ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಪತ್ತೆಯಾಗಿದ್ದ ಬಾಲಕ ಕೆರೆಗೆ ಬಿದ್ದು ಸಾವು

Last Updated 13 ಸೆಪ್ಟೆಂಬರ್ 2021, 6:32 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಚಿಕ್ಕಮಣಿ ದೇವರಾಜು ಅರಸು ಬಡಾವಣೆಯಲ್ಲಿ ಮಾತು ಬಾರದ ಬಾಲಕ ಶನಿವಾರ ನಾಪತ್ತೆಯಾಗಿದ್ದ. ಭಾನುವಾರ ಟಿ.ವಿ. ಸ್ಟೇಷನ್‌ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಕಲ್ಲೇಶ್‌ ಅವರ ಮಗ ಗಣ್ಯ(7) ಮೃತಪಟ್ಟ ಬಾಲಕ. ಶನಿವಾರ ಮಧ್ಯಾಹ್ನ ಮನೆಯಿಂದ ಹೊರಗೆ ಹೋದ ಬಾಲಕ ನಾಪತ್ತೆಯಾಗಿದ್ದ. ಮನೆಯವರು ಹುಡುಕಿ ಪತ್ತೆಯಾಗದೇ ಇದ್ದಾಗ ಕೆಟಿಜೆ ನಗರ ಪೊಲೀಸರಿಗೆ ದೂರು ನೀಡಿದ್ದರು.

ಈಜು ಬಾರದ, ಮಾತು ಬಾರದ ಹುಡುಗ ಕೆರೆ ಬಳಿ ಹೋದಾಗ ಆಯತಪ್ಪಿ ಬಿದ್ದಿರಬೇಕು ಎಂದು ಶಂಕಿಸಲಾಗಿದೆ. ಕೆರೆಗೆ ಟ್ರೆಂಚ್‌ ಮಾಡದೇ ಮಹಾನಗರ ಪಾಲಿಕೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಮಗು ಮೃತಪಟ್ಟಿದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಾಲಕನ ಮನೆಯವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಮನೆಯವರ ಆಕ್ರಂದನ ಮುಗಿಲುಮುಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT