<p>ದಾವಣಗೆರೆ: ಪ್ರತಿಭಾವಂತ ಕಲಾವಿದರನ್ನು ಗುರುತಿಸಲು ಚಿತ್ರಸಂತೆ ಅನ್ನುವ ಕಲ್ಪನೆ ದೊಡ್ಡ ವೇದಿಕೆಯಾಗಿದೆ. ಆ ಮೂಲಕ ಕಲಾವಿದರು ತಮ್ಮ ಚಿತ್ರಗಳನ್ನು ಮಾರುಕಟ್ಟೆ ಮಾಡಲು ಅನುಕೂಲ ಆಗಲಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಹೇಳಿದರು.</p>.<p>ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಗುರುವಾರ ಚಿತ್ರಸಂತೆ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ಕಲಾವಿದರು, ಅಷ್ಟೇ ಏಕೆ ದೃಶ್ಯ ಕಲಾ ವಿದ್ಯಾರ್ಥಿಗಳಿಗೆ ತಮ್ಮ ಕಲೆಯನ್ನು ಪ್ರದರ್ಶಿಸಲು ಅವಕಾಶ ನೀಡಲಾಗಿದೆ. ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.</p>.<p>ವಿದ್ಯಾರ್ಥಿಗಳ ಭವಿಷ್ಯ ತಮ್ಮ ಕೈಯಲ್ಲಿದೆ. ಅದನ್ನು ಉಪಯೋಗಿಸುವ ಜಾಣ್ಮೆ ಹೊಂದುವುದು ಅವಶ್ಯಕ. ಉತ್ಸವ, ಅಭಿಮಾನದಿಂದ ಯಾರು ಈ ಕೆಲಸ ಮಾಡುತ್ತಾರೆ ಅವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ ಎಂದು ಹೇಳಿದರು.</p>.<p>ತ್ರಸಂತೆ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಜಿ. ಅಜಯ ಕುಮಾರ್, ‘ಬೆಂಗಳೂರಿನಲ್ಲಿ ಸಿಮೀತವಾಗಿದ್ದ ಚಿತ್ರಸಂತೆಯನ್ನು ಮಧ್ಯ ಕರ್ನಾಟಕಕ್ಕೂ ವಿಸ್ತರಿಸಲಾಗುತ್ತಿದೆ. ಜನವರಿ 30ರಂದು ನಗರದಲ್ಲಿ ಚಿತ್ರಸಂತೆಯನ್ನು ಆಯೋಜನೆ ಮಾಡಲಾಗಿದೆ’ ಎಂದು ಹೇಳಿದರು.</p>.<p>ಚಿತ್ರಸಂತೆ ಇತಿಹಾಸ ಪುಟ ಸೇರುವ ಕಾರ್ಯಕ್ರಮವಾಗಿದೆ. ಚಿತ್ರ ಕಲಾವಿದರಿಗೆ ಒಂದು ಉತ್ತಮ ವೇದಿಕೆ ಕಲ್ಪಿಸುವ ಜೊತೆಗೆ ಅವರ ಚಿತ್ರಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.</p>.<p>ಒಬ್ಬ ಕಲಾವಿದ ತನ್ನ ಕಲ್ಪನೆಯಲ್ಲಿ ಮೂಡಿಸಿದ ಚಿತ್ರಗಳಿಗೆ ಒಂದು ಉತ್ತಮವಾದ ಮಾರುಕಟ್ಟೆ ಒದಗಿಸಬೇಕು. ಅದಕ್ಕಾಗಿ ರಾಜ್ಯದ ವಿವಿಧ ಮೂಲೆಗಳಿಂದ ಚಿತ್ರಕಲಾವಿದರು ಇದರಲ್ಲಿ ಭಾಗಹಿಸುವಂತೆ ಮಾಡುವ ನಿಟ್ಟಿನಲ್ಲಿ ಮುಂದಾಗಿದ್ದೇವೆ. ಅದರಲ್ಲೂ ದೃಶ್ಯ ಮಹಾವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ವೇದಿಕೆ ಆಗಲಿದೆ ಎಂದು ತಿಳಿಸಿದರು.</p>.<p>ಚಿತ್ರಸಂತೆ ಮಾಡಿದರೆ ಸಾಲದು, ಉತ್ತಮ ಚಿತ್ರಗಳನ್ನು ಗುರಿತಿಸಿ ಅಂಥ ಚಿತ್ರಗಳ ಕಲಾವಿದರಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಬಹುಮಾನ ನೀಡಲಾಗುವುದು. ಹಾಗೆಯೇ ಉತ್ರಮ ಸ್ಟಾಲ್ಗೆ ಬಹುಮಾನ ಇಡಲಾಗಿದೆ. ನಗರದ ಸಂಘ-ಸಂಸ್ಥೆಗಳು, ಕಲಾವಿದರು ಇದಕ್ಕೆ ಹೆಚ್ಚಿನ ಪ್ರೋತ್ಸಾಹ, ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ದೃಶ್ಯಕಲಾ ಮಹಾವಿದ್ಯಾನಿಲಯದ ಸಂಯೋಜನಾಧಿಕಾರಿ ಡಾ. ಸತೀಶ್ ಕುಮಾರ್ ಪಿ. ವಲ್ಲೇಪುರೆ ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಕಾರ್ಯದರ್ಶಿ ಶೇಷಾಚಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೇಮಲತಾ, ಮಧು ಪ್ರಾರ್ಥಿಸಿದರು. ದತ್ತಾತ್ರೇಯ ಭಟ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಪ್ರತಿಭಾವಂತ ಕಲಾವಿದರನ್ನು ಗುರುತಿಸಲು ಚಿತ್ರಸಂತೆ ಅನ್ನುವ ಕಲ್ಪನೆ ದೊಡ್ಡ ವೇದಿಕೆಯಾಗಿದೆ. ಆ ಮೂಲಕ ಕಲಾವಿದರು ತಮ್ಮ ಚಿತ್ರಗಳನ್ನು ಮಾರುಕಟ್ಟೆ ಮಾಡಲು ಅನುಕೂಲ ಆಗಲಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಹೇಳಿದರು.</p>.<p>ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಗುರುವಾರ ಚಿತ್ರಸಂತೆ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ಕಲಾವಿದರು, ಅಷ್ಟೇ ಏಕೆ ದೃಶ್ಯ ಕಲಾ ವಿದ್ಯಾರ್ಥಿಗಳಿಗೆ ತಮ್ಮ ಕಲೆಯನ್ನು ಪ್ರದರ್ಶಿಸಲು ಅವಕಾಶ ನೀಡಲಾಗಿದೆ. ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.</p>.<p>ವಿದ್ಯಾರ್ಥಿಗಳ ಭವಿಷ್ಯ ತಮ್ಮ ಕೈಯಲ್ಲಿದೆ. ಅದನ್ನು ಉಪಯೋಗಿಸುವ ಜಾಣ್ಮೆ ಹೊಂದುವುದು ಅವಶ್ಯಕ. ಉತ್ಸವ, ಅಭಿಮಾನದಿಂದ ಯಾರು ಈ ಕೆಲಸ ಮಾಡುತ್ತಾರೆ ಅವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ ಎಂದು ಹೇಳಿದರು.</p>.<p>ತ್ರಸಂತೆ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಜಿ. ಅಜಯ ಕುಮಾರ್, ‘ಬೆಂಗಳೂರಿನಲ್ಲಿ ಸಿಮೀತವಾಗಿದ್ದ ಚಿತ್ರಸಂತೆಯನ್ನು ಮಧ್ಯ ಕರ್ನಾಟಕಕ್ಕೂ ವಿಸ್ತರಿಸಲಾಗುತ್ತಿದೆ. ಜನವರಿ 30ರಂದು ನಗರದಲ್ಲಿ ಚಿತ್ರಸಂತೆಯನ್ನು ಆಯೋಜನೆ ಮಾಡಲಾಗಿದೆ’ ಎಂದು ಹೇಳಿದರು.</p>.<p>ಚಿತ್ರಸಂತೆ ಇತಿಹಾಸ ಪುಟ ಸೇರುವ ಕಾರ್ಯಕ್ರಮವಾಗಿದೆ. ಚಿತ್ರ ಕಲಾವಿದರಿಗೆ ಒಂದು ಉತ್ತಮ ವೇದಿಕೆ ಕಲ್ಪಿಸುವ ಜೊತೆಗೆ ಅವರ ಚಿತ್ರಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.</p>.<p>ಒಬ್ಬ ಕಲಾವಿದ ತನ್ನ ಕಲ್ಪನೆಯಲ್ಲಿ ಮೂಡಿಸಿದ ಚಿತ್ರಗಳಿಗೆ ಒಂದು ಉತ್ತಮವಾದ ಮಾರುಕಟ್ಟೆ ಒದಗಿಸಬೇಕು. ಅದಕ್ಕಾಗಿ ರಾಜ್ಯದ ವಿವಿಧ ಮೂಲೆಗಳಿಂದ ಚಿತ್ರಕಲಾವಿದರು ಇದರಲ್ಲಿ ಭಾಗಹಿಸುವಂತೆ ಮಾಡುವ ನಿಟ್ಟಿನಲ್ಲಿ ಮುಂದಾಗಿದ್ದೇವೆ. ಅದರಲ್ಲೂ ದೃಶ್ಯ ಮಹಾವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ವೇದಿಕೆ ಆಗಲಿದೆ ಎಂದು ತಿಳಿಸಿದರು.</p>.<p>ಚಿತ್ರಸಂತೆ ಮಾಡಿದರೆ ಸಾಲದು, ಉತ್ತಮ ಚಿತ್ರಗಳನ್ನು ಗುರಿತಿಸಿ ಅಂಥ ಚಿತ್ರಗಳ ಕಲಾವಿದರಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಬಹುಮಾನ ನೀಡಲಾಗುವುದು. ಹಾಗೆಯೇ ಉತ್ರಮ ಸ್ಟಾಲ್ಗೆ ಬಹುಮಾನ ಇಡಲಾಗಿದೆ. ನಗರದ ಸಂಘ-ಸಂಸ್ಥೆಗಳು, ಕಲಾವಿದರು ಇದಕ್ಕೆ ಹೆಚ್ಚಿನ ಪ್ರೋತ್ಸಾಹ, ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ದೃಶ್ಯಕಲಾ ಮಹಾವಿದ್ಯಾನಿಲಯದ ಸಂಯೋಜನಾಧಿಕಾರಿ ಡಾ. ಸತೀಶ್ ಕುಮಾರ್ ಪಿ. ವಲ್ಲೇಪುರೆ ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಕಾರ್ಯದರ್ಶಿ ಶೇಷಾಚಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೇಮಲತಾ, ಮಧು ಪ್ರಾರ್ಥಿಸಿದರು. ದತ್ತಾತ್ರೇಯ ಭಟ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>