<p><strong>ದಾವಣಗೆರೆ: </strong>2018ರಲ್ಲಿ ಉದ್ದೇಶಿಸಲಾಗಿದ್ದ ಸಮಗ್ರ ನಗರ ಅಭಿವೃದ್ಧಿ ಯೋಜನೆಯನ್ನು ಈವರೆಗೂ ಅಂದುಕೊಂಡಂತೆ ರೂಪಿಸಲು ಆಗಿಲ್ಲ. ಬೆಂಗಳೂರಿನಲ್ಲಿ ಸೋಮವಾರ ನಡೆಯುವ ಉನ್ನತ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಹೊಸ ಆಯಾಮ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.</p>.<p>ದಾವಣಗೆರೆಯಲ್ಲಿ ಭಾನುವಾರ ಕ್ರೆಡಾಯ್ ನೂತನ ಕೇಂದ್ರದ ಉದ್ಘಾಟನೆ ಮತ್ತು ಅನುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಲಬುರ್ಗಿ, ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಮೈಸೂರು ಹಾಗೂ ಮಂಗಳೂರು ನಗರಗಳಲ್ಲಿಸಿಡಿಪಿ ಪ್ಲಾನ್ ಆಗಿಲ್ಲ. ಜನರಿಗೆ ಎಲ್ಲೆಲ್ಲಿ, ಯಾವ ರೀತಿ ಸಮಸ್ಯೆಯಾಗಿದೆ ಎಂಬುದನ್ನು ಮನಗಂಡು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಅನೇಕ ಬದಲಾವಣೆ ತರಲು ಕಾರ್ಯೋನ್ಮುಖರಾಗುತ್ತೇವೆ. ಬಹಳ ದಿನಗಳ ಈ ಸಮಸ್ಯೆ ಮುಕ್ತಿ ಕಾಣುವ ಹಂತಕ್ಕೆ ಬಂದಿದೆ’ ಎಂದು ಹೇಳಿದರು.</p>.<p>‘ಪ್ರತಿ 10 ವರ್ಷಗಳಿಗೊಮ್ಮೆ ಸಮಗ್ರ ನಗರ ಅಭಿವೃದ್ಧಿ ಯೋಜನೆ ರೂಪಿತವಾಗುತ್ತಿದೆ. 2008ರಲ್ಲಿ ರೂಪಿಸಲಾಗಿತ್ತು. 2018ರ ಯೋಜನೆ ಈವರೆಗೂ ಅನುಷ್ಠಾನಕ್ಕೆ ಬಂದಿಲ್ಲ ಎಂದು ಕ್ರೆಡಾಯ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅಜಯ್ಕುಮಾರ್ ಅವರು ಸಚಿವರ ಗಮನಕ್ಕೆ ತಂದರು. ಈ ವೇಳೆ ಮೇಲಿನಂತೆ ಸಚಿವರು ಪ್ರತಿಕ್ರಿಯಿಸಿದರು.</p>.<p>‘ರಿಯಲ್ ಎಸ್ಟೇಟ್ ಉದ್ಯಮಿಗಳು ಬಡಾವಣೆಗಳನ್ನು ಅಭಿವೃದ್ಧಿಪಡಿಸುವಾಗ ಮೂಲಸೌಲಭ್ಯಗಳನ್ನು ಸಮಪರ್ಕವಾಗಿ ಕಲ್ಪಿಸಬೇಕು. ಅರ್ಧಂಬರ್ಧ ಕಾಮಗಾರಿಗಳನ್ನು ಮಾಡಿದರೆ ಜನರಿಗೆ ತೊಂದರೆಯಾಗಲಿದೆ. ಇದರಿಂದಾಗಿ ಶುಲ್ಕ ವಸೂಲಾತಿಗೆ ಹೊಡೆತ ಬೀಳಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>2018ರಲ್ಲಿ ಉದ್ದೇಶಿಸಲಾಗಿದ್ದ ಸಮಗ್ರ ನಗರ ಅಭಿವೃದ್ಧಿ ಯೋಜನೆಯನ್ನು ಈವರೆಗೂ ಅಂದುಕೊಂಡಂತೆ ರೂಪಿಸಲು ಆಗಿಲ್ಲ. ಬೆಂಗಳೂರಿನಲ್ಲಿ ಸೋಮವಾರ ನಡೆಯುವ ಉನ್ನತ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಹೊಸ ಆಯಾಮ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.</p>.<p>ದಾವಣಗೆರೆಯಲ್ಲಿ ಭಾನುವಾರ ಕ್ರೆಡಾಯ್ ನೂತನ ಕೇಂದ್ರದ ಉದ್ಘಾಟನೆ ಮತ್ತು ಅನುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಲಬುರ್ಗಿ, ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಮೈಸೂರು ಹಾಗೂ ಮಂಗಳೂರು ನಗರಗಳಲ್ಲಿಸಿಡಿಪಿ ಪ್ಲಾನ್ ಆಗಿಲ್ಲ. ಜನರಿಗೆ ಎಲ್ಲೆಲ್ಲಿ, ಯಾವ ರೀತಿ ಸಮಸ್ಯೆಯಾಗಿದೆ ಎಂಬುದನ್ನು ಮನಗಂಡು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಅನೇಕ ಬದಲಾವಣೆ ತರಲು ಕಾರ್ಯೋನ್ಮುಖರಾಗುತ್ತೇವೆ. ಬಹಳ ದಿನಗಳ ಈ ಸಮಸ್ಯೆ ಮುಕ್ತಿ ಕಾಣುವ ಹಂತಕ್ಕೆ ಬಂದಿದೆ’ ಎಂದು ಹೇಳಿದರು.</p>.<p>‘ಪ್ರತಿ 10 ವರ್ಷಗಳಿಗೊಮ್ಮೆ ಸಮಗ್ರ ನಗರ ಅಭಿವೃದ್ಧಿ ಯೋಜನೆ ರೂಪಿತವಾಗುತ್ತಿದೆ. 2008ರಲ್ಲಿ ರೂಪಿಸಲಾಗಿತ್ತು. 2018ರ ಯೋಜನೆ ಈವರೆಗೂ ಅನುಷ್ಠಾನಕ್ಕೆ ಬಂದಿಲ್ಲ ಎಂದು ಕ್ರೆಡಾಯ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅಜಯ್ಕುಮಾರ್ ಅವರು ಸಚಿವರ ಗಮನಕ್ಕೆ ತಂದರು. ಈ ವೇಳೆ ಮೇಲಿನಂತೆ ಸಚಿವರು ಪ್ರತಿಕ್ರಿಯಿಸಿದರು.</p>.<p>‘ರಿಯಲ್ ಎಸ್ಟೇಟ್ ಉದ್ಯಮಿಗಳು ಬಡಾವಣೆಗಳನ್ನು ಅಭಿವೃದ್ಧಿಪಡಿಸುವಾಗ ಮೂಲಸೌಲಭ್ಯಗಳನ್ನು ಸಮಪರ್ಕವಾಗಿ ಕಲ್ಪಿಸಬೇಕು. ಅರ್ಧಂಬರ್ಧ ಕಾಮಗಾರಿಗಳನ್ನು ಮಾಡಿದರೆ ಜನರಿಗೆ ತೊಂದರೆಯಾಗಲಿದೆ. ಇದರಿಂದಾಗಿ ಶುಲ್ಕ ವಸೂಲಾತಿಗೆ ಹೊಡೆತ ಬೀಳಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>