<p><strong>ದಾವಣಗೆರೆ:</strong> ಆಸ್ತಿಗಾಗಿ ಎರಡೂವರೆ ವರ್ಷದ ಮಗನನ್ಬು ಕೊಲೆ ಮಾಡಿದ ತಂದೆಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.</p>.<p>ಜಗಳೂರು ತಾಲ್ಲೂಕಿನ ಕಡಬನಕಟ್ಟೆ ರಾಘವೇಂದ್ರ ಶಿಕ್ಷೆಗೆ ಗುರಿಯಾದ ಆರೋಪಿ. ಈತನಿಗೆ ಸಿದ್ದಿಹಳ್ಳಿ ಗ್ರಾಮದ ಅರ್ಪಿತಾ ಎಂಬಾಕೆಯ ಜೊತೆ ವಿವಾಹವಾಗಿತ್ತು. ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ.</p>.<p>ದುಶ್ಚಟಗಳಿಗೆ ಬಲಿಯಾಗಿ ತನ್ನ ಆಸ್ತಿಯನ್ನು ಮಾರಾಟ ಮಾಡಿದ್ದ . ಪತ್ನಿ ಅರ್ಪಿತಾ ತನ್ನ ಏಕೈಕ ಪುತ್ರ ಪ್ರಣವ್ ಕೃಷ್ಣನಿಂದ ಪಾಲು ವಿಭಾಗದ ದಾವೆ ಸಲ್ಲಿಸಿದ್ದರು.</p>.<p>ಆರೋಪಿ ರಾಘವೇಂದ್ರ ಆಸ್ತಿ ಆಸೆಗಾಗಿ ಫೆ.23, 2017ರಂದು ಪ್ರಣವ್ ಕೃಷ್ಣನನ್ನು ಕೊಲೆ ಮಾಡಿದ್ದ. ಅಂದಿನ ಜಗಳೂರು ಸರ್ಕಲ್ ಇನ್ ಸ್ಪೆಕ್ಟರ್ ಲತಾ ಬಿ.ಕೆ. ಅವರು ತನಿಖೆ ಮಾಡಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶ ಕೆಂಗಬಾಲಯ್ಯ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದರು. ಸರ್ಕಾರಿ ಅಭಿಯೋಜಕ ಕೆ.ಕೆಂಚಪ್ಪ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಆಸ್ತಿಗಾಗಿ ಎರಡೂವರೆ ವರ್ಷದ ಮಗನನ್ಬು ಕೊಲೆ ಮಾಡಿದ ತಂದೆಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.</p>.<p>ಜಗಳೂರು ತಾಲ್ಲೂಕಿನ ಕಡಬನಕಟ್ಟೆ ರಾಘವೇಂದ್ರ ಶಿಕ್ಷೆಗೆ ಗುರಿಯಾದ ಆರೋಪಿ. ಈತನಿಗೆ ಸಿದ್ದಿಹಳ್ಳಿ ಗ್ರಾಮದ ಅರ್ಪಿತಾ ಎಂಬಾಕೆಯ ಜೊತೆ ವಿವಾಹವಾಗಿತ್ತು. ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ.</p>.<p>ದುಶ್ಚಟಗಳಿಗೆ ಬಲಿಯಾಗಿ ತನ್ನ ಆಸ್ತಿಯನ್ನು ಮಾರಾಟ ಮಾಡಿದ್ದ . ಪತ್ನಿ ಅರ್ಪಿತಾ ತನ್ನ ಏಕೈಕ ಪುತ್ರ ಪ್ರಣವ್ ಕೃಷ್ಣನಿಂದ ಪಾಲು ವಿಭಾಗದ ದಾವೆ ಸಲ್ಲಿಸಿದ್ದರು.</p>.<p>ಆರೋಪಿ ರಾಘವೇಂದ್ರ ಆಸ್ತಿ ಆಸೆಗಾಗಿ ಫೆ.23, 2017ರಂದು ಪ್ರಣವ್ ಕೃಷ್ಣನನ್ನು ಕೊಲೆ ಮಾಡಿದ್ದ. ಅಂದಿನ ಜಗಳೂರು ಸರ್ಕಲ್ ಇನ್ ಸ್ಪೆಕ್ಟರ್ ಲತಾ ಬಿ.ಕೆ. ಅವರು ತನಿಖೆ ಮಾಡಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶ ಕೆಂಗಬಾಲಯ್ಯ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದರು. ಸರ್ಕಾರಿ ಅಭಿಯೋಜಕ ಕೆ.ಕೆಂಚಪ್ಪ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>