‘ಮುಚ್ಚಳಿಕೆ ಬರೆಸಿಕೊಂಡು ಎಂಟು ಕೈದಿಗಳನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿ, ಪೊಲೀಸ್ ವಾಹನದಲ್ಲಿ ಅವರ ಮನೆಗೆ ಕಳುಹಿಸಿಕೊಡಲಾಯಿತು. ಬೆಳಗಾವಿ ಜಿಲ್ಲೆಯ ಇಬ್ಬರು, ಚಿತ್ರದುರ್ಗ ಜಿಲ್ಲೆಯ ಒಬ್ಬ ಹಾಗೂ ದಾವಣಗೆರೆ ಜಿಲ್ಲೆಯ ಐದು ಕೈದಿಗಳಿದ್ದರು’ ಎಂದು ಜಿಲ್ಲಾ ಕಾರಾಗೃಹದ ಅಧೀಕ್ಷಕ ಕರ್ಣ ಬಿ. ಕ್ಷತ್ರಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.