<p><strong>ದಾವಣಗೆರೆ:</strong> ತಾಲ್ಲೂಕಿನ ಲೋಕಿಕೆರೆಯ ಬಳಿ ಶ್ರೀಗಂಧವನ್ನು ಮಾರಾಟ ಮಾಡಲು ಯತ್ನಿಸಿದ ಇಬ್ಬರನ್ನು ಬಂಧಿಸಿರುವ ಪೊಲೀಸರು ₹ 1.90 ಲಕ್ಷ ಮೌಲ್ಯದ 19 ಕೆ.ಜಿ. 456 ಗ್ರಾಂ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಲೋಕಿಕೆರೆ ಹಾಗೂ ಯಲ್ಲಮ್ಮನಗರದ ನಿವಾಸಿ ಗಂಗಾಧರಪ್ಪ ಮತ್ತು ಈತನ ಸಹಚರ ಶಿವಮೊಗ್ಗ ನಿವಾಸಿ ಚೆಲುವ ಬಂಧಿತರು.</p>.<p>ಸಿಪಿಐ ಮಂಜುನಾಥ ಸಿಬ್ಬಂದಿಯೊಂದಿಗೆ ಗಸ್ತಿನಲ್ಲಿದ್ದಾಗ ಮಾಹಿತಿಯನ್ನಾಧರಿಸಿ ಅರಣ್ಯ ಇಲಾಖೆಯ ಡಿಆರ್ಎಫ್ ಡಿ. ರಾಮಚಂದ್ರಪ್ಪ ಅವರೊಂದಿಗೆ ಧಾವಿಸಿ ಆರೋಪಿ ಮನೆಯಲ್ಲಿ ಸಂಗ್ರಹಿಸಿದ್ದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ.</p>.<p>ಡಿವೈಎಸ್ಪಿ ನರಸಿಂಹ ವಿ. ತಾಮ್ರಧ್ವಜ ನೇತೃತ್ವದಲ್ಲಿ ಸಿಪಿಐ ಮಂಜುನಾಥ, ಹದಡಿ ಠಾಣೆಯ ಪಿಎಸ್ಐ ಪ್ರಸಾದ್, ಸಿಬ್ಬಂದಿ ಮಂಜುನಾಥ, ವಿಶ್ವನಾಥ, ಶಿವಕುಮಾರ್, ವೀರಭದ್ರಪ್ಪ, ಅಣ್ಣಪ್ಪ, ಸಿದ್ದೇಶ್, ಚಾಲಕ ಅಶೋಕ್ ಪಾಲ್ಗೊಂಡಿದ್ದರು.</p>.<p>ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಅವರು ಬಹುಮಾನ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ತಾಲ್ಲೂಕಿನ ಲೋಕಿಕೆರೆಯ ಬಳಿ ಶ್ರೀಗಂಧವನ್ನು ಮಾರಾಟ ಮಾಡಲು ಯತ್ನಿಸಿದ ಇಬ್ಬರನ್ನು ಬಂಧಿಸಿರುವ ಪೊಲೀಸರು ₹ 1.90 ಲಕ್ಷ ಮೌಲ್ಯದ 19 ಕೆ.ಜಿ. 456 ಗ್ರಾಂ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಲೋಕಿಕೆರೆ ಹಾಗೂ ಯಲ್ಲಮ್ಮನಗರದ ನಿವಾಸಿ ಗಂಗಾಧರಪ್ಪ ಮತ್ತು ಈತನ ಸಹಚರ ಶಿವಮೊಗ್ಗ ನಿವಾಸಿ ಚೆಲುವ ಬಂಧಿತರು.</p>.<p>ಸಿಪಿಐ ಮಂಜುನಾಥ ಸಿಬ್ಬಂದಿಯೊಂದಿಗೆ ಗಸ್ತಿನಲ್ಲಿದ್ದಾಗ ಮಾಹಿತಿಯನ್ನಾಧರಿಸಿ ಅರಣ್ಯ ಇಲಾಖೆಯ ಡಿಆರ್ಎಫ್ ಡಿ. ರಾಮಚಂದ್ರಪ್ಪ ಅವರೊಂದಿಗೆ ಧಾವಿಸಿ ಆರೋಪಿ ಮನೆಯಲ್ಲಿ ಸಂಗ್ರಹಿಸಿದ್ದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ.</p>.<p>ಡಿವೈಎಸ್ಪಿ ನರಸಿಂಹ ವಿ. ತಾಮ್ರಧ್ವಜ ನೇತೃತ್ವದಲ್ಲಿ ಸಿಪಿಐ ಮಂಜುನಾಥ, ಹದಡಿ ಠಾಣೆಯ ಪಿಎಸ್ಐ ಪ್ರಸಾದ್, ಸಿಬ್ಬಂದಿ ಮಂಜುನಾಥ, ವಿಶ್ವನಾಥ, ಶಿವಕುಮಾರ್, ವೀರಭದ್ರಪ್ಪ, ಅಣ್ಣಪ್ಪ, ಸಿದ್ದೇಶ್, ಚಾಲಕ ಅಶೋಕ್ ಪಾಲ್ಗೊಂಡಿದ್ದರು.</p>.<p>ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಅವರು ಬಹುಮಾನ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>