ಕಬ್ಬು ಕಡಿಯುವ ಕೆಲಸಕ್ಕಾಗಿ ಕುಕ್ಕವಾಡದ ಶುಗರ್ ಫ್ಯಾಕ್ಟರಿಗೆ ಸೇರಿದ ಜಾಗದಲ್ಲಿ ಶೆಡ್ ಹಾಕಿಕೊಂಡು ವಾಸವಾಗಿದ್ದರು. ಗ್ರಾಮದ ಪ್ರವೀಣ ಅವರ ಜಮೀನಿನಲ್ಲಿ ಕಬ್ಬು ಕಟಾವು ಮಾಡಿ ಎತ್ತಿನ ಗಾಡಿಗೆ ತುಂಬಿಕೊಂಡು ಮೂವರು ಗಾಡಿಯಲ್ಲಿ ಕುಳಿತುಕೊಂಡು ಹೋಗುವಾಗ ಏಕಾಏಕಿ ವೇಗವಾಗಿ ಚಲಿಸಿದ್ದರಿಂದ ಪ್ರತಾಪ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಆಗ ಗಾಡಿಯ ಚಕ್ರವು ಅವನ ಮೇಲೆ ಹರಿದಿದೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಾಲಕ ಮೃತಪಟ್ಟಿದ್ದಾನೆ.