ಮಹಾನಗರ ಪಾಲಿಕೆ ಸದಸ್ಯ ಎ. ನಾಗರಾಜ್, ‘ಗುರುರಾಜ್ನ ಪೋಷಕರು ಕೂಲಿ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಅನುದಾನಿತ ಶಾಲೆಯಾಗಿದ್ದರೂ ಅನಧಿಕೃತವಾಗಿ ₹ 2,000 ಶುಲ್ಕವನ್ನು ಪಡೆಯಲಾಗುತ್ತಿದೆ. ಈಗಾಗಲೇ ₹ 500 ಪಾವತಿಸಿದ್ದರಂತೆ. ಶಾಲೆಯ ಹಾಜರಾತಿ ಪುಸ್ತಕದಲ್ಲಿ ಆತ ಬೆಳಿಗ್ಗೆ ಬಂದಿರುವ ಬಗ್ಗೆ ಉಲ್ಲೇಖವಿದೆ. ಈ ಬಗ್ಗೆ ಬಿಇಒ ಹಾಗೂ ಡಿಡಿಪಿಐಗೆ ದೂರು ನೀಡಲಾಗಿದ್ದು, ಬಾಕಿ ಹಣ ತರುವಂತೆ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿ ಬೇಜವಾಬ್ದಾರಿತನ ಪ್ರದರ್ಶಿಸಿದ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.