ಕಾರಾಗೃಹದಲ್ಲಿರುವ ಯಾವ ಕೈದಿಗಳನ್ನು ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಬೇಕು ಎಂಬ ಬಗ್ಗೆ ನಿರ್ಧರಿಸಲು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದಕೆ.ವಿ. ಗೀತಾ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ಜಿಲ್ಲಾ ಕಾರಾಗೃಹದ ಅಧೀಕ್ಷಕರು ಸದಸ್ಯರಾಗಿರುವ ಈ ಸಮಿತಿಯ ಮುಂದೆ 17 ಕೈದಿಗಳ ಬಿಡುಗಡೆಗೆ ಪ್ರಸ್ತಾವ ಇಡಲಾಗಿತ್ತು. ಇವರ ಪೈಕಿ ಒಂದೇ ಪ್ರಕರಣದಲ್ಲಿ ಭಾಗಿಯಾಗಿರುವ ಎಂಟು ಕೈದಿಗಳನ್ನು ಮಾತ್ರ ಸದ್ಯಕ್ಕೆ ಬಿಡುಗಡೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಈ ಕೈದಿಗಳನ್ನು ಜೈಲಿನಿಂದ ಮನೆಗೆ ಕಳುಹಿಸಿಕೊಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.