‘ಕಲಬುರ್ಗಿ, ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಮೈಸೂರು ಹಾಗೂ ಮಂಗಳೂರು ನಗರಗಳಲ್ಲಿಸಿಡಿಪಿ ಪ್ಲಾನ್ ಆಗಿಲ್ಲ. ಜನರಿಗೆ ಎಲ್ಲೆಲ್ಲಿ, ಯಾವ ರೀತಿ ಸಮಸ್ಯೆಯಾಗಿದೆ ಎಂಬುದನ್ನು ಮನಗಂಡು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಅನೇಕ ಬದಲಾವಣೆ ತರಲು ಕಾರ್ಯೋನ್ಮುಖರಾಗುತ್ತೇವೆ. ಬಹಳ ದಿನಗಳ ಈ ಸಮಸ್ಯೆ ಮುಕ್ತಿ ಕಾಣುವ ಹಂತಕ್ಕೆ ಬಂದಿದೆ’ ಎಂದು ಹೇಳಿದರು.