 ಜನರಿಗೆ ಕೊರೊನಾ, 70 ಮಂದಿ ಗುಣಮುಖ

Last Updated 31 ಅಕ್ಟೋಬರ್ 2020, 4:14 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ56 ಜನರಿಗೆಕೊರೊನಾ ಇರುವುದು ಶುಕ್ರವಾರ ದೃಢಪಟ್ಟಿದೆ. ಚಿಗಟೇರಿ ಆಸ್ಪತ್ರೆಗೆ ದಾಖಲಾಗಿದ್ದ ಹೊರ ಜಿಲ್ಲೆಯ ಮಹಿಳೆ ಮೃತಪಟ್ಟಿದ್ದಾರೆ. 70 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಕೋವಿಡ್‌ ದೃಢಪಟ್ಟಿದ್ದ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಹುಲಿಯಾಳದ 58 ವರ್ಷದ ಮಹಿಳೆ ಅಧಿಕ ರಕ್ತದೊತ್ತಡ, ಮಧುಮೇಹದಿಂದ ನಿಧನರಾದರು.

ದಾವಣಗೆರೆ ತಾಲ್ಲೂಕಿನಲ್ಲಿ 19, ಹರಿಹರ ತಾಲ್ಲೂಕಿನಲ್ಲಿ 12, ಹೊನ್ನಾಳಿ–ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 11, ಜಗಳೂರು ತಾಲ್ಲೂಕಿನಲ್ಲಿ 4 ಹಾಗೂ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 9 ಮಂದಿಗೆ ಕೊರೊನಾ ಬಂದಿದೆ. ಇಲ್ಲಿನ ಜಿಗಟೇರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಹೊರ ಜಿಲ್ಲೆಯ ಒಬ್ಬರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಈವರೆಗೆ 20,728 ಮಂದಿಗೆ ಸೋಂಕು ತಗುಲಿದೆ. 19,692 ಜನ ಗುಣಮುಖರಾಗಿದ್ದಾರೆ. 257 ಮಂದಿ ಮೃತಪಟ್ಟಿದ್ದಾರೆ. 779 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT