<p><strong>ದಾವಣಗೆರೆ: </strong>‘ಕಂದಾಯ ಗ್ರಾಮಗಳಿಗೆ ಹಕ್ಕುಪತ್ರ ನೀಡುವ ಮೂಲಕ ಯಾವ ಸರ್ಕಾರವೂ ಮಾಡದ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.</p>.<p>ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.</p>.<p>‘ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭ ಹಲವು ಮಂದಿ ಹಕ್ಕುಪತ್ರ ನೀಡಬೇಕು ಎಂದು ಮನವಿ ಮಾಡುತ್ತಿದ್ದರು. ಈ ಸಮಸ್ಯೆಯನ್ನು ಮನಗಂಡು ಹಕ್ಕುಪತ್ರ ನೀಡಲಾಗಿದೆ. ಜಿಲ್ಲೆಯಲ್ಲಿ 3,763 ಮಂದಿಗೆ ಹಕ್ಕುಪತ್ರವನ್ನು ಆಯಾ ತಾಲ್ಲೂಕುಗಳಲ್ಲಿ ನೀಡಲಾಗಿದೆ. ದಾವಣಗೆರೆ ತಾಲ್ಲೂಕಿನ 10 ಗ್ರಾಮಗಳ 598 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ’ ಎಂದು ಹೇಳಿದರು.</p>.<p>‘ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ನಾವೇ ಒಪ್ಪಿಗೆ ನೀಡಿದ್ದರೂ, ಅಧಿಕಾರಿಗಳು ನಮ್ಮ ಗಮನಕ್ಕೆ ತಾರದೇ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ. ಸೂರು ಇಲ್ಲದವರನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು ಆಯ್ಕೆ ಮಾಡಬೇಕು’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>‘ಸಿದ್ದರಾಮಯ್ಯ ಸರ್ಕಾರದಲ್ಲಿ ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಾಗಿದ್ದಾಗ ಸರ್ಕಾರಿ ಮತ್ತು ಖಾಸಗಿ ನಿವೇಶನಗಳಲ್ಲಿ ವಾಸಿಸುವವರಿಗೆ ಇರುವವನೇ ಭೂಮಿ ಒಡೆಯ ಎಂಬ ಯೋಜನೆ ಜಾರಿಗೆ ತರಲಾಗಿತ್ತು. ಈ ಯೋಜನೆಯಡಿ ಅರ್ಹರನ್ನು ಗುರುತಿಸಿ ನಿವೇಶನದ ಹಕ್ಕು ನೀಡಲಾಗುತ್ತಿದೆ. ನಮ್ಮ ಕ್ಷೇತ್ರದಲ್ಲೇ ಸಾವಿರಾರು ಬಡವರು ನಿವೇಶನ ಇಲ್ಲದೇ ಮನವಿ ಸಲ್ಲಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಎಂ.ಬಿ. ಅಶ್ವತ್ಥ್ ಮಾತನಾಡಿ, ‘ಕಂದಾಯ ಗ್ರಾಮಗಳಿಗೆ ಹಕ್ಕುಪತ್ರ ನೀಡಿದ್ದು, ಈ ಜಾಗವನ್ನು 15 ವರ್ಷಗಳವರೆಗೆ ಬೇರೆಯವರಿಗೆ ಪರಭಾರೆ ಮಾಡಲು ಅವಕಾಶವಿಲ್ಲ. ಆದರೆ ವಂಶಾವಳಿ ವಿಭಾಗ ಮಾಡಿಕೊಳ್ಳಲು ಸಮಸ್ಯೆ ಇಲ್ಲ. ಈ ಸ್ವತ್ತು ನಿಮ್ಮ ಮನೆತನಕ್ಕೆ ಉಳಿದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಈ ಹಕ್ಕುಪತ್ರದ ಆಧಾರದಲ್ಲಿ ಸಾಲ ತೆಗೆದುಕೊಳ್ಳಬಹುದು, ಜಾಗವನ್ನು ಬೇರೆಯವರಿಗೆ ಅಡಮಾನ ಇಡಬಹುದಾಗಿದೆ’ ಎಂದು ಹೇಳಿದರು.</p>.<p>‘94 ಸಿ’ ಅಡಿಯಲ್ಲಿ ಈಗಾಗಲೇ ಹಕ್ಕುಪತ್ರ ಪಡೆದವರಿಗೆ ಹೊಸ ಹಕ್ಕುಪತ್ರ ಅಗತ್ಯವಿಲ್ಲ. ಅದೇ ಪತ್ರ ಮುಂದುವರಿಯುತ್ತದೆ’ ಎಂದು ಹೇಳಿದರು.</p>.<p>‘ಇದು ತಾತ್ಕಾಲಿಕ ಪತ್ರವಷ್ಟೇ. ಜಾಗದ ಚೆಕ್ಕುಬಂಧಿಯನ್ನು ತಯಾರಿಸಿ ಈ ಹಕ್ಕುಪತ್ರವನ್ನು ಜಿಲ್ಲಾ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡುವ ಮೂಲಕ 2 ವರ್ಷಗಳ ಅವಧಿಯಲ್ಲಿ ಹೊಸ ಹಕ್ಕುಪತ್ರವನ್ನು ನೀಡಲಾಗುವುದು. ಅಲ್ಲಿಯವರೆಗೂ ಈ ಹಕ್ಕುಪತ್ರವನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಫಲಾನುಭವಿಗಳು ಬೇರೆ ಕಡೆ ನಿವೇಶನ ಹೊಂದಿದ್ದರೆ ಹಕ್ಕುಪತ್ರ ತನ್ನಿಂದ ತಾನೇ ರದ್ದಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಡಿಡಿಎಲ್ಆರ್ ಭಾವನಾ, ಧೂಡಾ ಆಯುಕ್ತ ಬಸವನಗೌಡ, ಎಡಿಎಲ್ಆರ್ ನಾಗಭೂಷಣ್ ಕಾರ್ಯಕ್ರಮದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>‘ಕಂದಾಯ ಗ್ರಾಮಗಳಿಗೆ ಹಕ್ಕುಪತ್ರ ನೀಡುವ ಮೂಲಕ ಯಾವ ಸರ್ಕಾರವೂ ಮಾಡದ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.</p>.<p>ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.</p>.<p>‘ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭ ಹಲವು ಮಂದಿ ಹಕ್ಕುಪತ್ರ ನೀಡಬೇಕು ಎಂದು ಮನವಿ ಮಾಡುತ್ತಿದ್ದರು. ಈ ಸಮಸ್ಯೆಯನ್ನು ಮನಗಂಡು ಹಕ್ಕುಪತ್ರ ನೀಡಲಾಗಿದೆ. ಜಿಲ್ಲೆಯಲ್ಲಿ 3,763 ಮಂದಿಗೆ ಹಕ್ಕುಪತ್ರವನ್ನು ಆಯಾ ತಾಲ್ಲೂಕುಗಳಲ್ಲಿ ನೀಡಲಾಗಿದೆ. ದಾವಣಗೆರೆ ತಾಲ್ಲೂಕಿನ 10 ಗ್ರಾಮಗಳ 598 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ’ ಎಂದು ಹೇಳಿದರು.</p>.<p>‘ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ನಾವೇ ಒಪ್ಪಿಗೆ ನೀಡಿದ್ದರೂ, ಅಧಿಕಾರಿಗಳು ನಮ್ಮ ಗಮನಕ್ಕೆ ತಾರದೇ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ. ಸೂರು ಇಲ್ಲದವರನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು ಆಯ್ಕೆ ಮಾಡಬೇಕು’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>‘ಸಿದ್ದರಾಮಯ್ಯ ಸರ್ಕಾರದಲ್ಲಿ ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಾಗಿದ್ದಾಗ ಸರ್ಕಾರಿ ಮತ್ತು ಖಾಸಗಿ ನಿವೇಶನಗಳಲ್ಲಿ ವಾಸಿಸುವವರಿಗೆ ಇರುವವನೇ ಭೂಮಿ ಒಡೆಯ ಎಂಬ ಯೋಜನೆ ಜಾರಿಗೆ ತರಲಾಗಿತ್ತು. ಈ ಯೋಜನೆಯಡಿ ಅರ್ಹರನ್ನು ಗುರುತಿಸಿ ನಿವೇಶನದ ಹಕ್ಕು ನೀಡಲಾಗುತ್ತಿದೆ. ನಮ್ಮ ಕ್ಷೇತ್ರದಲ್ಲೇ ಸಾವಿರಾರು ಬಡವರು ನಿವೇಶನ ಇಲ್ಲದೇ ಮನವಿ ಸಲ್ಲಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಎಂ.ಬಿ. ಅಶ್ವತ್ಥ್ ಮಾತನಾಡಿ, ‘ಕಂದಾಯ ಗ್ರಾಮಗಳಿಗೆ ಹಕ್ಕುಪತ್ರ ನೀಡಿದ್ದು, ಈ ಜಾಗವನ್ನು 15 ವರ್ಷಗಳವರೆಗೆ ಬೇರೆಯವರಿಗೆ ಪರಭಾರೆ ಮಾಡಲು ಅವಕಾಶವಿಲ್ಲ. ಆದರೆ ವಂಶಾವಳಿ ವಿಭಾಗ ಮಾಡಿಕೊಳ್ಳಲು ಸಮಸ್ಯೆ ಇಲ್ಲ. ಈ ಸ್ವತ್ತು ನಿಮ್ಮ ಮನೆತನಕ್ಕೆ ಉಳಿದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಈ ಹಕ್ಕುಪತ್ರದ ಆಧಾರದಲ್ಲಿ ಸಾಲ ತೆಗೆದುಕೊಳ್ಳಬಹುದು, ಜಾಗವನ್ನು ಬೇರೆಯವರಿಗೆ ಅಡಮಾನ ಇಡಬಹುದಾಗಿದೆ’ ಎಂದು ಹೇಳಿದರು.</p>.<p>‘94 ಸಿ’ ಅಡಿಯಲ್ಲಿ ಈಗಾಗಲೇ ಹಕ್ಕುಪತ್ರ ಪಡೆದವರಿಗೆ ಹೊಸ ಹಕ್ಕುಪತ್ರ ಅಗತ್ಯವಿಲ್ಲ. ಅದೇ ಪತ್ರ ಮುಂದುವರಿಯುತ್ತದೆ’ ಎಂದು ಹೇಳಿದರು.</p>.<p>‘ಇದು ತಾತ್ಕಾಲಿಕ ಪತ್ರವಷ್ಟೇ. ಜಾಗದ ಚೆಕ್ಕುಬಂಧಿಯನ್ನು ತಯಾರಿಸಿ ಈ ಹಕ್ಕುಪತ್ರವನ್ನು ಜಿಲ್ಲಾ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡುವ ಮೂಲಕ 2 ವರ್ಷಗಳ ಅವಧಿಯಲ್ಲಿ ಹೊಸ ಹಕ್ಕುಪತ್ರವನ್ನು ನೀಡಲಾಗುವುದು. ಅಲ್ಲಿಯವರೆಗೂ ಈ ಹಕ್ಕುಪತ್ರವನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಫಲಾನುಭವಿಗಳು ಬೇರೆ ಕಡೆ ನಿವೇಶನ ಹೊಂದಿದ್ದರೆ ಹಕ್ಕುಪತ್ರ ತನ್ನಿಂದ ತಾನೇ ರದ್ದಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಡಿಡಿಎಲ್ಆರ್ ಭಾವನಾ, ಧೂಡಾ ಆಯುಕ್ತ ಬಸವನಗೌಡ, ಎಡಿಎಲ್ಆರ್ ನಾಗಭೂಷಣ್ ಕಾರ್ಯಕ್ರಮದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>