ದಾವಣಗೆರೆ: ಪಾಲಿಕೆ ವ್ಯಾಪ್ತಿಯಲ್ಲಿ ಎಂಟು ಇಂದಿರಾ ಕ್ಯಾಂಟೀನ್ಗಳಿವೆ. ಲಾಕ್ಡೌನ್ ನೆಪದಲ್ಲಿ ಮುಚ್ಚಲಾಗಿದೆ. ಇಂದಿರಾ ಕ್ಯಾಂಟೀನ್ಗಳಲ್ಲಿ ಊಟ ಉಪಾಹಾರ ಒದಗಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದ ಮೇಲೆ ಇಲ್ಲಿ ಮೂರು ಕ್ಯಾಂಟೀನ್ಗಳನ್ನು ಮಾತ್ರ ತೆರೆಯಲಾಗಿದೆ. ಎಲ್ಲ 8 ಇಂದಿರಾ ಕ್ಯಾಂಟೀನ್ಗಳು ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್ ಒತ್ತಾಯಿಸಿದರು.