<p><strong>ದಾವಣಗೆರೆ</strong>: ದಶಕಗಳಿಂದ ಇರುವರೇಲ್ವೆ ಕೆಳ ಸೇತುವೆ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಎಸ್.ಟಿ. ವೀರೇಶ್ ಹೇಳಿದರು.</p>.<p>ಬುಧವಾರ ರಾತ್ರಿ ಸುರಿದ ಮಳೆಗೆ ಪಾಲಿಕೆ ಎದುರಿನ ರೇಲ್ವೆ ಕೆಳ ಸೇತುವೆಯಲ್ಲಿ ನೀರು ನಿಂತಿದ್ದ ಸ್ಥಳಕ್ಕೆ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಪಾಲಿಕೆ ಹಾಗೂ ರೈಲ್ವೆ ಇಲಾಖೆ ಎಂಜಿನಿಯರ್ಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಪ್ರತಿ ಮಳೆಗಾಲದಲ್ಲೂ ಕೆಳ ಸೇತುವೆಯಲ್ಲಿ ಅಪಘಾತ ಸಾಮಾನ್ಯವಾಗಿದೆ. ಸಣ್ಣ ಮಳೆ ಬಂದರೂ ನೀರು ನಿಲ್ಲುತ್ತಿತ್ತು. ಮೂರ್ನಾಲ್ಕು ತಿಂಗಳ ಹಿಂದೆಯೇ ಎಂಜಿನಿಯರ್ಗಳ ಜತೆಗೆ ಚರ್ಚಿಸಿ ಈ ಬಾರಿ ಮಳೆಗಾಲ ಬರುವ ಮುಂಚೆಯೇ ಶಾಶ್ವತ ಪರಿಹಾರ ಕಂಡುಕೊಳ್ಳಲು ಸೂಚಿಸಿದ್ದೆ. ಇನ್ನು ಮುಂದೆ ನೀರು ಬಂದ ತಕ್ಷಣ ಮೋಟರ್ ನೀರು ಎತ್ತಿಹಾಕುತ್ತದೆ’ ಎಂದು ತಿಳಿಸಿದರು.</p>.<p>ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ‘ರೇಲ್ವೆ ಕೆಳ ಸೇತುವೆ ಸಮಸ್ಯೆ ಬಹಳ ವರ್ಷಗಳಿಂದ ಇದೆ. ಇದಕ್ಕೆ ಮೇಯರ್ ಹೇಳಿದಂತೆ ಸೆನ್ಸಾರ್ ಮೋಟರ್ ಇಟ್ಟು ನೀರನ್ನು ಹೊರ ಹಾಕಲಾಗುವುದು. ಈ ವ್ಯವಸ್ಥೆ ಯಶಸ್ವಿಯಾದರೆ ಇದೇ ಮಾದರಿಯನ್ನು ಎಲ್ಲ ಕಡೆ ಅನುಸರಿಸಲಾಗುವುದು’ ಎಂದು ತಿಳಿಸಿದರು.</p>.<p>ಪಾಲಿಕೆ ಕಾಂಗ್ರೆಸ್ ಸದಸ್ಯ ಚಮನ್ಸಾಬ್, ‘ಮಳೆಗಾಲದಲ್ಲಿ ಹಳೇಭಾಗಕ್ಕೆ ಬರಲು ಸಮಸ್ಯೆಯಾಗುತ್ತಿತ್ತು. ಮೇಯರ್ ಮತ್ತು ಅಧಿಕಾರಿಗಳು ಸೇರಿ ಒಂದು ಹೊಸ ಪರಿಹಾರ ಹುಡುಕಿರುವುದು ಶ್ಲಾಘನೀಯ’ ಎಂದರು.</p>.<p>ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್, ಶಿವನಗೌಡ ಪಾಟೀಲ್, ಸಾಮಾಜಿಕ ಕಾರ್ಯಕರ್ತ ಎಂ.ಜಿ. ಶ್ರೀಕಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ದಶಕಗಳಿಂದ ಇರುವರೇಲ್ವೆ ಕೆಳ ಸೇತುವೆ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಎಸ್.ಟಿ. ವೀರೇಶ್ ಹೇಳಿದರು.</p>.<p>ಬುಧವಾರ ರಾತ್ರಿ ಸುರಿದ ಮಳೆಗೆ ಪಾಲಿಕೆ ಎದುರಿನ ರೇಲ್ವೆ ಕೆಳ ಸೇತುವೆಯಲ್ಲಿ ನೀರು ನಿಂತಿದ್ದ ಸ್ಥಳಕ್ಕೆ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಪಾಲಿಕೆ ಹಾಗೂ ರೈಲ್ವೆ ಇಲಾಖೆ ಎಂಜಿನಿಯರ್ಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಪ್ರತಿ ಮಳೆಗಾಲದಲ್ಲೂ ಕೆಳ ಸೇತುವೆಯಲ್ಲಿ ಅಪಘಾತ ಸಾಮಾನ್ಯವಾಗಿದೆ. ಸಣ್ಣ ಮಳೆ ಬಂದರೂ ನೀರು ನಿಲ್ಲುತ್ತಿತ್ತು. ಮೂರ್ನಾಲ್ಕು ತಿಂಗಳ ಹಿಂದೆಯೇ ಎಂಜಿನಿಯರ್ಗಳ ಜತೆಗೆ ಚರ್ಚಿಸಿ ಈ ಬಾರಿ ಮಳೆಗಾಲ ಬರುವ ಮುಂಚೆಯೇ ಶಾಶ್ವತ ಪರಿಹಾರ ಕಂಡುಕೊಳ್ಳಲು ಸೂಚಿಸಿದ್ದೆ. ಇನ್ನು ಮುಂದೆ ನೀರು ಬಂದ ತಕ್ಷಣ ಮೋಟರ್ ನೀರು ಎತ್ತಿಹಾಕುತ್ತದೆ’ ಎಂದು ತಿಳಿಸಿದರು.</p>.<p>ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ‘ರೇಲ್ವೆ ಕೆಳ ಸೇತುವೆ ಸಮಸ್ಯೆ ಬಹಳ ವರ್ಷಗಳಿಂದ ಇದೆ. ಇದಕ್ಕೆ ಮೇಯರ್ ಹೇಳಿದಂತೆ ಸೆನ್ಸಾರ್ ಮೋಟರ್ ಇಟ್ಟು ನೀರನ್ನು ಹೊರ ಹಾಕಲಾಗುವುದು. ಈ ವ್ಯವಸ್ಥೆ ಯಶಸ್ವಿಯಾದರೆ ಇದೇ ಮಾದರಿಯನ್ನು ಎಲ್ಲ ಕಡೆ ಅನುಸರಿಸಲಾಗುವುದು’ ಎಂದು ತಿಳಿಸಿದರು.</p>.<p>ಪಾಲಿಕೆ ಕಾಂಗ್ರೆಸ್ ಸದಸ್ಯ ಚಮನ್ಸಾಬ್, ‘ಮಳೆಗಾಲದಲ್ಲಿ ಹಳೇಭಾಗಕ್ಕೆ ಬರಲು ಸಮಸ್ಯೆಯಾಗುತ್ತಿತ್ತು. ಮೇಯರ್ ಮತ್ತು ಅಧಿಕಾರಿಗಳು ಸೇರಿ ಒಂದು ಹೊಸ ಪರಿಹಾರ ಹುಡುಕಿರುವುದು ಶ್ಲಾಘನೀಯ’ ಎಂದರು.</p>.<p>ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್, ಶಿವನಗೌಡ ಪಾಟೀಲ್, ಸಾಮಾಜಿಕ ಕಾರ್ಯಕರ್ತ ಎಂ.ಜಿ. ಶ್ರೀಕಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>