<p><strong>ಚನ್ನಗಿರಿ:</strong> ಭಾವಸಾರ ಕ್ಷತ್ರಿಯ ದೈವ ಮಂಡಳಿ, ಮಹಿಳಾ ಭಜನಾ ಮಂಡಳಿ ಹಾಗೂ ಯುವಕ ಮಂಡಳಿಯ ಸಹಯೋಗದಲ್ಲಿ ಪಟ್ಟಣದಲ್ಲಿ 82ನೇ ವರ್ಷದ ದಿಂಡಿ ಮಹೋತ್ಸವ ಕಾರ್ಯಕ್ರಮ ಮಂಗಳವಾರ ಅದ್ದೂರಿಯಾಗಿ ನಡೆಯಿತು.</p>.<p>ದಿಂಡಿ ಎಂದರೆ ವೀಣೆ. ಸತ್ಸಂಗದಲ್ಲಿದ್ದು, ಭಗವಂತನ ಭಜನೆ, ಕೀರ್ತನೆ ಹಾಗೂ ಪ್ರವಚನ ಮಾಡುವ ಮೂಲಕ ಜನ್ಮದ ಸಾರ್ಥಕತೆ ಮಾಡಿಕೊಳ್ಳುವ ಧಾರ್ಮಿಕ ಸಮಾರಂಭವೇ ದಿಂಡಿ ಮಹೋತ್ಸವ. ಪಂಡರಿ ಸಂಪ್ರದಾಯದಂತೆ ಈ ದಿಂಡಿ ಮಹೋತ್ಸವವನ್ನು ಪ್ರತಿ ವರ್ಷ ಪಟ್ಟಣದಲ್ಲಿ ಆಚರಿಸಲಾಗುತ್ತದೆ.</p>.<p>82ನೇ ವರ್ಷದ ದಿಂಡಿ ಮಹೋತ್ಸವದ ಅಂಗವಾಗಿ ಪಟ್ಟಣದ ವಿಠ್ಠಲ ರುಕುಮಾಯಿ ದೇವಸ್ಥಾನದಿಂದ ಹೊರಟ ಮೆರವಣಿಗೆಯು ತಾಳ, ಮೃದಂಗ, ವೀಣೆ, ಬಾಳಗೋಪಾಳ ಹಾಗೂ ಭಜನೆಯೊಂದಿಗೆ ಪಾಂಡುರಂಗ ವಿಠ್ಠಲನನ್ನು ಸ್ತುತಿಸುತ್ತ ಪ್ರಮುಖ ಬೀದಿಗಳಲ್ಲಿ ಸಾಗಿತು.</p>.<p>ಈ ದಿಂಡಿ ಮಹೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು ವಿಠ್ಠಲ ರುಕುಮಾಯಿ ದೇವಸ್ಥಾನದಲ್ಲಿ ನಡೆದವು. ಮೆರವಣಿಗೆಯ ನಂತರ ಹನುಮಂತರಾವ್ ರಂಗದೋಳ್ ಅವರು ಕಾಲಾ ಕೀರ್ತನೆ ಕಾರ್ಯಕ್ರಮ ನಡೆಸಿಕೊಟ್ಟರು. ಕೀರ್ತನೆಯ ನಂತರ ಭಾವಸಾರ ಕ್ಷತ್ರಿಯ ಸಮಾಜದವರಿಗೆ ಅನ್ನಸಂತರ್ಪಣೆ ಮಾಡಲಾಯಿತು.</p>.<p>ಸಮಾಜದ ಅಧ್ಯಕ್ಷ ಜಿ.ಪಿ.ರವಿಕುಮಾರ್, ಗೌರವಾಧ್ಯಕ್ಷ ಕೆ.ಟಿ. ಮಂಜುನಾಥರಾವ್, ಉಪಾಧ್ಯಕ್ಷ ಜಿ.ಎಂ. ರಘು, ಕಾರ್ಯದರ್ಶಿ ಬಿ.ಕೆ.ಎಂ. ರವಿಕುಮಾರ್, ಖಜಾಂಚಿ ಜಿ.ಆರ್. ರಾಘವೇಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ಭಾವಸಾರ ಕ್ಷತ್ರಿಯ ದೈವ ಮಂಡಳಿ, ಮಹಿಳಾ ಭಜನಾ ಮಂಡಳಿ ಹಾಗೂ ಯುವಕ ಮಂಡಳಿಯ ಸಹಯೋಗದಲ್ಲಿ ಪಟ್ಟಣದಲ್ಲಿ 82ನೇ ವರ್ಷದ ದಿಂಡಿ ಮಹೋತ್ಸವ ಕಾರ್ಯಕ್ರಮ ಮಂಗಳವಾರ ಅದ್ದೂರಿಯಾಗಿ ನಡೆಯಿತು.</p>.<p>ದಿಂಡಿ ಎಂದರೆ ವೀಣೆ. ಸತ್ಸಂಗದಲ್ಲಿದ್ದು, ಭಗವಂತನ ಭಜನೆ, ಕೀರ್ತನೆ ಹಾಗೂ ಪ್ರವಚನ ಮಾಡುವ ಮೂಲಕ ಜನ್ಮದ ಸಾರ್ಥಕತೆ ಮಾಡಿಕೊಳ್ಳುವ ಧಾರ್ಮಿಕ ಸಮಾರಂಭವೇ ದಿಂಡಿ ಮಹೋತ್ಸವ. ಪಂಡರಿ ಸಂಪ್ರದಾಯದಂತೆ ಈ ದಿಂಡಿ ಮಹೋತ್ಸವವನ್ನು ಪ್ರತಿ ವರ್ಷ ಪಟ್ಟಣದಲ್ಲಿ ಆಚರಿಸಲಾಗುತ್ತದೆ.</p>.<p>82ನೇ ವರ್ಷದ ದಿಂಡಿ ಮಹೋತ್ಸವದ ಅಂಗವಾಗಿ ಪಟ್ಟಣದ ವಿಠ್ಠಲ ರುಕುಮಾಯಿ ದೇವಸ್ಥಾನದಿಂದ ಹೊರಟ ಮೆರವಣಿಗೆಯು ತಾಳ, ಮೃದಂಗ, ವೀಣೆ, ಬಾಳಗೋಪಾಳ ಹಾಗೂ ಭಜನೆಯೊಂದಿಗೆ ಪಾಂಡುರಂಗ ವಿಠ್ಠಲನನ್ನು ಸ್ತುತಿಸುತ್ತ ಪ್ರಮುಖ ಬೀದಿಗಳಲ್ಲಿ ಸಾಗಿತು.</p>.<p>ಈ ದಿಂಡಿ ಮಹೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು ವಿಠ್ಠಲ ರುಕುಮಾಯಿ ದೇವಸ್ಥಾನದಲ್ಲಿ ನಡೆದವು. ಮೆರವಣಿಗೆಯ ನಂತರ ಹನುಮಂತರಾವ್ ರಂಗದೋಳ್ ಅವರು ಕಾಲಾ ಕೀರ್ತನೆ ಕಾರ್ಯಕ್ರಮ ನಡೆಸಿಕೊಟ್ಟರು. ಕೀರ್ತನೆಯ ನಂತರ ಭಾವಸಾರ ಕ್ಷತ್ರಿಯ ಸಮಾಜದವರಿಗೆ ಅನ್ನಸಂತರ್ಪಣೆ ಮಾಡಲಾಯಿತು.</p>.<p>ಸಮಾಜದ ಅಧ್ಯಕ್ಷ ಜಿ.ಪಿ.ರವಿಕುಮಾರ್, ಗೌರವಾಧ್ಯಕ್ಷ ಕೆ.ಟಿ. ಮಂಜುನಾಥರಾವ್, ಉಪಾಧ್ಯಕ್ಷ ಜಿ.ಎಂ. ರಘು, ಕಾರ್ಯದರ್ಶಿ ಬಿ.ಕೆ.ಎಂ. ರವಿಕುಮಾರ್, ಖಜಾಂಚಿ ಜಿ.ಆರ್. ರಾಘವೇಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>